ಎಚ್‌ಡಿ ಕುಮಾರಸ್ವಾಮಿ 
ರಾಜಕೀಯ

ಡಿಕೆ ಶಿವಕುಮಾರ್‌ ಹೇಳಿಕೆಗಳನ್ನು ಒಕ್ಕಲಿಗ ಸಮುದಾಯ ಗಮನಿಸುತ್ತಿದೆ; ತಕ್ಕ ಉತ್ತರ ನೀಡಲಿದೆ: ಎಚ್‌ಡಿ ಕುಮಾರಸ್ವಾಮಿ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಎಲ್ಲ ಹೇಳಿಕೆಗಳನ್ನು ಒಕ್ಕಲಿಗ ಸಮುದಾಯ ಗಮನಿಸುತ್ತಿದೆ ಮತ್ತು ಸಮುದಾಯದವರು ಅವರಿಗೆ ತಕ್ಕ ಉತ್ತರ ನೀಡುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಬುಧವಾರ ಹೇಳಿದ್ದಾರೆ.

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಎಲ್ಲ ಹೇಳಿಕೆಗಳನ್ನು ಒಕ್ಕಲಿಗ ಸಮುದಾಯ ಗಮನಿಸುತ್ತಿದೆ ಮತ್ತು ಸಮುದಾಯದವರು ಅವರಿಗೆ ತಕ್ಕ ಉತ್ತರ ನೀಡುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಬುಧವಾರ ಹೇಳಿದ್ದಾರೆ.

'ನಾನು ಎಂದಿಗೂ ಮಠದ ಅಥವಾ ಸಮುದಾಯದ ಮಠಾಧೀಶರ ಹೆಸರನ್ನು ದುರುಪಯೋಗಪಡಿಸಿಕೊಂಡಿಲ್ಲ. ಶಿವಕುಮಾರ್ ಅವರಿಂದ ನಾನು ಪಾಠ ಕಲಿಯಬೇಕಾಗಿಲ್ಲ. ಅವರ ಹೇಳಿಕೆಗಳನ್ನು ಒಕ್ಕಲಿಗ ಸಮುದಾಯ ಗಮನಿಸುತ್ತಿದೆ' ಎಂದು ಹೇಳಿದರು.

ಯಾವುದೇ ಸರ್ಕಾರ ಪತನವಾದಾಗ ಮಠಾಧೀಶರು ಏಕೆ ಪ್ರಶ್ನಿಸುತ್ತಾರೆ. ಮಠಾಧೀಶರಿಗೂ ಮತ್ತು ರಾಜಕೀಯಕ್ಕೂ ಏನು ಸಂಬಂಧ? ಸರ್ಕಾರದ ಪತನದ ಬಗ್ಗೆ ಸ್ವಾಮೀಜಿ ಏಕೆ ಮಾತನಾಡುತ್ತಾರೆ? ಧಾರ್ಮಿಕವಾಗಿ, ಸ್ವಾಮೀಜಿ ನಮ್ಮ ಮಠಾಧೀಶರು, ಅವರನ್ನು ರಾಜಕೀಯ ಉದ್ದೇಶಗಳಿಗಾಗಿ ಏಕೆ ಬಳಸಬೇಕು? ಮಠಾಧೀಶರ ಪ್ರಭಾವವನ್ನು ಬಳಸಿಕೊಳ್ಳಲು ಕಾಂಗ್ರೆಸ್ ಯತ್ನಿಸಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಒಂದೇ ಒಂದು ಸ್ಥಾನವನ್ನೂ ಗೆಲ್ಲುವುದಿಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಜೆಡಿಎಸ್ ಮತ್ತು ಎನ್‌ಡಿಎ ಅಭ್ಯರ್ಥಿಗಳ ಹೆಸರನ್ನು ಶಿವಕುಮಾರ್ ತಪ್ಪಾಗಿ ತೆಗೆದುಕೊಂಡಿದ್ದಾರೆ. ಅವರು ತಮ್ಮ ಕಾಂಗ್ರೆಸ್ ಬಗ್ಗೆಯೇ ಮಾತನಾಡಿರಬೇಕು ಎಂದು ಅವರು ಹೇಳಿದರು.

ಒಕ್ಕಲಿಗರ ಆಧ್ಯಾತ್ಮಿಕ ಕೇಂದ್ರವಾದ ಆದಿಚುಂಚನಗಿರಿ ಮಠಕ್ಕೆ ಬುಧವಾರ ಎನ್‌ಡಿಎ ಅಭ್ಯರ್ಥಿಗಳ ನಿಯೋಗ ಭೇಟಿ ನೀಡಿದ ಬೆನ್ನಲ್ಲೇ, ಉಪಮುಖ್ಯಮಂತ್ರಿ ಶಿವಕುಮಾರ್ ಅವರು, ಮಠಾಧೀಶರು ಬುದ್ಧಿವಂತರಾಗಿದ್ದು, ರಾಜಕೀಯದಲ್ಲಿ ತೊಡಗಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

'ಸ್ವಾಮೀಜಿಗಳು ಬುದ್ಧಿವಂತರು ರಾಜಕೀಯದಲ್ಲಿ ಅವರು ಹಸ್ತಕ್ಷೇಪ ಮಾಡುವುದಿಲ್ಲ ಎಂಬ ಬಗ್ಗೆ ನನಗೆ ಖಾತ್ರಿಯಿದೆ. ಜೆಡಿಎಸ್ ವರಿಷ್ಠ ದೇವೇಗೌಡರು ಈ ಹಿಂದೆಯೇ ಒಕ್ಕಲಿಗ ಮಠವನ್ನು ವಿಭಜಿಸಿದ್ದು ಗೊತ್ತಿರುವ ಸಂಗತಿ’ ಎಂದು ಶಿವಕುಮಾರ್ ಹೇಳಿದರು.

ಒಕ್ಕಲಿಗ ಸಮುದಾಯವು ದಕ್ಷಿಣ ಕರ್ನಾಟಕದ ರಾಜಕೀಯದಲ್ಲಿ ಪ್ರಭಾವಿ ಸಮುದಾಯವಾಗಿದ್ದು, ಶಿವಕುಮಾರ್ ಮತ್ತು ಕುಮಾರಸ್ವಾಮಿ ಇಬ್ಬರೂ ಒಂದೇ ಸಮುದಾಯದವರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT