ಗ್ರಾಮಸ್ಥರಿಂದ ಯತೀಂದ್ರ ಸಿದ್ದರಾಮಯ್ಯಗೆ ತರಾಟೆ  
ರಾಜಕೀಯ

ಮತ ಕೇಳಲು ಬಂದ ಸಿಎಂ ಪುತ್ರ ಯತೀಂದ್ರ ಮೇಲೆ ಗ್ರಾಮಸ್ಥರ ಆಕ್ರೋಶ; ಚುನಾವಣಾ ಬಹಿಷ್ಕಾರದ ಬೆದರಿಕೆ!

ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಚುನಾವಣಾ ಪ್ರಚಾರ ಮಾಡಲು ಬಂದಿದ್ದ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಸಿದ್ದರಾಮಯ್ಯಗೆ ಸ್ವಕ್ಷೇತ್ರದ ಜನ ಪ್ರತಿಭಟನೆ ನಡೆಸಿ ಈ ಬಾರಿ ನಾವು ಮತ ಚಲಾಯಿಸುವುದಿಲ್ಲ, ಚುನಾವಣಾ ಬಹಿಷ್ಕಾರ ಹಾಕುತ್ತೇವೆ ಎಂದು ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಮೈಸೂರು: ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಚುನಾವಣಾ ಪ್ರಚಾರ ಮಾಡಲು ಬಂದಿದ್ದ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಸಿದ್ದರಾಮಯ್ಯಗೆ ಸ್ವಕ್ಷೇತ್ರದ ಜನ ಪ್ರತಿಭಟನೆ ನಡೆಸಿ ಈ ಬಾರಿ ನಾವು ಮತ ಚಲಾಯಿಸುವುದಿಲ್ಲ, ಚುನಾವಣಾ ಬಹಿಷ್ಕಾರ ಹಾಕುತ್ತೇವೆ ಎಂದು ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಚುನಾವಣಾ ಬಹಿಷ್ಕಾರದ ಬೆದರಿಕೆ ಹಾಕಿರುವ ಪ್ರತಿಭಟನಾಕಾರರು, ಯತೀಂದ್ರರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಂಜನಗೂಡು ತಾಲೂಕು ಮಲ್ಲುಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿದೆ.

ಸಮಸ್ಯೆಯೇನು?: ನಂಜನಗೂಡು ತಾಲೂಕು ಮಲ್ಲುಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಬಳಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಲವು ದಿನಗಳಿಂದ ಈ ಪ್ರತಿಭಟನೆ ನಡೆಯುತ್ತಿದೆ.

ಈ ಮಧ್ಯೆ, ಚುನಾವಣಾ ಪ್ರಚಾರಕ್ಕಾಗಿ ಮಲ್ಲುಪುರಕ್ಕೆ ಭೇಟಿ ನೀಡಿದ ಯತೀಂದ್ರ ಪ್ರತಿಭಟನಾ ನಿರತ ರೈತರನ್ನು ಭೇಟಿಯಾಗಿ ಮತ ಯಾಚಿಸಿದರು. ಈ ವೇಳೆ, ಬೇಡಿಕೆಗಳನ್ನು ಈಡೇರಿಸುವಂತೆ ಯತೀಂದ್ರರನ್ನು ರೈತರು ಒತ್ತಾಯಿಸಿದರು.

ಚುನಾವಣೆಗೋಸ್ಕರ ಬಂದಿದ್ದೀರಿ: ಪ್ರತಿಭಟನಾ ನಿರತ ರೈತರು ಸಿಟ್ಟಾಗುತ್ತಿದ್ದಂತೆಯೇ ಅವರನ್ನು ಓಲೈಸಲು ಯತೀಂದ್ರ ಮುಂದಾದರು. ಆದರೆ, ಇದನ್ನು ಲೆಕ್ಕಿಸದ ರೈತರು, ಚುನಾವಣೆಗೋಸ್ಕರ ಇಲ್ಲಿಗೆ ಬಂದಿದ್ದೀರಿ. ಇಲ್ಲದಿದ್ದರೆ ನೀವು ಯಾವುದೇ ಕಾರಣಕ್ಕೂ ಬರುತ್ತಿರಲಿಲ್ಲ ಎಂದು ಆಕ್ರೋಶ‌ ವ್ಯಕ್ತಪಡಿಸಿದರು. ಕಾರ್ಖಾನೆಯವರು ನಮ್ಮ ಮಾತನ್ನು ಕೇಳುತ್ತಿಲ್ಲ ಎಂದು ರೈತರು ಹೇಳಿದರು. ಇದಕ್ಕುತ್ತರಿಸಿದ ಯತೀಂದ್ರ, ಇದನ್ನು ನಮ್ಮ ತಂದೆಯವರ ಗಮನಕ್ಕೆ ತರುತ್ತೇನೆ ಎಂದರು. ಇದನ್ನು ಕೇಳುತ್ತಿದ್ದಂತೆಯೇ ಕುಪಿತಗೊಂಡ ಪ್ರತಿಭಟನಾಕಾರರು, ಇನ್ನೂ ಈ ವಿಚಾರವನ್ನು ನಿಮ್ಮ ತಂದೆಯವರ ಗಮನಕ್ಕೆ ತಂದಿಲ್ಲವೇ ಎಂದು ಕೆರಳಿ ಕೆಂಡವಾದರು.

ನಮ್ಮ ಬೇಡಿಕೆಯನ್ನು ಈಗಲೇ ಈಡೇರಿಸಿ. ಇಲ್ಲದಿದ್ದರೆ, ಮೂರು ಗ್ರಾಮಗಳಲ್ಲಿ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ರೈತರು ಎಚ್ಚರಿಕೆ ನೀಡಿದರು. ಪ್ರತಿಭಟನಕಾರರಿಗೆ ಉತ್ತರಿಸಲಾಗದೆ ಯತೀಂದ್ರ ಅಲ್ಲಿಂದ ವಾಪಸಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!