ಕುಮಾರಸ್ವಾಮಿ ಮತ್ತು ಚಲುವರಾಯಸ್ವಾಮಿ 
ರಾಜಕೀಯ

ಆದಿ ಚುಂಚನಗಿರಿ ಮಠ ವಿಭಜಿಸಿದ್ದು ಯಾರು? ಶ್ರೀಗಳ ಫೋನ್‌ ಟ್ಯಾಪ್ ಮಾಡಿಸಿದ್ದು ಯಾರು? HDKಗೆ ಚಲುವರಾಯಸ್ವಾಮಿ ಟಾಂಗ್

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೆ ಮಠ ರಾಜಕೀಯ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ, ಜೆಡಿಎಸ್-ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ಒಕ್ಕಲಿಗರ ಪ್ರಭಾವಿ ಮಠಾಧೀಶ ಆದಿ ಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿಯ ಭೇಟಿಗೆ ಮುಗಿಬೀಳುತ್ತಿದ್ದಾರೆ.

ಬೆಂಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೆ ಮಠ ರಾಜಕೀಯ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ, ಜೆಡಿಎಸ್-ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ಒಕ್ಕಲಿಗರ ಪ್ರಭಾವಿ ಮಠಾಧೀಶ ಆದಿ ಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿಯ ಭೇಟಿಗೆ ಮುಗಿಬೀಳುತ್ತಿದ್ದಾರೆ.

ಅಭ್ಯರ್ಥಿಗಳ ಈ ಭೇಟಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರುಗಳ ನಡುವಿನ ವಾಕ್ಸಮರಕ್ಕೆ ದಾರಿ ಮಾಡಿಕೊಟ್ಟಿದೆ. ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಅಧಿಕಾರ ಅವಧಿಯಲ್ಲಿ ಕುಮಾರಸ್ವಾಮಿ ನಿರ್ಮಲಾನಂದನಾಥ ಶ್ರೀಗಳ ಫೋನ್ ಟ್ಯಾಪ್ ಮಾಡಿಸಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ. ಅಂದು ಶ್ರೀಗಳ ಫೋನ್ ಟ್ಯಾಪ್ ಮಾಡಿಸಿದ್ದವರು ಇಂದು ಆಶೀರ್ವಾದ ಪಡೆಯಲು ಮಠಕ್ಕೆ ಹೋಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ನಾವು ಸಹ ಜೆಎಸ್‌ಎಸ್, ಸಿದ್ದಗಂಗಾ, ಚುಂಚನಗಿರಿ ಮಠಗಳಿಗೆ ನಾವು ಹೋಗುತ್ತೇವೆ, ಅವರು ಹೋಗಿದ್ದಾರೆ. ಇದು ಚುನಾವಣೆ ವೇಳೆ ಸಹಜವಾಗಿದೆ ಎಂದು ಹೇಳಿಕೆ ನೀಡಿದ್ದಾರೆ.

ಆದರೆ ಕುಮಾರಸ್ವಾಮಿ, ಸ್ವಾಮೀಜಿ ಫೋನ್ ಟ್ಯಾಪ್ ಮಾಡಿದ್ದಾರೆ. ಸ್ವಾಮೀಜಿಗಳು ಯಾರಿಗೂ ಪ್ರಚಾರ ಮಾಡೋಕೆ ಆಗಲ್ಲ. ಚುಂಚನಗಿರಿ ಮಠ ಒಕ್ಕಲಿಗ ಸಮುದಾಯ ಮಠ ಆದ್ರೂ ಸಹ ರಾಜ್ಯದಲ್ಲಿ ಅತ್ಯಂತ ಜಾತ್ಯತೀತ ಮಠವಾಗಿದೆ. ಎಲ್ಲಾ ಜಾತಿಗಳನ್ನು ಪ್ರೀತಿಸಿ ಬೆಳೆಸಿದವರು ಬಾಲಗಂಗಾಧರನಾಥ ಶ್ರೀಗಳು. ಜೆಡಿಎಸ್‌ನವರು ಬಾಲಗಂಗಾಧರ ಶ್ರೀಗಳಿಗೆ ಎಷ್ಟು ಕಿರುಕುಳ‌ ಕೊಟ್ಟರು ಎಂದು ಸಹ ಗೊತ್ತಿದೆ. ಅಂದು ಆದಿ ಚುಂಚನಗಿರಿ ಮಠವನ್ನು ವಿಭಜಿಸಿದ್ದರು, ಈಗ ಚುನಾವಣೆ ಬಂದಿದೆ. ಅದಕ್ಕೆ ಮಠಕ್ಕೆ‌ ಕುಮಾರಸ್ವಾಮಿ ಹೋಗ್ತಾ ಇದ್ದಾರೆ ಅಷ್ಟೇ ಎಂದು ಚಲುವರಾಯಸ್ವಾಮಿ ವ್ಯಂಗ್ಯವಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಶ್ಮೀರ ಭಾರತದ ಅವಿಭಾಜ್ಯ ಅಂಗ: ವ್ಯಾಪಾರ ಒಪ್ಪಂದದಲ್ಲಿ ಪಾಕಿಸ್ತಾನಕ್ಕೆ ಸದ್ದಿಲ್ಲದೆ 'ಶಾಕ್' ನೀಡಿದ ಅಮೆರಿಕಾ !

ಮುಂಬಯಿ ಮಹಾನಗರ ಪಾಲಿಕೆ ಮೇಯರ್‌ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ರಿತು ತಾವಡೆ ಆಯ್ಕೆ

India-US ವ್ಯಾಪಾರ ಒಪ್ಪಂದ 'ಮೇಕ್ ಇನ್ ಇಂಡಿಯಾ' ಬಲಪಡಿಸುತ್ತದೆ, ಉದ್ಯೋಗಗಳನ್ನು ಸೃಷ್ಟಿಸುತ್ತದೆ: ಪ್ರಧಾನಿ ಮೋದಿ

India-US ಮಧ್ಯಂತರ ವ್ಯಾಪಾರ ಒಪ್ಪಂದ; ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ICC Men’s T20 World Cup 2026: ಸತತ 2ನೇ ಬಾರಿಗೆ ಯಾವ ತಂಡವೂ ಟ್ರೋಫಿ ಗೆದ್ದಿಲ್ಲ; ಅಸಾಧ್ಯವಾದುದ್ದನ್ನು ಸಾಧಿಸುತ್ತಾ ಭಾರತ?

SCROLL FOR NEXT