ಗ್ರಾಮಸ್ಥರಿಂದ ಯತೀಂದ್ರ ಸಿದ್ದರಾಮಯ್ಯಗೆ ತರಾಟೆ  
ರಾಜಕೀಯ

ಮತ ಕೇಳಲು ಬಂದ ಸಿಎಂ ಪುತ್ರ ಯತೀಂದ್ರ ಮೇಲೆ ಗ್ರಾಮಸ್ಥರ ಆಕ್ರೋಶ; ಚುನಾವಣಾ ಬಹಿಷ್ಕಾರದ ಬೆದರಿಕೆ!

ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಚುನಾವಣಾ ಪ್ರಚಾರ ಮಾಡಲು ಬಂದಿದ್ದ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಸಿದ್ದರಾಮಯ್ಯಗೆ ಸ್ವಕ್ಷೇತ್ರದ ಜನ ಪ್ರತಿಭಟನೆ ನಡೆಸಿ ಈ ಬಾರಿ ನಾವು ಮತ ಚಲಾಯಿಸುವುದಿಲ್ಲ, ಚುನಾವಣಾ ಬಹಿಷ್ಕಾರ ಹಾಕುತ್ತೇವೆ ಎಂದು ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಮೈಸೂರು: ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಚುನಾವಣಾ ಪ್ರಚಾರ ಮಾಡಲು ಬಂದಿದ್ದ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಸಿದ್ದರಾಮಯ್ಯಗೆ ಸ್ವಕ್ಷೇತ್ರದ ಜನ ಪ್ರತಿಭಟನೆ ನಡೆಸಿ ಈ ಬಾರಿ ನಾವು ಮತ ಚಲಾಯಿಸುವುದಿಲ್ಲ, ಚುನಾವಣಾ ಬಹಿಷ್ಕಾರ ಹಾಕುತ್ತೇವೆ ಎಂದು ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಚುನಾವಣಾ ಬಹಿಷ್ಕಾರದ ಬೆದರಿಕೆ ಹಾಕಿರುವ ಪ್ರತಿಭಟನಾಕಾರರು, ಯತೀಂದ್ರರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಂಜನಗೂಡು ತಾಲೂಕು ಮಲ್ಲುಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿದೆ.

ಸಮಸ್ಯೆಯೇನು?: ನಂಜನಗೂಡು ತಾಲೂಕು ಮಲ್ಲುಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಬಳಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಲವು ದಿನಗಳಿಂದ ಈ ಪ್ರತಿಭಟನೆ ನಡೆಯುತ್ತಿದೆ.

ಈ ಮಧ್ಯೆ, ಚುನಾವಣಾ ಪ್ರಚಾರಕ್ಕಾಗಿ ಮಲ್ಲುಪುರಕ್ಕೆ ಭೇಟಿ ನೀಡಿದ ಯತೀಂದ್ರ ಪ್ರತಿಭಟನಾ ನಿರತ ರೈತರನ್ನು ಭೇಟಿಯಾಗಿ ಮತ ಯಾಚಿಸಿದರು. ಈ ವೇಳೆ, ಬೇಡಿಕೆಗಳನ್ನು ಈಡೇರಿಸುವಂತೆ ಯತೀಂದ್ರರನ್ನು ರೈತರು ಒತ್ತಾಯಿಸಿದರು.

ಚುನಾವಣೆಗೋಸ್ಕರ ಬಂದಿದ್ದೀರಿ: ಪ್ರತಿಭಟನಾ ನಿರತ ರೈತರು ಸಿಟ್ಟಾಗುತ್ತಿದ್ದಂತೆಯೇ ಅವರನ್ನು ಓಲೈಸಲು ಯತೀಂದ್ರ ಮುಂದಾದರು. ಆದರೆ, ಇದನ್ನು ಲೆಕ್ಕಿಸದ ರೈತರು, ಚುನಾವಣೆಗೋಸ್ಕರ ಇಲ್ಲಿಗೆ ಬಂದಿದ್ದೀರಿ. ಇಲ್ಲದಿದ್ದರೆ ನೀವು ಯಾವುದೇ ಕಾರಣಕ್ಕೂ ಬರುತ್ತಿರಲಿಲ್ಲ ಎಂದು ಆಕ್ರೋಶ‌ ವ್ಯಕ್ತಪಡಿಸಿದರು. ಕಾರ್ಖಾನೆಯವರು ನಮ್ಮ ಮಾತನ್ನು ಕೇಳುತ್ತಿಲ್ಲ ಎಂದು ರೈತರು ಹೇಳಿದರು. ಇದಕ್ಕುತ್ತರಿಸಿದ ಯತೀಂದ್ರ, ಇದನ್ನು ನಮ್ಮ ತಂದೆಯವರ ಗಮನಕ್ಕೆ ತರುತ್ತೇನೆ ಎಂದರು. ಇದನ್ನು ಕೇಳುತ್ತಿದ್ದಂತೆಯೇ ಕುಪಿತಗೊಂಡ ಪ್ರತಿಭಟನಾಕಾರರು, ಇನ್ನೂ ಈ ವಿಚಾರವನ್ನು ನಿಮ್ಮ ತಂದೆಯವರ ಗಮನಕ್ಕೆ ತಂದಿಲ್ಲವೇ ಎಂದು ಕೆರಳಿ ಕೆಂಡವಾದರು.

ನಮ್ಮ ಬೇಡಿಕೆಯನ್ನು ಈಗಲೇ ಈಡೇರಿಸಿ. ಇಲ್ಲದಿದ್ದರೆ, ಮೂರು ಗ್ರಾಮಗಳಲ್ಲಿ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ರೈತರು ಎಚ್ಚರಿಕೆ ನೀಡಿದರು. ಪ್ರತಿಭಟನಕಾರರಿಗೆ ಉತ್ತರಿಸಲಾಗದೆ ಯತೀಂದ್ರ ಅಲ್ಲಿಂದ ವಾಪಸಾದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT