ಸಿಟಿ ರವಿ 
ರಾಜಕೀಯ

ಕೇರಳದಂತೆ ನಾವು ಸಹ ಸಾಲದ ಸುಳಿಯಲ್ಲಿ ಸಿಲುಕಿದ್ದೇವೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಟಿ ರವಿ ವಾಗ್ದಾಳಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಆರ್ಥಿಕ ನೀತಿಗಳು ಕರ್ನಾಟಕವನ್ನು ಹಾಳು ಮಾಡುತ್ತಿದೆ ಎಂದು ಶುಕ್ರವಾರ ಆರೋಪಿಸಿದ ಬಿಜೆಪಿ ನಾಯಕ ಸಿಟಿ ರವಿ, ಕೇರಳದಂತೆಯೇ ನಾವು ಸಾಲದ ಸುಳಿಯಲ್ಲಿ ಸಿಲುಕಿದ್ದೇವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಆರ್ಥಿಕ ನೀತಿಗಳು ಕರ್ನಾಟಕವನ್ನು ಹಾಳು ಮಾಡುತ್ತಿದೆ ಎಂದು ಶುಕ್ರವಾರ ಆರೋಪಿಸಿದ ಬಿಜೆಪಿ ನಾಯಕ ಸಿಟಿ ರವಿ, ಕೇರಳದಂತೆಯೇ ನಾವು ಸಾಲದ ಸುಳಿಯಲ್ಲಿ ಸಿಲುಕಿದ್ದೇವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, “ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲದಿದ್ದರೆ ಕಾಶ್ಮೀರದಲ್ಲಿ ಮತ್ತೆ 370 ನೇ ವಿಧಿ ಹೇರುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. ನಂತರ ಮತ್ತೆ ಸೈನಿಕರ ಮೇಲೆ ಕಲ್ಲು ತೂರಾಟ ಆರಂಭವಾಗುತ್ತದೆ. ಅವರು ಮತ್ತೆ ಬಾಬ್ರಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಮತ್ತೆ ಎಲ್ಲಾ ಯೋಜನೆಗಳು ಮುಗಿಯುತ್ತವೆ ಎಂದು ಹೇಳಿದರು.

ಕಾಂಗ್ರೆಸ್ ಯಾವಾಗಲೂ ಸೈನಿಕರ ಬಗ್ಗೆ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದೆ. ಸೈನಿಕರ ಮೇಲೆ ಅನುಮಾನ ವ್ಯಕ್ತಪಡಿಸುವವರು ಯಾರು? ಅಂತಹವರ ಬಗ್ಗೆ ನಾವು ಏನು ಹೇಳುತ್ತೇವೆ? ಪುಲ್ವಾಮಾ ದಾಳಿಗೆ ಯಾರು ಹೊಣೆ ಎಂದು ನಮಗೆಲ್ಲರಿಗೂ ತಿಳಿದಿದೆ. ಸರ್ಜಿಕಲ್ ಸ್ಟ್ರೈಕ್ ನಿಂದ ಉಗ್ರರ ತರಬೇತಿ ಕೇಂದ್ರವನ್ನು ಧ್ವಂಸಗೊಳಿಸಲಾಯಿತು ಎಂಬುದು ನಮಗೆ ತಿಳಿದಿದೆ. ಪಾಕಿಸ್ತಾನ ಈ ವಿಚಾರಕ್ಕೆ ವಿಶ್ವಸಂಸ್ಥೆಯ ಮೊರೆ ಹೋಗಿತ್ತು.ಆಗಲೂ ಕಾಂಗ್ರೆಸ್‌ ಈ ವಿಚಾರದಲ್ಲಿ ಸಂಶಯ ವ್ಯಕ್ತಪಡಿಸಿತ್ತು. ಆ ಪಕ್ಷಕ್ಕೆ ಸನಾತನ ಧರ್ಮ ಮತ್ತು ಸೈನಿಕರ ಬಗ್ಗೆ ಅನುಮಾನವಿದೆ. ದೇಶಪ್ರೇಮಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆ ಅವರು ಸದಾ ಅನುಮಾನ ವ್ಯಕ್ತಪಡಿಸುತ್ತಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT