ಪ್ರಹ್ಲಾದ್ ಜೋಶಿ 
ರಾಜಕೀಯ

ಯಾರದಾದ್ರೂ ಮನೇಲಿ ಮಗು ಹುಟ್ಟಿದ್ರೂ, ಕಾಂಗ್ರೆಸ್ ನವರು 2 ಸಾವಿರದಿಂದ ಹುಟ್ಟಿದ್ದು ಅಂತಾರೆ: ಪ್ರಹ್ಲಾದ್‌ ಜೋಶಿ ಲೇವಡಿ

ದ್ವಿತೀಯ ಪಿ.ಯು.ಸಿ ಯ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿರುವ ವಿಜಯಪುರದ ಹುಡುಗ, ತನಗೆ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಅನುಕೂಲವಾಯಿತು ಎಂಬ ಹೇಳಿಕೆ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವಣ ವಾಕ್ ಸಮರಕ್ಕೆ ಕಾರಣವಾಗಿದೆ.

ಹುಬ್ಬಳ್ಳಿ: ದ್ವಿತೀಯ ಪಿ.ಯು.ಸಿ ಯ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿರುವ ವಿಜಯಪುರದ ಹುಡುಗ, ತನಗೆ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಅನುಕೂಲವಾಯಿತು ಎಂಬ ಹೇಳಿಕೆ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವಣ ವಾಕ್ ಸಮರಕ್ಕೆ ಕಾರಣವಾಗಿದೆ.

ಈ ಬಾಲಕನ ಹೇಳಿಕೆಯ ವಿಡಿಯೋವನ್ನು ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ನಾಯಕರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಬಡ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಗೃಹಲಕ್ಷ್ಮೀ ಯೋಜನೆಯ ಹಣ ಸಹಾಯ ಮಾಡುತ್ತಿದೆ ಎಂದು ಫೋಸ್ಟ್ ಮಾಡುತ್ತಿದ್ದಾರೆ. ಇದಕ್ಕೆ ಪ್ರಹ್ಲಾದ್‌ ಜೋಶಿ ಲೇವಡಿ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ 'ಯಾರದಾದ್ರೂ ಮನೇಲಿ ಮಗು ಹುಟ್ಟಿದ್ರೂ, ಕಾಂಗ್ರೆಸ್ ನವರು 2 ಸಾವಿರದಿಂದ ಹುಟ್ಟಿದ್ದು ಅಂತಾರೆ' ಎಂದು ವ್ಯಂಗ್ಯವಾಡಿದರು.

ಇದೇ ವೇಳೆ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ. ಅವರ ಪುತ್ರನ ಕಾಂಗ್ರೆಸ್ ಸೇರ್ಪಡೆ ಅಚ್ಚರಿಯಲ್ಲ, ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ದಿಂಗಾಲೇಶ್ವರರ ಮಾತುಗಳು ನನಗೆ ಆಶಿರ್ವಾದ ಎಂದು ಹೇಳಿದರು.

ಕಾಂಗ್ರೆಸ್‌ನಿಂದ ದಿಂಗಾಲೇಶ್ವರ ಶ್ರೀಗಳಿಗೆ ಬಾಹ್ಯ ಬೆಂಬಲ ಚರ್ಚೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಜೋಶಿ, ಕಾಂಗ್ರೆಸ್‌ನವರು ತಮ್ಮ ಕ್ಯಾಂಡಿಡೇಟ್ ಹಾಕಿದ್ದಾರೆ. ಬಿಜೆಪಿ ನನ್ನನ್ನು ಅಖಾಡಕ್ಕೆ ಇಳಿಸಿದೆ, ಆದರೇ ಬಾಹ್ಯ ಬೆಂಬಲ ಅನ್ನೋ ಪದಕ್ಕೆ ನಾನು ಉತ್ತರ ಕೊಡಲ್ಲ. ಅವರು ನಮ್ಮ ಪಕ್ಷದವರು ಅಲ್ಲ ನನಗೂ ಸಂಬಂಧವಿಲ್ಲ, ಆದು ಆದಾಗ ನಾನು ವಿಚಾರ ಮಾಡಿ ಪ್ರತಿಕ್ರಿಯಿಸುತ್ತೇನೆ ಎಂದು ಪ್ರಹ್ಲಾದ್‌ ಜೋಶಿ ಹೇಳಿದರು.

ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶ ನಿರಾಕರಣೆ ಮಾಡಿದ್ದು ಸುಪ್ರೀಂ ಕೋರ್ಟ್, ವಿವಿಧ ಹಂತದ ನ್ಯಾಯಾಲಯದಲ್ಲಿ ಅವರ ಅರ್ಜಿ ವಜಾಗೊಂಡಿದೆ. ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ. ನಾನು ಯಾವುದೇ ಲಿಂಗಾಯತಗೆ ಅನ್ಯಾಯ ಮಾಡಿಲ್ಲ. ಧಾರವಾಡದ ಕ್ಷೇತ್ರದಲ್ಲಿ ನಾಲ್ಕು ಜನ ಲಿಂಗಾಯತ ಶಾಸಕರುಗಳಿದ್ದಾರೆ. ನಾವು ಹಿಂದುತ್ವದ ಮೇಲೆ ಗೆದ್ದೆ ಗೆಲ್ಲುತ್ತೇವೆ ಅಂತಾ ಕಾಂಗ್ರೆಸ್ ಗೆ ಗೊತ್ತಿದೆ. ಎಲ್ಲಾ ಜನಾಂಗದವರ ಬೆಂಬಲ ನಮಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ.ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

Main Tera Hero: ರಿರಿಲೀಸ್; ಗರ್ಲ್ ಫ್ರೆಂಡ್ ಗಾಗಿ ಅಭಿಮಾನಿಯ ಡ್ಯಾನ್ಸ್ , ವಿಡಿಯೋ ವೈರಲ್, ವರುಣ್ ಧವನ್ ಹೇಳಿದ್ದೇನು?

ವಿಜಯ್ ಸಿಎಂ ಆಗುತ್ತಿದ್ದಂತೆಯೇ ಆಂಧ್ರದಲ್ಲಿ ಗಂಭೀರವಾದ DCM ಪವನ್ ಕಲ್ಯಾಣ್ ! JSP ಕಾರ್ಯಕರ್ತರಿಗೆ ಖಡಕ್ ಸೂಚನೆ

SCROLL FOR NEXT