ಪ್ರಜ್ವಲ್ ರೇವಣ್ಣ 
ರಾಜಕೀಯ

ಲೋಕಸಭೆ ಚುನಾವಣೆ 2024: RSS ಕ್ಷಮೆಯಾಚಿಸಿದ ಹಾಸನ JDS ಅಭ್ಯರ್ಥಿ ಪ್ರಜ್ವಲ್ ರೇವಣ್ಣ

ಹಾಸನ ಮತ್ತು ಸಕಲೇಶಪುರದಲ್ಲಿ ನಡೆದ ಜಂಟಿ ಪ್ರಚಾರ ಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ವಿರುದ್ಧದ ಹೇಳಿಕೆಗಾಗಿ ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಭಾನುವಾರ ಕ್ಷಮೆಯಾಚಿಸಿದ್ದಾರೆ.

ಹಾಸನ: ಹಾಸನ ಮತ್ತು ಸಕಲೇಶಪುರದಲ್ಲಿ ನಡೆದ ಜಂಟಿ ಪ್ರಚಾರ ಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ವಿರುದ್ಧದ ಹೇಳಿಕೆಗಾಗಿ ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಭಾನುವಾರ ಕ್ಷಮೆಯಾಚಿಸಿದ್ದಾರೆ.

ಜೆಡಿಎಸ್ ಯುವ ಕಾರ್ಯಕರ್ತರು ಎಚ್ಚೆತ್ತುಕೊಂಡರೆ ಅವರು (ಆರ್‌ಎಸ್ಎಸ್ ಮತ್ತು ಪದಾಧಿಕಾರಿಗಳು) ಓಡಿ ಹೋಗುತ್ತಾರೆ ಎಂದು ಪ್ರಜ್ವಲ್ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಆರ್‌ಎಸ್‌ಎಸ್ ಅನ್ನು ವ್ಯಂಗ್ಯವಾಡಿದ ಪ್ರಜ್ವಲ್, ಜೆಡಿಎಸ್ ಯುವ ಕಾರ್ಯಕರ್ತರನ್ನು ಸಿಂಹಗಳಿಗೆ ಹೋಲಿಸಿದ್ದರು.

ಬ್ರಾಹ್ಮಣ ಸಮುದಾಯದವರು ಉಪಸ್ಥಿತರಿದ್ದ ಹಾಸನದಲ್ಲಿ ಚುನಾವಣಾ ಪ್ರಚಾರದ ವೇಳೆ ಕ್ಷಮೆಯಾಚಿಸಿದ ಪ್ರಜ್ವಲ್, ತನಗೆ ಆರೆಸ್ಸೆಸ್ ಮತ್ತು ಅದರ ಪದಾಧಿಕಾರಿಗಳ ಜವಾಬ್ದಾರಿಗಳ ಬಗ್ಗೆ ತಿಳಿದಿಲ್ಲ. ಅಜ್ಞಾನದಿಂದ ಆರ್‌ಎಸ್‌ಎಸ್ ಬಗ್ಗೆ ಈ ಹೇಳಿಕೆ ನೀಡಿದ್ದೇನೆ. ನನ್ನ ಗಮನಕ್ಕೆ ಬಾರದೆ ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದೇನೆ. ಆದರೆ, ಇವತ್ತು ಅರಿವಾಗಿದೆ. ಹೀಗಾಗಿ, ನಿಮ್ಮೆಲ್ಲರ ಕ್ಷಮೆ ಕೇಳುತ್ತೇನೆ ಎಂದು ಹೇಳಿದರು.

ನಂತರ, ಆರೆಸ್ಸೆಸ್ ಮತ್ತು ಅದರ ಕಾರ್ಯಕರ್ತರು ಏನನ್ನೂ ನಿರೀಕ್ಷಿಸದೆ ಸಮಾಜ ಮತ್ತು ರಾಷ್ಟ್ರದ ಕಲ್ಯಾಣಕ್ಕಾಗಿ ಕೆಲಸ ಮಾಡಲು ಬದ್ಧರಾಗಿದ್ದಾರೆ ಎಂಬುದನ್ನು ತಾನು ಅರಿತುಕೊಂಡಿದ್ದೇನೆ ಎಂದರು.

ಪ್ರಜ್ವಲ್ ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಆರ್‌ಎಸ್‌ಎಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್ ಮುಖಂಡ ಹಾಗೂ ಬ್ರಾಹ್ಮಣ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಟಿಸಿ ಅನಂತಸುಬ್ಬರಾವ್, ಹಾಸನ ಜಿಪಂ ಮಾಜಿ ಅಧ್ಯಕ್ಷ ಸತ್ಯನಾರಾಯಣ, ಬಿಜೆಪಿ ಮುಖಂಡ ಹಾಗೂ ಅರಸೀಕೆರೆ ಟಿಎಂಸಿ ಮಾಜಿ ಅಧ್ಯಕ್ಷ ಎನ್‌ಡಿ ಪ್ರಸಾದ್ ಅವರ ಸಮ್ಮುಖದಲ್ಲಿ ಪ್ರಜ್ವಲ್ ಕ್ಷಮೆಯಾಚಿಸಿದರು.

ಆರ್‌ಎಸ್‌ಎಸ್‌ ಬಗ್ಗೆ ತಿಳಿದುಕೊಳ್ಳದೆ ಮಾತನಾಡಿದ್ದೇನೆ, ಈ ಸಭೆಯಲ್ಲಿ ಆರ್‌ಎಸ್‌ಎಸ್‌ ಮುಖಂಡರು, ಕಾರ್ಯಕರ್ತರಿದ್ದರೆ ನನ್ನನ್ನು ಕ್ಷಮಿಸಿ. ಕಳೆದ ಐದು ವರ್ಷಗಳಲ್ಲಿ ನಾನು ಸಣ್ಣಪುಟ್ಟ ತಪ್ಪುಗಳನ್ನು ಮಾಡಿದ್ದರೆ ಕ್ಷಮಿಸಿ. ಯುವಕ ನಡೆಯುವಾಗ ಎಡವುತ್ತಾನೆ. ಈಗ ಎಡವಿರಬಹುದು. ತಪ್ಪು ತಿದ್ದಿಕೋ‌ ಎಂದು ಸಂದೇಶ ಕೊಟ್ಟರೆ ಕೈ ಮುಗಿದು ನಮಸ್ಕಾರ ಮಾಡುತ್ತೇನೆ. ದಯವಿಟ್ಟು ನನ್ನ ಮೇಲೆ ವಿಶ್ವಾಸವಿಡಿ. ತಪ್ಪುಗಳನ್ನು ಸರಿ ಮಾಡಿಕೊಂಡು ಯಾರಿಗೂ ಕೆಟ್ಟ ಹೆಸರು ಬಾರದೆ ಕೆಲಸ ಮಾಡುತ್ತೇನೆ ಎಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT