ಪ್ರಿಯಾಂಕ್ ಖರ್ಗೆ 
ರಾಜಕೀಯ

RSS ಸಮೀಕ್ಷೆ ಪ್ರಕಾರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನ ಸಹ ಗೆಲ್ಲುವುದಿಲ್ಲ: ಪ್ರಿಯಾಂಕ್ ಖರ್ಗೆ

ಆರ್‌ಎಸ್‌ಎಸ್‌ನ ಆಂತರಿಕ ಸಮೀಕ್ಷೆ ಪ್ರಕಾರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳನ್ನು ಸಹ ಗೆಲ್ಲುವುದಿಲ್ಲ ಮತ್ತು ರಾಜ್ಯದಲ್ಲಿ ಎಂಟು ಸ್ಥಾನಗಳನ್ನು ದಾಟುವುದಿಲ್ಲ.

ಬೆಂಗಳೂರು: ಆರ್‌ಎಸ್‌ಎಸ್‌ನ ಆಂತರಿಕ ಸಮೀಕ್ಷೆ ಪ್ರಕಾರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳನ್ನು ಸಹ ಗೆಲ್ಲುವುದಿಲ್ಲ ಮತ್ತು ರಾಜ್ಯದಲ್ಲಿ ಎಂಟು ಸ್ಥಾನಗಳನ್ನು ದಾಟುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಶನಿವಾರ ಹೇಳಿದ್ದಾರೆ.

ಬರ ಪರಿಹಾರ ಕೋರಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವಲ್ಲಿ ರಾಜ್ಯ ಸರ್ಕಾರದ ಕಡೆಯಿಂದ ವಿಳಂಬವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ "ಸುಳ್ಳು" ಹೇಳಿದ್ದಾರೆ. ಅವರು "ತಪ್ಪು ಮಾಹಿತಿಯ ಮಂತ್ರಿ" ಆಗಿರಬೇಕು ಎಂದು ಟೀಕಿಸಿದ್ದಾರೆ.

ಆರ್‌ಎಸ್‌ಎಸ್‌ನ ಆಂತರಿಕ ಸಮೀಕ್ಷೆಯಲ್ಲಿ ಬಿಜೆಪಿಗೆ 200 ಸೀಟು ಬರುವುದಿಲ್ಲ ಎಂದು ಆರ್‌ಎಸ್‌ಎಸ್‌ ಹೇಳುತ್ತಿದೆ. ರಾಜ್ಯದಲ್ಲಿ ಬಿಜೆಪಿ ಎಂಟು ಸೀಟು ದಾಟುವುದಿಲ್ಲ. ಹದಿನಾಲ್ಕರಿಂದ ಹದಿನೈದು ಸೀಟುಗಳಲ್ಲಿ ಅವರು ಹೇಗೆ ಗೆಲ್ಲುತ್ತಾರೆ?" ಎಂದು ಖರ್ಗೆ ಪ್ರಶ್ನಿಸಿದರು.

“ಅವರು(ಕೆಲವು ಬಿಜೆಪಿ ನಾಯಕರು) ಒಂದು ಕುಟುಂಬದಿಂದ ಬಿಜೆಪಿ (ರಾಜ್ಯದಲ್ಲಿ) ಕಲುಷಿತವಾಗಿದೆ ಎಂದು ಹೇಳುತ್ತಿದ್ದಾರೆ, ಅವರು ಮೂಲ ಬಿಜೆಪಿಯನ್ನು ಮರುಸ್ಥಾಪಿಸಲು ಬಯಸುತ್ತಿರುವುದಾಗಿ ಹೇಳುತ್ತಿದ್ದಾರೆ. ನಾವು ಅದನ್ನು ಹೇಳುತ್ತೇವೆಯೇ? ಇಲ್ಲ, ಅವರೇ(ಬಿಜೆಪಿ) ಬಿಜೆಪಿಯಲ್ಲಿ ಹಿಂದುತ್ವವಾದಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ಸಿಟಿ ರವಿ, ಅನಂತ್‌ಕುಮಾರ್ ಹೆಗಡೆ, ಈಶ್ವರಪ್ಪ ಅವರಿಗೆ ಅನ್ಯಾಯವಾಗುತ್ತಿದೆ ಎಂದು ಹೇಳುತ್ತಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza deal: ಹಮಾಸ್‌ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗು

ನಾನು ಜೋಕರ್ ರೀತಿ ನಿಂತಿದ್ದೆ: ಏಷ್ಯಾಕಪ್ ಟ್ರೋಫಿ ಖಾಸಗಿ ವ್ಯಕ್ತಿಯ ಆಸ್ತಿಯಲ್ಲ, BCCI ಉಪಾಧ್ಯಕ್ಷರ ಪ್ರಶ್ನೆಗೆ ನಖ್ವಿ ತತ್ತರ!

Rahul Security: ರಾಹುಲ್, ಸೋನಿಯಾ, ಪ್ರಿಯಾಂಕಾ ಜೀವಕ್ಕೆ ಅಪಾಯ: ಭದ್ರತೆ ಹೆಚ್ಚಳಕ್ಕೆ ಕಾಂಗ್ರೆಸ್ ಒತ್ತಾಯ

High court stays: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ!

ಬೆಂಗಳೂರಿನ ಐದು ಹೊಸ ಪಾಲಿಕೆಗಳಿಗೆ 368 ವಾರ್ಡ್ ರಚನೆ: ಪಶ್ಚಿಮ ಪಾಲಿಕೆಗೆ ಗರಿಷ್ಠ 111 ವಾರ್ಡ್

SCROLL FOR NEXT