ಬಿಜೆಪಿ-ಜೆಡಿಎಸ್ ನಾಯಕರು  
ರಾಜಕೀಯ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಗೆಲುವಿಗೆ ಬಿಜೆಪಿ-ಜೆಡಿಎಸ್ ಮೈತ್ರಿ ಅಡ್ಡಿ?

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವು ರಾಜಧಾನಿ ಬೆಂಗಳೂರಿಗೆ ಸಮೀಪದಲ್ಲಿದೆ ಮಾತ್ರವಲ್ಲದೆ ನಗರ ಮತ್ತು ರಾಜ್ಯ ರಾಜಧಾನಿಯ ಭಾಗವೆಂದು ಪರಿಗಣಿಸಲಾದ ಹಲವಾರು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ.

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವು ರಾಜಧಾನಿ ಬೆಂಗಳೂರಿಗೆ ಸಮೀಪದಲ್ಲಿದೆ ಮಾತ್ರವಲ್ಲದೆ ನಗರ ಮತ್ತು ರಾಜ್ಯ ರಾಜಧಾನಿಯ ಭಾಗವೆಂದು ಪರಿಗಣಿಸಲಾದ ಹಲವಾರು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ.

ಚಿಕ್ಕಬಳ್ಳಾಪುರ ಕ್ಷೇತ್ರವು ಎಂಟು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ - ಗೌರಿಬಿದನೂರು, ಬಾಗೇಪಲ್ಲಿ, ಮತ್ತು ಚಿಕ್ಕಬಳ್ಳಾಪುರ (ಚಿಕ್ಕಬಳ್ಳಾಪುರ ಜಿಲ್ಲೆ), ಯಲಹಂಕ (ಬೆಂಗಳೂರು ನಗರ ಜಿಲ್ಲೆ), ಹೊಸಕೋಟೆ, ದೇವನಹಳ್ಳಿ, ಮತ್ತು ದೊಡ್ಡಬಳ್ಳಾಪುರ, ಮತ್ತು ನೆಲಮಂಗಲ (ಬೆಂಗಳೂರು ಗ್ರಾಮಾಂತರ ಜಿಲ್ಲೆ).

ಬೆಂಗಳೂರು ನಗರಕ್ಕೆ ಸಮೀಪದಲ್ಲಿದ್ದರೂ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವು ಕುಡಿಯುವ ನೀರಿನ ಕೊರತೆ, ನಿರುದ್ಯೋಗ ಮತ್ತು ಮೂಲಭೂತ ಸೌಕರ್ಯಗಳ ಕೊರತೆ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ, ವಿಶೇಷವಾಗಿ ಬಾಗೇಪಲ್ಲಿ ಮತ್ತು ಗೌರಿಬಿದನೂರಿನ ಗ್ರಾಮೀಣ ಪ್ರದೇಶಗಳಲ್ಲಿ ಮೂಲಭೂತ ಸಮಸ್ಯೆ ಹೆಚ್ಚಾಗಿದೆ. ಇದರ ಪರಿಣಾಮವಾಗಿ, ಕ್ಷೇತ್ರವು ನೆರೆಯ ನಗರ ವಸಾಹತುಗಳಿಗೆ, ಮುಖ್ಯವಾಗಿ ಬೆಂಗಳೂರಿಗೆ ಉದ್ಯೋಗಾವಕಾಶಗಳಿಗಾಗಿ ಜನರು ವಲಸೆ ಹೋಗುವುದು ಹೆಚ್ಚಾಗುತ್ತಿದೆ.

ರಾಜಕೀಯವಾಗಿ ಈ ಕ್ಷೇತ್ರ ಯಾವಾಗಲೂ ಕಾಂಗ್ರೆಸ್ ಭದ್ರಕೋಟೆಯಾಗಿದೆ. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ, ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟವು ಬಿಜೆಪಿಯ ಬಿಎನ್ ಬಚ್ಚೇಗೌಡರ ವಿರುದ್ಧ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯ್ಲಿ ಅವರನ್ನು ಕಣಕ್ಕಿಳಿಸಿತು. ಚಿಕ್ಕಬಳ್ಳಾಪುರದಿಂದ ಈ ಹಿಂದೆ ಎರಡು ಬಾರಿ (2009 ಮತ್ತು 2014) ಗೆದ್ದಿದ್ದ ಮೊಯ್ಲಿ ಅವರು ಬಚ್ಚೇಗೌಡರ ವಿರುದ್ಧ ಸೋತಿದ್ದರು, ಹೀಗಾಗಿ ಬಿಜೆಪಿ ಮೊದಲ ಬಾರಿಗೆ ಕ್ಷೇತ್ರವನ್ನು ಗೆದ್ದಿತು.

2024ಕ್ಕೆ ಈ ಬಾರಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿಯಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತವಿದೆ. ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿರುವ ಕಾಂಗ್ರೆಸ್‌ನ ರಕ್ಷಾ ರಾಮಯ್ಯ ವಿರುದ್ಧ ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿ ಕರ್ನಾಟಕದ ಮಾಜಿ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರನ್ನು ಕಣಕ್ಕಿಳಿಸಿದೆ. ರಕ್ಷಾ ರಾಮಯ್ಯ ಅವರು ಮಾಜಿ ಸಚಿವ ಎಂಆರ್ ಸೀತಾರಾಮ್ ಅವರ ಪುತ್ರ ಮತ್ತು ರಾಜಕಾರಣಿ ಮತ್ತು ಶಿಕ್ಷಣ ತಜ್ಞ ಎಂಎಸ್ ರಾಮಯ್ಯ ಅವರ ಮೊಮ್ಮಗ. ಇಬ್ಬರೂ ನಾಯಕರು ಲೋಕಸಭೆ ಚುನಾವಣೆಯಲ್ಲಿ ಚೊಚ್ಚಲ ಬಾರಿಗೆ ಪದಾರ್ಪಣೆ ಮಾಡುತ್ತಿದ್ದು, ಗೆಲ್ಲುವ ವಿಶ್ವಾಸದಲ್ಲಿದ್ದಾರೆ.

ಈ ಹಿಂದೆ ಮೂರು ಬಾರಿ ಚಿಕ್ಕಬಳ್ಳಾಪುರ ಭಾಗದಲ್ಲಿ ಗೆದ್ದು ವಿಧಾನಸೌಧ ಪ್ರವೇಶಿಸಿದ್ದ ಡಾ.ಸುಧಾಕರ್ ಕಳೆದ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದರು.

ರಾಮಯ್ಯ ಬಲಿಜ ಸಮುದಾಯಕ್ಕೆ ಸೇರಿದವರಾಗಿದ್ದು, ಬಾಗೇಪಲ್ಲಿ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಗಣನೀಯ ಸ್ಥಾನ ಪಡೆದಿದ್ದಾರೆ. ಒಕ್ಕಲಿಗ ಸಮುದಾಯದವರಾದ ಡಾ.ಸುಧಾಕರ್ ಅವರು ಬಿಜೆಪಿ ಆಡಳಿತದಲ್ಲಿ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಜಿಲ್ಲಾ ಸಚಿವರೂ ಆಗಿದ್ದರು. ಒಕ್ಕಲಿಗ, ಪರಿಶಿಷ್ಟ ಜಾತಿ ಇತರೆ ಸಮುದಾಯದ ಮತಗಳನ್ನು ಪಡೆಯುವ ವಿಶ್ವಾಸವಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಸುಮಾರು 2.25 ಲಕ್ಷ ಮತಗಳನ್ನು ಗಳಿಸಿದ ಜೆಡಿಎಸ್ ಬೆಂಬಲ ಡಾ.ಸುಧಾಕರ್‌ಗೆ ಅನುಕೂಲವಾಗಲಿದೆ.

ಮತ್ತೊಂದೆಡೆ, 2023 ರ ಚುನಾವಣೆಯಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಐದು ಕ್ಷೇತ್ರಗಳನ್ನು ಗೆದ್ದ ನಂತರ ರಕ್ಷಾ ರಾಮಯ್ಯ ಗೆಲುವು ಖಚಿತ. ರಕ್ಷಾ ರಾಮಯ್ಯ ಅವರ ಗೆಲುವಿಗೆ ಶ್ರಮಿಸುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಸೀತಾರಾಮ್ ಅವರ ನಿಕಟವರ್ತಿ ಎಂದು ಪರಿಗಣಿಸಲಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಬಲ್ಲ ಮೂಲಗಳು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ.

ಡಾ ಸುಧಾಕರ್ ಅವರು ಸೇರಿರುವ ಒಕ್ಕಲಿಗ ಸಮುದಾಯದಲ್ಲಿ ಕ್ಷೇತ್ರದಲ್ಲಿ ಶೇಕಡಾ 22.6ರಷ್ಟು ಮತದಾರರಿದ್ದು, ಶೇಕಡಾ 22ರಷ್ಟು ಎಸ್‌ಸಿಗಳು. ಅಲ್ಪಸಂಖ್ಯಾತರು ಶೇಕಡಾ 8.6 ರಷ್ಟಿದ್ದರೆ, ರಕ್ಷಾ ರಾಮಯ್ಯ ಅವರು ಸೇರಿದ ಬಲಿಜ ಸಮುದಾಯದಲ್ಲಿ ಶೇಕಡಾ 8 ರಷ್ಟಿದ್ದಾರೆ.

2023 ರ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಡಾ ಸುಧಾಕರ್ ಅವರಿಗೆ ಈ ಗೆಲುವು ಅನಿವಾರ್ಯವಾಗಿದೆ. ಕಳೆದ ಒಂದು ವರ್ಷದಿಂದ ಕಾಂಗ್ರೆಸ್ ಮುಖಂಡರ ಸಂಪರ್ಕದಲ್ಲಿರುವ ರಕ್ಷಾ ರಾಮಯ್ಯ ಅವರಿಗೆ ಪಕ್ಷದ ಹಿರಿಯ ನಾಯಕರ ಬೆಂಬಲವಿದ್ದು, 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಅಲೆಯೂ ದಕ್ಕಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT