ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ 
ರಾಜಕೀಯ

ಈಶ್ವರಪ್ಪ ನಾಮಪತ್ರ ಹಿಂದಕ್ಕೆ ಪಡೆಯಲು ಇನ್ನೂ ಅವಕಾಶವಿದೆ, ಕಾದು ನೋಡಿ: ಬಿ.ವೈ.ವಿಜಯೇಂದ್ರ

ಈಗಲೇ ಅಂತಿಮ ತೀರ್ಮಾನ ಮಾಡಬೇಡಿ, ಇನ್ನೂ ಸಮಯವಿದೆ. ಈಶ್ವರಪ್ಪ ನಾಮಪತ್ರ ಹಿಂದಕ್ಕೆ ಪಡೆಯಲು ಇನ್ನೂ ಅವಕಾಶ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶುಕ್ರವಾರ ಹೇಳಿದ್ದಾರೆ.

ಬಳ್ಳಾರಿ: ಈಗಲೇ ಅಂತಿಮ ತೀರ್ಮಾನ ಮಾಡಬೇಡಿ, ಇನ್ನೂ ಸಮಯವಿದೆ. ಈಶ್ವರಪ್ಪ ನಾಮಪತ್ರ ಹಿಂದಕ್ಕೆ ಪಡೆಯಲು ಇನ್ನೂ ಅವಕಾಶ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶುಕ್ರವಾರ ಹೇಳಿದ್ದಾರೆ.

ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಶ್ರೀರಾಮುಲು ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿರುವ ಬಿ.ವೈ. ವಿಜಯೇಂದ್ರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಯಡಿಯೂರಪ್ಪ ಆದೇಶದಂತೆ ಬಳ್ಳಾರಿಗೆ ಬಂದಿದ್ದೇನೆ. ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ಬಿಜೆಪಿಯ ಗೆಲುವು ಖಚಿತ. ಶ್ರೀರಾಮುಲು ದಾಖಲೆಯ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ. ಬಳ್ಳಾರಿಗೆ ಯಡಿಯೂರಪ್ಪ ಸೇರಿದಂತೆ ಇತರ ನಾಯಕರು ಪ್ರಚಾರಕ್ಕೆ ಆಗಮಿಸಲಿದ್ದಾರೆ. ರಾಜ್ಯದ 30 ಜನ ಸಚಿವರನ್ನು ಕರೆ ತಂದರೂ ಬಳ್ಳಾರಿಯಲ್ಲಿ ಬಿಜೆಪಿ ಗೆಲುವು ಶತಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಮುಖ ಲಿಂಗಾಯತ ಮುಖಂಡರ ಸಭೆ ವಿಚಾರವಾಗಿ ಮಾತನಾಡಿ, ನಾನೀಗ ಯಾವುದೇ ಲಿಂಗಾಯತ ಮುಖಂಡರ ಸಭೆ ಮಾಡಿಲ್ಲ. ಕೆಲಕಾಲ ಮಾತನಾಡಿದ್ದೇನಷ್ಟೇ. ಮುಂದಿನ ದಿನಗಳಲ್ಲಿ ​​ ಸಭೆ ಕರೆಯಲಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆ ಆಗಲು ಕಾರಣಗಳು ಬಹಳಷ್ಟಿವೆ. ಅದರ ಬಗ್ಗೆ ಈಗ ಚರ್ಚೆ ಮಾಡಲು ಹೋಗುವುದಿಲ್ಲ. ಎಲ್ಲವನ್ನೂ ಮರೆತು, ನರೇಂದ್ರ ಮೋದಿಯವರು ಮತ್ತೆ ಪ್ರಧಾನಿ ಆಗುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷದವರು ಒಂದಾಗಿ ಕೆಲಸ ಮಾಡಬೇಕಿದೆ ಎಂದು ಕರೆ ನೀಡಿದರು,

ಈ ಚುನಾವಣೆಯು ವಿಜಯೇಂದ್ರ vs​ ಸಿದ್ದರಾಮಯ್ಯ ಎಂಬ ಮಾಧ್ಯಮದವರ ಪ್ರಶ್ನೆ ಪ್ರತಿಕ್ರಿಯಿಸಿ, ಹಾಗೇನಿಲ್ಲ, ಹೊಸ ಚರ್ಚೆಗೆ ಅವಕಾಶ ಮಾಡಿಕೊಡುವುದು ಬೇಡ. ಎಲ್ಲ 28 ಕ್ಷೇತ್ರಗಳಲ್ಲಿಯೂ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು​ ಗೆಲ್ಲಬೇಕು ಎಂಬುದೇ ನಮ್ಮ ಗುರಿಯಾಗಿದೆ. ಆ ಒಂದು ಆತ್ಮವಿಶ್ವಾಸದೊಂದಿಗೆ ನಾವೀಗ ಮುನ್ನುಗ್ಗುತ್ತಿದ್ದೇವೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT