ಡಿಕೆ ಶಿವಕುಮಾರ್ 
ರಾಜಕೀಯ

ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಲು ಕೇಂದ್ರಕ್ಕೆ ನಿರ್ದೇಶನ ನೀಡಿ: ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಮೊರೆ!

ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೆ ಲೋಕಸಭೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಂಗಳವಾರ ಚುನಾವಣಾ ಆಯೋಗದ ಕದ ತಟ್ಟಿದೆ.

ಬೆಂಗಳೂರು: ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೆ ಲೋಕಸಭೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಂಗಳವಾರ ಚುನಾವಣಾ ಆಯೋಗದ ಕದ ತಟ್ಟಿದ್ದು, ಬರ ಪರಿಹಾರ ಬಿಡುಗಡೆ ಮಾಡಲು ಕೇಂದ್ರಕ್ಕೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದೆ.

ಮಾಜಿ ಸಂಸದ ವಿ.ಎಸ್ ಉಗ್ರಪ್ಪ ನೇತೃತ್ವದ ಕಾಂಗ್ರೆಸ್ ನಿಯೋಗ ಇಂದು ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿ, ಉಪಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಚುನಾವಣಾ ಆಯೋಗಕ್ಕೆ ಬರೆದ ಮನವಿ ಪತ್ರವನ್ನು ಮುಖ್ಯ ಚುನಾವಣಾ ಅಧಿಕಾರಿಗೆ ಸಲ್ಲಿಸಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ಮತ್ತು ಹೆಚ್ಚುವರಿ ಬೆಂಬಲ ನಿಧಿಯಿಂದ 4,663 ಕೋಟಿ ರೂಪಾಯಿ ಹಾಗೂ ಭೀಕರ ಬರ ಪರಿಸ್ಥಿತಿಯನ್ನು ಎದುರಿಸಲು ರಾಜ್ಯಕ್ಕೆ ಹೆಚ್ಚುವರಿಯಾಗಿ 18,171 ಕೋಟಿ ರೂ. ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಡಿಕೆ ಶಿವಕಮನವಿ ಮಾಡಿದ್ದಾರೆ.

ಪತ್ರದಲ್ಲಿ ರಾಜ್ಯದ 224 ತಾಲೂಕುಗಳು ತೀವ್ರ ಬರಗಾಲ ಎದುರಿಸುತ್ತಿದೆ. 48 ಲಕ್ಷ ಹೆಕ್ಟೇರ್ ಬೆಳೆ ನಷ್ಟವಾಗಿದ್ದು, ಸುಮಾರು 37,000 ಕೋಟಿ ರೂ.‌ನಷ್ಟು ಹಾನಿಯಾಗಿದೆ. ಎನ್​ಡಿಆರ್​ಎಫ್​ ಪ್ರಕಾರ ಕನಿಷ್ಠ 4663 ಕೋಟಿ ರೂ. ಬೆಳೆ ಹಾನಿ ಪರಿಹಾರ ಅಗತ್ಯ ಇದೆ. ಈ ಸಂಬಂಧ ನವೆಂಬರ್​ನಲ್ಲಿ ಕೇಂದ್ರ ಸರ್ಕಾರಕ್ಕೆ ಬರ ನಷ್ಟದ ಮೆಮೊರಂಡಂ ಸಲ್ಲಿಸಲಾಗಿದೆ. ಆದರೆ, ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಬರ ಪರಿಹಾರ ಬಿಡುಗಡೆಗಾಗಿ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಬರ ಪರಿಹಾರ ಬಿಡುಗಡೆ ಸಂಬಂಧ ಕೇಂದ್ರ ಸರ್ಕಾರ ಮಲತಾಯಿ ದೋರಣೆ ತೋರುತ್ತಿದೆ. ಉದ್ದೇಶಪೂರ್ವಕವಾಗಿ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆಗೆ ವಿಳಂಬ ಮಾಡುತ್ತಿದೆ. ಈ ಸಂಬಂಧ ಪ್ರಧಾನಿ ಮೋದಿ, ಅಮಿತ್ ಶಾ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಏ.6ಕ್ಕೆ ತಮ್ಮ ಹೇಳಿಕೆಯಲ್ಲಿ ಮಾರ್ಚ್ 28ಕ್ಕೆ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಬರ ಪರಿಹಾರ ಮಂಜೂರಾತಿಗಾಗಿನ ಉನ್ನತ ಮಟ್ಟದ ಸಭೆ ಕರೆಯಲು ಅನುಮತಿ ನೀಡುವಂತೆ ಕೋರಲಾಗಿದೆ ಎಂದು ತಿಳಿಸಿದ್ದಾರೆ. ಚುನಾವಣಾ ಆಯೋಗ ಅನುಮತಿ ನೀಡದ ಕಾರಣ ವಿಳಂಬವಾಗಿದೆ ಎಂದು ಅವರೇ ಒಪ್ಪಿಕೊಂಡಿದ್ದಾರೆ ಎಂದು ವಿವರಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ವಿ.ಎಸ್.ಉಗ್ರಪ್ಪ, ರಾಜ್ಯದಲ್ಲಿ ತೀವ್ರವಾದ ಬರವಿದೆ. ಕೇಂದ್ರ ಸಮಿತಿ ಕಳೆದ ಅಕ್ಟೋಬರ್ ನಲ್ಲಿ‌ ಭೇಟಿ ನೀಡಿದ್ದರು. ಇಲ್ಲಿಯವರೆಗೆ ಕೇಂದ್ರ ಹೇಳಿಕೆ ಬಿಟ್ಟರೆ ಪರಿಹಾರ ಕೊಟ್ಟಿಲ್ಲ. ಕಾನೂನುಬದ್ಧವಾಗಿ ಸಿಗಬೇಕಾದ ಪರಿಹಾರ ಕೊಟ್ಟಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT