ಮಡಿಕೇರಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ  
ರಾಜಕೀಯ

10 ವರ್ಷಗಳಿಂದ ಕೊಟ್ಟಿರುವ ಭರವಸೆಗಳನ್ನೇ ಈಡೇರಿಸಿಲ್ಲ, ಮೋದಿಯವರದ್ದು ಬರೀ ಪೊಳ್ಳು ಗ್ಯಾರಂಟಿ: ಸಿಎಂ ಸಿದ್ದರಾಮಯ್ಯ

ಕಳೆದ 10 ವರ್ಷಗಳಿಂದ ಕೊಟ್ಟಿರುವ ಭರವಸೆಗಳನ್ನೇ ಪ್ರಧಾನಿ ಮೋದಿಯವರು ಈಡೇರಿಸಿಲ್ಲ. ಇನ್ನು ಮುಂದಿನ ಭರವಸೆಗಳನ್ನು ಈಡೇರಿಸುತ್ತಾರಾ, ಬಿಜೆಪಿ ನೀಡಿರುವ ಭರವಸೆಗಳ ಬಗ್ಗೆ ಯಾವುದೇ ಗ್ಯಾರಂಟಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮಡಿಕೇರಿ: ಕಳೆದ 10 ವರ್ಷಗಳಿಂದ ಕೊಟ್ಟಿರುವ ಭರವಸೆಗಳನ್ನೇ ಪ್ರಧಾನಿ ಮೋದಿಯವರು ಈಡೇರಿಸಿಲ್ಲ. ಇನ್ನು ಮುಂದಿನ ಭರವಸೆಗಳನ್ನು ಈಡೇರಿಸುತ್ತಾರಾ, ಬಿಜೆಪಿ ನೀಡಿರುವ ಭರವಸೆಗಳ ಬಗ್ಗೆ ಯಾವುದೇ ಗ್ಯಾರಂಟಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಕೊಡಗಿನಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಅವರು, ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿ, ಮೋದಿ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದಿದ್ದರು. 2 ಕೋಟಿ ಉದ್ಯೋಗ ಸೃಷ್ಟಿಸಿದ್ದಾರಾ? ಮೇಕ್ ಇನ್ ಇಂಡಿಯಾ ಮಾಡುತ್ತೇವೆ ಎಂದಿದ್ದರು. ಮೇಕ್ ಇನ್ ಇಂಡಿಯಾ ಮಾಡಿದ್ದಾರಾ? ಅಚ್ಛೇದಿನ್ ಆಯೇಗಾ ಎಂದಿದ್ದರು, ಅಚ್ಛೇದಿನ್ ಬಂತಾ ಎಂದು ಪ್ರಶ್ನಿಸಿದ್ದಾರೆ.

ಎಲ್ಲಾ ಅಗತ್ಯ ವಸ್ತುಗಳ ಬೆಲೆ ಕಡಿಮೆ ಆಗಿದೆಯೇ? 2018 ರಲ್ಲಿಯೂ ಬಿಜೆಪಿ ಹಲವು ಭರವಸೆಗಳನ್ನು ನೀಡಿತ್ತು. ಅದರಲ್ಲಿ ಎಷ್ಟೋ ಭರವಸೆಗಳು ಇನ್ನೂ ಈಡೇರಿಸಿಲ್ಲ. ಬಿಜೆಪಿ ಯಾವತ್ತೂ ಕೊಟ್ಟ ಭರವಸೆಯನ್ನು ಈಡೇರಿಸಿಲ್ಲ. 25 ಕೋಟಿ ಉದ್ಯೋಗ ಸೃಷ್ಟಿಸಿದ್ದೇವೆ ಎನ್ನುತ್ತಾರೆ. ನಿಮಗೆ ಉದ್ಯೋಗ ಸಿಕ್ಕಿದೆಯಾ ಎಂದು ಅಲ್ಲಿದ್ದ ಯುವಕರನ್ನು ಪ್ರಶ್ನಿಸಿದರು.

ಕಾಂಗ್ರೆಸ್ ಗ್ಯಾರಂಟಿ ಯೋಜನೆಯಿಂದ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ ಎಂಬ ಮಾಜಿ ಸಿಎಂ ಹೆಚ್‍ಡಿಕೆ ಹೇಳಿಕೆಗೆ, ದಾರಿತಪ್ಪಿದ್ದಾರೆ ಎಂದರೆ ಏನರ್ಥ ಎಂದು ಪ್ರಶ್ನಿಸಿದರು. ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದವರು. ಹೆಣ್ಣುಮಕ್ಕಳ ಬಗ್ಗೆ ಹೀಗೆ ಮಾತನಾಡಿದರೆ ಹೇಗೆ? ಹೆಣ್ಣುಮಕ್ಕಳು ಇದನ್ನು ಸಹಿಸಿಕೊಳ್ಳುತ್ತಾರಾ ಎಂದರು,

ಬೆಲೆ ಹೆಚ್ಚಳ ಮಾಡಿ ಗ್ಯಾರಂಟಿ ಯೋಜನೆ ಮಾಡಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಮಾತಿಗೆ, ಮದ್ಯ ಹಾಗೂ ಸ್ಟಾಂಪ್ ಡ್ಯೂಟಿ ದರ ಹೆಚ್ಚಳದಿಂದ ಸರ್ಕಾರಕ್ಕೆ ಎಷ್ಟು ಆದಾಯ ಬರುತ್ತದೆ ಎಂದು ವಿಜಯೇಂದ್ರಗೆ ಗೊತ್ತಾ? ಗ್ಯಾರಂಟಿ ಯೋಜನೆಗಳಿಗೆ ವರ್ಷಕ್ಕೆ 58 ಸಾವಿರ ಕೋಟಿ ರೂಪಾಯಿ ಬೇಕು. ದರ ಹೆಚ್ಚಳದಿಂದ ಸರ್ಕಾರಕ್ಕೆ ಇಷ್ಟು ಆದಾಯ ಬರುತ್ತಾ, ಸುಮ್ಮನೇ ಏನೋ ಹೇಳಬೇಕು ಎಂದು ಹೇಳುವುದಲ್ಲ ಎಂದು ತಿರುಗೇಟು ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT