ಕೆಎಸ್ ಈಶ್ವರಪ್ಪ 
ರಾಜಕೀಯ

ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿ, ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ: ವಿಜಯೇಂದ್ರಗೆ ಈಶ್ವರಪ್ಪ ತಿರುಗೇಟು

ಸ್ಪರ್ಧೆಗಿಳಿಯದಂತೆ ನಿಮ್ಮಣ್ಣ ರಾಘವೇಂದ್ರಗೆ ಹೇಳು, ನೀನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡು, ಆಗ ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ...

ಶಿವಮೊಗ್ಗ: ಸ್ಪರ್ಧೆಗಿಳಿಯದಂತೆ ನಿಮ್ಮಣ್ಣ ರಾಘವೇಂದ್ರಗೆ ಹೇಳು, ನೀನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡು, ಆಗ ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆಂದು ವಿಜಯೇಂದ್ರ ಅವರಿಗೆ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಕಾಲ ಮಿಂಚಿಲ್ಲ. ಪಕ್ಷಕ್ಕೆ ವಾಪಸ್ ಬನ್ನಿ. ಸಮಸ್ಯೆ ಇದ್ದರೆ ಹೈಕಮಾಂಡ್ ಜೊತೆ ಮಾತನಾಡಿ' ಎಂಬ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಡಿರುವ ಮನವಿಗೆ ಈಶ್ವರಪ್ಪ ಅವರು ಭಾನುವಾರ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದರು.

ಕೇಂದ್ರದ ನಾಯಕರು ಈಶ್ವರಪ್ಪನವರ ಜೊತೆ ಮಾತಾಡುತ್ತಾರೆ ಎಂದು ಹೇಳಲು ನಿನಗೆ ಅಧಿಕಾರ ಕೊಟ್ಟವನು ಯಾರು? ಎಲ್ಲಾ ಅಧಿಕಾರ ಯಡಿಯೂರಪ್ಪ ಮತ್ತು ಮಕ್ಕಳ ಕೈಯಲ್ಲಿ ಇರಬೇಕಾ? ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ನೀನು ಬಿಟ್ಟು‌ಕೊಡು. ಜನರ ದಾರಿ ತಪ್ಪಿಸುವ ಕೆಲಸ ಮಾಡಬೇಡ. ಎಲ್ಲರ ನೋವು ಪರಿಹಾರ ಆಗುತ್ತದೆ ಎಂದು ವಿಜಯೇಂದ್ರ ವಿರುದ್ಧ ಏಕವಚನದಲ್ಲಿ ಹರಿಹಾಯ್ದರು.

ಯಡಿಯೂರಪ್ಪ ಅವರು ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರಾಗಿದ್ದಾರೆ, ಅವರ ಪುತ್ರ ರಾಘವೇಂದ್ರ ಸಂಸದರಾಗಿದ್ದಾರೆ. ವಿಜಯೇಂದ್ರ ಸ್ವತಃ ಶಾಸಕರಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ತಮ್ಮ ಕುಟುಂಬದ ಒಬ್ಬರಿಗೆ ನೀಡಬೇಕೆಂದು ಆರು ತಿಂಗಳ ಕಾಲ ಆ ಸ್ಥಾನ ಖಾಲಿ ಇರಿಸಲಾಗಿತ್ತು. ಯಡಿಯೂರಪ್ಪ ಮತ್ತು ಅವರ ಮಕ್ಕಳ ಕೈಯಲ್ಲಿ ಎಲ್ಲಾ ಅಧಿಕಾರ ಇರಬೇಕೇ?

ಸ್ಪರ್ಧೆ ಮಾಡಬೇಡಿ ಎಂದು ಹೇಳುವ ಮೊದಲು ನಿಮ್ಮ ಸಹೋದರನನ್ನು ಸ್ಪರ್ಧಿಸದಂತೆ ಹೇಳಿ. ನಾನು ಈಗಲೂ ಬಿಜೆಪಿ ಕಾರ್ಯಕರ್ತನೇ. ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಬಯಸಿದ್ದೇನೆ. ನಾನು ಸ್ಪರ್ಧಿಸಿದರೆ ಬಿಜೆಪಿ ಏನು ಮಾಡಲು ಸಾಧ್ಯ? ಪಕ್ಷದಿಂದ ಹೊರಹಾಕಬಹುದು ಅಲ್ಲವೇ? ಅದಷ್ಟನ್ನೇ ನೀವು ಮಾಡಲು ಸಾಧ್ಯ. ಆದರೆ, ಈ ಬಾರಿ ನಾನು 3 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತೇನೆ. ನನ್ನನ್ನು ಪಕ್ಷದಿಂದ ಹೊರಹಾಕಿದರೆ, ಗೆಲುವು ಬಳಿಕ ಮತ್ತೆ ಬಿಜೆಪಿಗೆ ಸೇರ್ಪಡೆಗೊಳ್ಳುತ್ತೇನೆಂದು ಹೇಳಿದರು.

ಇದೇ ವೇಳೆ ಸಮಾನತೆಯನ್ನು ಬಯಸುವುದೇ ಆದರೆ, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಲಿಂಗಾಯತರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್, ಒಕ್ಕಲಿಗನಾಗಿರುವ ನನಗೆ ಅಥವಾ ಪಕ್ಷದ ನಾಯನಾಗಿರುವ ಸಿಟಿ ರವಿ, ಒಬಿಸಿ ನಾಯಕರಿಗೆ ನೀಡಲಿ ಎಂದು ಯಡಿಯೂರಪ್ಪ ಅವರಿಗೆ ಸವಾಲು ಹಾಕಿದರು.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್, ಲಿಂಗಾಯತ ಅಥವಾ ಪಕ್ಷದ ಮುಖಂಡ ಸಿ.ಟಿ.ರವಿ, ಒಕ್ಕಲಿಗ ಅಥವಾ ಒಬಿಸಿಗೆ ನೀಡಲಿ ಎಂದು ಯಡಿಯೂರಪ್ಪ ಕುಟುಂಬಕ್ಕೆ ಸವಾಲು ಹಾಕಿದರು.

ದೆಹಲಿಯಲ್ಲಿ ವರಿಷ್ಠರ ಭೇಟಿ ಸಾಧ್ಯವಾಗದ ಕುರಿತು ಮಾತನಾಡಿ, ಉನ್ನತ ನಾಯಕರು ಭೇಟಿ ಮಾಡಲು ಸಿಗದೇ ಇರುವುದರ ಅರ್ಥ ಬಿಜೆಪಿಯನ್ನು ಯಡಿಯೂರಪ್ಪ ಕುಟುಂಬದಿಂದ ಮುಕ್ತಗೊಳಿಸಬೇಕೆಂಬುದಾಗಿದೆ. ಚುನಾವಣೆಯಲ್ಲಿ ರಾಘವೇಂದ್ರ ಅವರನ್ನು ಸೋಲಿಸಬೇಕೆಂಬುದಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ಬಂಗಾಳದಲ್ಲಿ CAA, UCC ತ್ವರಿತ ಅನುಷ್ಠಾನ; ಮಾತುವಾ, ನಮಸುದ್ರರಿಗೆ ಪೌರತ್ವ ನೀಡುತ್ತೇವೆ: ಪ್ರಧಾನಿ ಮೋದಿ

ಚಲಿಸುತ್ತಿದ್ದ ಐಶಾರಾಮಿ ಕಾರಿನಲ್ಲೇ 'ದಮ್ ಮಾರೋ ದಮ್'; ಸಿಗರೇಟ್ ರಸ್ತೆಗೆಸೆದ Yuzvendra Chahal? Video Viral

ಹಾರ್ಮುಜ್ ತೆರೆಯಲು ಇರಾನ್ ಪರದಾಟ: ಜಲಸಂಧಿ ನಿರ್ಬಂಧಿಸಲು ತಾನೇ ನೆಟ್ಟ ಮೈನ್ಸ್ ಹುಡುಕಲು ವಿಫಲ; ಹಾಗಾದ್ರೆ ಮುಂದೇನು?

ಇಸ್ಲಾಮಾಬಾದ್‌ಗೆ ಆಗಮಿಸಿದ ಜೆಡಿ ವ್ಯಾನ್ಸ್ ವಿಮಾನಕ್ಕೆ ಪಾಕ್‌ನ ಐದು ಎಫ್-16 ಎಸ್ಕಾರ್ಟ್; Video ನೋಡಿ

SCROLL FOR NEXT