ಸಿಎಂ ಸಿದ್ದರಾಮಯ್ಯ 
ರಾಜಕೀಯ

ಪ್ರಧಾನಿ ಮೋದಿಯನ್ನು ಹಿಟ್ಲರ್, ಮುಸಲೋನಿಗೆ ಹೋಲಿಸಿ ಅವಹೇಳನ ಆರೋಪ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು

ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್, ಮುಸಲೋನಿಗೆ ಹೋಲಿಸಿ ಅವಹೇಳನ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಬೇಕು, ಅವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡಬೇಕು ಎಂದು ಒತ್ತಾಯಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿದೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್, ಮುಸಲೋನಿಗೆ ಹೋಲಿಸಿ ಅವಹೇಳನ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಬೇಕು, ಅವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡಬೇಕು ಎಂದು ಒತ್ತಾಯಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿದೆ.

ಶಾಸಕ ಎಸ್, ಸುರೇಶ್ ಕುಮಾರ್ ಮತ್ತು ಬಿಜೆಪಿ ಕಾನೂನು ಪ್ರಕೋಷ್ಠದ ರಾಜ್ಯ ಘಟಕದ ಅಧ್ಯಕ್ಷ ವಿವೇಕ್ ಎಸ್ . ರೆಡ್ಡಿ ನೇತೃತ್ವದ ನಿಯೋಗ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಅವರನ್ನು ಶನಿವಾರ ಭೇಟಿ ಮಾಡಿ ದೂರು ಸಲ್ಲಿಸಿತು.

ದೂರು ಸಲ್ಲಿಸಿದ ಬಳಿಕ ಎಎನ್ ಐ ಸುದ್ದಿಸಂಸ್ಥೆ ಜೊತೆಗೆ ಮಾತನಾಡಿದ ಎಸ್, ಸುರೇಶ್ ಕುಮಾರ್, ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕೊಳ್ಳೇಗಾಲದಲ್ಲಿ ಶುಕ್ರವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಸಿದ್ದರಾಮಯ್ಯ ಅವರು ಮೋದಿ ಅವರನ್ನು ಹಿಟ್ಲರ್, ಮುಸಲೋನಿಗೆ ಹೋಲಿಸಿದ್ದಾರೆ. ಮೋದಿ ಅವರು ಸರ್ವಾಧಿಕಾರಿ ಎಂದಿದ್ದಾರೆ. ಮೋದಿ ಅವರ ನಾಯಕತ್ವದಡಿ ಸಂವಿಧಾನ ಅಪಾಯದಲ್ಲಿದ್ದಾರೆ ಎಂದು ಹೇಳಿದ್ದಾರೆ. ಇದು ಅವರ ಹತಾಶೆಯನ್ನು ತೋರಿಸುತ್ತದೆ. ಹೀಗಾಗಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ ಎಂದು ತಿಳಿಸಿದರು.

ಬೇಜವಾಬ್ದಾರಿಯುತ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡಬೇಕು. ಇನ್ನೂ ಮುಂದೆ ಚುನಾವಣಾ ಪ್ರಚಾರ ನಡೆಸದಂತೆ ನಿರ್ಬಂಧ ಹೇರಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಬಿಜೆಪಿ ಮತ್ತು ಬಿಜೆಪಿಯ ಅಭ್ಯರ್ಥಿ ವಚನ ಭ್ರಷ್ಟರು ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಾಗೂ ಮೋದಿ ಅವರನ್ನು ಸರ್ವಾಧಿಕಾರಿ ಎಂದು ಬಿಂಬಿಸಿ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಫೋಸ್ಟ್ ಪ್ರಕಟಿಸಿರುವ ರಾಜ್ಯ ಯುವ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಯಶ್ ಗೌಡ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿ ಬಿಜೆಪಿ ಕಾನೂನು ಪ್ರಕೋಷ್ಠ ಪ್ರತ್ಯೇಕ ದೂರುಗಳನ್ನು ಸಲ್ಲಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನನಗೆ ಇರೋದ್ 5 ಬೆರಳು: ಸಾವಿನ ವದಂತಿ ಮಧ್ಯೆ ಚಹಾ ಕುಡಿಯುತ್ತ ಕಾಣಿಸಿಕೊಂಡ ಇಸ್ರೇಲ್ ಪ್ರಧಾನಿ; ಇರಾನ್‌ಗೆ ಮುಖಭಂಗ; Video

'ಒಂದು ವೇಳೆ ಬದುಕಿದ್ದರೆ, ಹುಡುಕಿ ಕೊಲ್ಲುತ್ತೇವೆ': ಬೆಂಜಮಿನ್ ನೆತನ್ಯಾಹು ಸಾವಿನ ವದಂತಿಗಳ ನಡುವೆ ಇರಾನ್ ಎಚ್ಚರಿಕೆ!

ಯುದ್ಧ: ಮೊದಲ ಬಾರಿಗೆ Dancing Missile ಉಡಾಯಿಸಿದ Iran; 2 ಸಾವಿರ ಕಿ.ಮೀ ವ್ಯಾಪ್ತಿ.. ಅಮೆರಿಕಕ್ಕೆ ತಲೆನೋವು!

ಬಾಲಿವುಡ್ ನಟಿ ಮಧು ಮಲ್ಹೋತ್ರಾ ನಿಧನ

Reels ಗೀಳಿಗೆ ಮತ್ತೊಂದು ಬಲಿ: Delhi–Mumbai Expresswayನಲ್ಲಿ ಕ್ಯಾಂಟರ್ ಢಿಕ್ಕಿ, ಯುವಕ ಸಾವು! Video

SCROLL FOR NEXT