ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಶುಕ್ರವಾರ ಉಡುಪಿಯ ಸದಾನಂದ ನಾಯಕ್ ಅವರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.  
ರಾಜಕೀಯ

ಕೆ ಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ ವೇಳೆ ಪ್ರಧಾನಿ ಮೋದಿ ಬಂದಿದ್ರಾ? ಎಲ್ಲರ ಗಮನ ಸೆಳೆದ ಈ ವ್ಯಕ್ತಿ ಯಾರು?!

ಅರೆ ಇದೇನಿದು, ಈಶ್ವರಪ್ಪನವರ ಪಕ್ಕದಲ್ಲಿ ಪ್ರಧಾನಿ ಮೋದಿ ನಿಂತಿದ್ದಾರಲ್ಲ ಎಂದು ಒಂದು ಕ್ಷಣ ಅನಿಸಬಹುದು. ಆದರೆ ಇದು ನಿನ್ನೆ ಶುಕ್ರವಾರ ಶಿವಮೊಗ್ಗದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರಿಗೆ ಬೆಂಬಲ ನೀಡಲು ಬಂದ ಮೋದಿಯವರಂತೆ ಕಾಣುವ ವ್ಯಕ್ತಿ.

ಶಿವಮೊಗ್ಗ: ಅರೆ ಇದೇನಿದು, ಈಶ್ವರಪ್ಪನವರ ಪಕ್ಕದಲ್ಲಿ ಪ್ರಧಾನಿ ಮೋದಿ ನಿಂತಿದ್ದಾರಲ್ಲ ಎಂದು ಒಂದು ಕ್ಷಣ ಅನಿಸಬಹುದು. ಆದರೆ ಇದು ನಿನ್ನೆ ಶುಕ್ರವಾರ ಶಿವಮೊಗ್ಗದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರಿಗೆ ಬೆಂಬಲ ನೀಡಲು ಬಂದ ಮೋದಿಯವರಂತೆ ಕಾಣುವ ವ್ಯಕ್ತಿ.

ಬಿಜೆಪಿಯಿಂದ ಬಂಡಾಯವೆದ್ದು ಹಾಲಿ ಸಂಸದ ಬಿ ವೈ ರಾಘವೇಂದ್ರ ಎದುರು ಸ್ಪರ್ಧಿಸುತ್ತಿರುವ ಈಶ್ವರಪ್ಪನವರು ತಮ್ಮ ಪ್ರಚಾರಕ್ಕೆ ಪ್ರಧಾನಿ ಮೋದಿ ಫೋಟೋವನ್ನು ಬಳಸುತ್ತಿದ್ದಾರೆ ಎಂದು ಆರೋಪಿಸಿ ಭಾರತೀಯ ಜನತಾ ಪಕ್ಷ ದೂರು ನೀಡಿದ್ದು ಪ್ರಕರಣ ಈಗಾಗಲೇ ನ್ಯಾಯಾಲಯದ ಮೆಟ್ಟಿಲೇರಿದೆ.

ಹೀಗಿರುವಾಗಲೇ ಅವರು ನಿನ್ನೆ ನಾಮಪತ್ರ ಸಲ್ಲಿಸುವ ವೇಳೆ ಮೋದಿಯಂತಹ ವ್ಯಕ್ತಿಯನ್ನು ಕರೆತಂದು ಸಾವಿರಾರು ಬೆಂಬಲಿಗರಲ್ಲಿ ಅಚ್ಚರಿ ಮೂಡಿಸಿದ್ದಾರೆ. ಪ್ರಧಾನಿ ಮೋದಿಯವರಂತೆ ಕಾಣುವ ಸದಾನಂದ ನಾಯಕ್ ಉಡುಪಿ ಜಿಲ್ಲೆಯ ಹಿರಿಯಡ್ಕ ಪಟ್ಟಣದ ಬೊಮ್ಮರಬೆಟ್ಟು ಗ್ರಾಮದವರು. ಅಡುಗೆ ಕೆಲಸ ಮಾಡುವ ಇವರು ಶಾಲೆ ಬಿಟ್ಟ ನಂತರ ಕೆಲಸ ಮಾಡಲು ಆರಂಭಿಸಿದರು. ಶಿವಮೊಗ್ಗ ಲೋಕಸಭಾ ಸ್ಥಾನ ಚುನಾವಣೆಯಲ್ಲಿ ಈಶ್ವರಪ್ಪ ಅವರನ್ನು ಬೆಂಬಲಿಸುತ್ತಿರುವ ರಾಷ್ಟ್ರಭಕ್ತರ ಬಳಗದ ವತಿಯಿಂದ ನಡೆದ ಬೃಹತ್ ಮೆರವಣಿಗೆಯಲ್ಲಿ ನಾಯಕ್ ಭಾಗವಹಿಸಿದ್ದರು.

ಉಡುಪಿ ಜಿಲ್ಲೆಯ ವಿವಿಧೆಡೆಯಿಂದ ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರದಿಂದಲೂ ಅಪಾರ ಸಂಖ್ಯೆಯ ಬೆಂಬಲಿಗರು ನಿನ್ನೆ ಈಶ್ವರಪ್ಪನವರ ಜೊತೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಸದಾನಂದ ನಾಯಕ್ ನಿನ್ನೆ ಶಿವಮೊಗ್ಗ ನಗರದಲ್ಲಿ ಈಶ್ವರಪ್ಪ ಅವರೊಂದಿಗೆ ಮೆರವಣಿಗೆ ನಡೆಸುತ್ತಿದ್ದ ವೇಳೆ ಕ್ಯಾಮರಾ ಕಣ್ಣಿಗೆ ಬಿದ್ದು ಹೈಲೈಟ್ ಆದರು. ನೆರೆದಿದ್ದ ಜನರತ್ತ ಕೈ ಬೀಸಿದ ನಾಯಕ್, ಕೈಮುಗಿದು ಈಶ್ವರಪ್ಪ ಅವರಿಗೆ ಬೆಂಬಲ ಕೋರಿದರು. ಈಶ್ವರಪ್ಪ ಪರ ಘೋಷಣೆಗಳನ್ನು ಕೂಗಿದ ಅವರ ಬೆಂಬಲಿಗರು ಮೆರವಣಿಗೆಯಲ್ಲಿ ಮೋದಿ ಭಾವಚಿತ್ರವಿರುವ ಧ್ವಜಗಳನ್ನು ಹಿಡಿದು ಸಾಗಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಗೆದ್ದ ನಂತರ ನಾನು ದೆಹಲಿಗೆ ತೆರಳಿ ಪ್ರಧಾನಿ ಮೋದಿಯವರ ಆಶೀರ್ವಾದ ಪಡೆದು ಅವರನ್ನು ಬೆಂಬಲಿಸುತ್ತೇನೆ ಎಂದು ನಾಮಪತ್ರ ಸಲ್ಲಿಸಿದ ನಂತರ ಈಶ್ವರಪ್ಪ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

ಮಾತುಕತೆಗೂ ಮುನ್ನವೇ ಟೆಹ್ರಾನ್‌ಗೆ ದೊಡ್ಡ ಗೆಲುವು; ಫ್ರೀಜ್ ಮಾಡಲಾದ ಇರಾನ್ ಸ್ವತ್ತುಗಳ ಬಿಡುಗಡೆಗೆ ಅಮೆರಿಕ ಒಪ್ಪಿಗೆ!

SCROLL FOR NEXT