ಡಿಸಿಎಂ ಡಿಕೆ ಶಿವಕುಮಾರ್ ಜೊತೆಗೆ ದೀಪಕ್ ತಿಮ್ಮಯ್ಯ 
ರಾಜಕೀಯ

ಕೆಪಿಸಿಸಿ ಅಧ್ಯಕ್ಷರ ರಾಜಕೀಯ, ಸಂವಹನ ಕಾರ್ಯದರ್ಶಿಯಾಗಿ ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ ನೇಮಕ

ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ ಅವರನ್ನು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

ಬೆಂಗಳೂರು: ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ ಅವರನ್ನು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

ಸದಾಶಿವನಗರ ನಿವಾಸದಲ್ಲಿ ದೀಪಕ್ ತಿಮ್ಮಯ್ಯ ಪಕ್ಷಕ್ಕೆ ಬರಮಾಡಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, "ಹಿರಿಯ ಪತ್ರಕರ್ತರಾದ ದೀಪಕ್ ತಿಮ್ಮಯ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಹಾಗೂ ಸಂವಹನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದ್ದು, ಅವರಿಗೆ ಕಾಂಗ್ರೆಸ್ ಕಚೇರಿಯಲ್ಲಿ ಕಚೇರಿ ನೀಡಲಾಗುವುದು. ಪಕ್ಷದ ವಿಚಾರವಾಗಿ ಯಾರೇ ನನ್ನನ್ನು ಸಂಪರ್ಕ ಮಾಡಲು ಅವರು ಸಹಕಾರ ನೀಡಲಿದ್ದಾರೆ ಎಂದು ತಿಳಿಸಿದರು.

ಮಾಧ್ಯಮ ಕ್ಷೇತ್ರದಲ್ಲಿ ಸುಮಾರು 30-40 ವರ್ಷಗಳ ಅನುಭವವಿರುವ ದೀಪಕ್ ತಿಮ್ಮಯ, ತಮ್ಮದೇ ಆದ ಸಂಸ್ಥೆ ಮೂಲಕ ಮಕ್ಕಳನ್ನು ನಾಯಕರನ್ನಾಗಿ ರೂಪಿಸುವ ಕೆಲಸ ಮಾಡಿಕೊಂಡು ಬಂದಿದ್ದಾರೆ. ನಾಯಕರನ್ನು ಸೃಷ್ಟಿಸುವವನು ನಾಯಕನೇ ಹೊರತು ಹಿಂಬಾಲಕರನ್ನು ಸೃಷ್ಟಿಸುವವನು ಅಲ್ಲ ಎಂಬಂತೆ ಕೆಲಸ ಮಾಡುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ, ವಿಚಾರವಾಗಿ ಅವರು ನನಗೆ ಅನೇಕ ಉತ್ತಮ ಸಲಹೆಗಳನ್ನು ನೀಡಿದ್ದಾರೆ. ಹೀಗಾಗಿ ಅವರಿಗೆ ಕಾಂಗ್ರೆಸ್ ಪಕ್ಷದ ಭಾಗವಾಗುವಂತೆ ಮನವಿ ಮಾಡಿದ್ದೆ. ಅದನ್ನು ಒಪ್ಪಿ ಅವರು ಇಂದು ಪಕ್ಷಕ್ಕೆ ಸೇರ್ಪಡೆ ಆಗಿದ್ದು, ಈ ಜವಾಬ್ದಾರಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT