ನಟಿ ರಮ್ಯಾ 
ರಾಜಕೀಯ

ಲೋಕ ಸಮರ 2024: ಸ್ಟಾರ್ ಚಂದ್ರು ಪರ ಮಂಡ್ಯ ಅಖಾಡಕ್ಕೆ ಮೋಹಕ ತಾರೆ ರಮ್ಯಾ ಎಂಟ್ರಿ..!

ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿಗೆ ಸಂಸದೆ ಸುಮಲತಾ ಬೆಂಬಲ ಸೂಚಿಸಿದ ಬೆನ್ನಲ್ಲೇ, ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮಾಜಿ ಸಂಸದೆ, ನಟಿ ರಮ್ಯಾ ಪ್ರಚಾರಕ್ಕೆ ಒಪ್ಪಿಗೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.

ಮಂಡ್ಯ: ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿಗೆ ಸಂಸದೆ ಸುಮಲತಾ ಬೆಂಬಲ ಸೂಚಿಸಿದ ಬೆನ್ನಲ್ಲೇ, ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮಾಜಿ ಸಂಸದೆ, ನಟಿ ರಮ್ಯಾ ಪ್ರಚಾರಕ್ಕೆ ಒಪ್ಪಿಗೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.

ಇದರಂತೆ ಸಂಸದರಾಗಿದ್ದ 6 ತಿಂಗಳಲ್ಲೇ ಜನಮನ ಗೆದ್ದಿದ್ದ ರಮ್ಯಾ ಅವರನ್ನು ಪ್ರಚಾರಕ್ಕೆ ಕರೆಸಿ ಮತದಾರರನ್ನ ಸೆಳೆಯಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್ ಮಾಡಿದೆ.

ರಮ್ಯಾ ಜೊತೆ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಈಗಾಗಲೇ ಮಾತುಕತೆ ನಡೆಸಿದ್ದು, ಮಂಡ್ಯ ಕ್ಷೇತ್ರದ ಕ್ಯಾಂಪೇನ್‍ಗೆ ಬರಲು ಅವರು ಒಪ್ಪಿಗೆ ಸೂಚಿಸಿದ್ದಾರೆ. ಮುಂದಿನ ವಾರ ಅಭ್ಯರ್ಥಿ ಜೊತೆ ರೋಡ್ ಶೋ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಒಕ್ಕಲಿಗರ ಭದ್ರಕೋಟೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸಹ ಎಂಟ್ರಿ ಕೊಡಲಿದ್ದಾರೆ.

ಏಪ್ರಿಲ್ 17 ಅಥವಾ 20 ರಂದು ಮಂಡ್ಯದಲ್ಲಿ ಬೃಹತ್ ಸಮಾವೇಶ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಹೆಚ್‍ಡಿಕೆ ವಿರುದ್ಧ ತಂತ್ರ ಹೆಣೆದು ಮತದಾರರನ್ನು ಸೆಳೆಯಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.

ಇದರ ನಡುವೆ ಸಿಎಂ ಸಿದ್ದರಾಮಯ್ಯರಿಂದ ಒಂದು ದಿನ, ಮಂಡ್ಯ ಲೋಕಾಸಭಾ ಕ್ಷೇತ್ರದ ಕೆ.ಆರ್ ನಗರ, ಕೆ.ಆರ್ ಪೇಟೆಯಲ್ಲಿ ಮತಯಾಚನೆ ನಡೆಯಲಿದೆ. ಇನ್ನೊಂದು ದಿನ ಡಿಸಿಎಂ ಡಿ.ಕೆ ಶಿವಕುಮಾರ್ ಮಂಡ್ಯದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಮೂಲಕ ಮಂಡ್ಯವನ್ನ ಸಾಕಷ್ಟು ಪ್ರತಿಷ್ಠೆಯ ಕ್ಷೇತ್ರವಾಗಿ ಕಾಂಗ್ರೆಸ್ ತೆಗೆದುಕೊಂಡಿದೆ.

ಮತ್ತೊಂದೆಡೆ ಮೈತ್ರಿ ಬಲ ಹೆಚ್ಚಿಸಿರುವ ಸಂಸದೆ ಸುಮಲತಾ, ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಪರ ಪ್ರಚಾರಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ.

ಸ್ಥಳೀಯ ನಾಯಕರೊಂದಿಗೆ ಪ್ರಚಾರ ನಡೆಸಲು ಮಾತುಕತೆ ನಡೆದಿದ್ದು, ಈ ಮೂಲಕ ಸುಮಲತಾ ಬೆಂಬಲಿಗರು ಹಾಗೂ ಮಹಿಳಾ ಮತದಾರರನ್ನು ಸೆಳೆಯಲು ತಂತ್ರ ರೂಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT