ಬಿ.ಎಸ್ ಯಡಿಯೂರಪ್ಪ 
ರಾಜಕೀಯ

ಲೋಕಸಭೆ ಚುನಾವಣೆ ನಂತರವೂ ಮೈತ್ರಿ ಮುಂದುವರಿಯಲಿದೆ: ಬಿ.ಎಸ್ ಯಡಿಯೂರಪ್ಪ

ರಾಜ್ಯದಲ್ಲಿ ಬಿಜೆಪಿ– ಜೆಡಿಎಸ್ ಪಕ್ಷಗಳು ಒಂದಾಗಿ ಹೋಗಬೇಕು. ಈ ಹೊಂದಾಣಿಕೆ ಈ ಚುನಾವಣೆಗೆ ಸೀಮಿತವಲ್ಲ. ಮೈತ್ರಿ ಮುಂದುವರೆಯಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಅವರ ಆಶಯವಾಗಿದೆ.

ದಾವಣಗೆರೆ: ರಾಜ್ಯದಲ್ಲಿ ಬಿಜೆಪಿ– ಜೆಡಿಎಸ್ ಪಕ್ಷಗಳು ಒಂದಾಗಿ ಹೋಗಬೇಕು. ಈ ಹೊಂದಾಣಿಕೆ ಈ ಚುನಾವಣೆಗೆ ಸೀಮಿತವಲ್ಲ. ಮೈತ್ರಿ ಮುಂದುವರೆಯಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಅವರ ಆಶಯವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಮಾತ್ರವಲ್ಲದೇ ಮುಂದಿನ ಎಲ್ಲಾ ಚುನಾವಣೆಗಳಲ್ಲೂ ಜೆಡಿಎಸ್ ಜೊತೆಗೆ ಬಿಜೆಪಿ ಮೈತ್ರಿ ಮುಂದುವರಿಯಲಿದೆ ಎಂದರು. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವುದರಿಂದ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲು ಪ್ರಯತ್ನ ಶುರುವಾಗಿದೆ. ನಾನು 23 ಕ್ಷೇತ್ರಗಳಲ್ಲೂ ಸುತ್ತಿದ್ದೇನೆ. ಉಳಿದ ಕ್ಷೇತ್ರಗಳಿಗೂ ಹೋಗುವೆ. ದೇವೇಗೌಡರು ಇಳಿವಯಸ್ಸಿನಲ್ಲೂ ಪ್ರಚಾರ ಮಾಡುತ್ತಿದ್ದಾರೆ. ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ಭಾರಿ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಕ್ಷದ ಸ್ನೇಹಿತರು ಬಹಳಷ್ಟು ಮಾತನಾಡುತ್ತಾರೆ. ಅದಕ್ಕೆ ಚುನಾವಣೆಯಲ್ಲಿ ಮತದಾರರು ಉತ್ತರ ಕೊಡುತ್ತಾರೆ. ಕಾಂಗ್ರೆಸ್‌ನಲ್ಲಿ ಪ್ರಧಾನಿ ಅಭ್ಯರ್ಥಿ ಯಾರು ಎಂದು ಹೇಳಲಿ ಎಂದು ಸವಾಲು ಹಾಕಿದ ಯಡಿಯೂರಪ್ಪ, ಯಾವುದೇ ವ್ಯಕ್ತಿಯ ಹೆಸರು ಹೇಳುವ ಸ್ಥಿತಿಯಲ್ಲಿ ಕಾಂಗ್ರೆಸ್ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು 3ನೇ ಬಾರಿ ಪ್ರಧಾನಿಯಾಗಲಿದ್ದು, ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ 5 ವರ್ಷಗಳ ಕಾರ್ಯಕ್ರಮವನ್ನು ಈಗಾಗಲೇ ರೂಪಿಸಲಾಗುತ್ತಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ವಿರೋಧಿಯಾಗಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಲಿಲ್ಲ. ಅಂಬೇಡ್ಕರ್ ನಿಧನರಾದಾಗ ಅವರ ಸಂಸ್ಕಾರಕ್ಕೆ ಜಾಗ ನೀಡಲಿಲ್ಲ. ಜವಾಹರಲಾಲ್ ನೆಹರೂ ಸಮಾಧಿಗೆ 52.6 ಎಕರೆ, ಇಂದಿರಾಗಾಂಧಿ ಸಮಾಧಿಗೆ 45 ಎಕರೆ, ರಾಜೀವ್ ಗಾಂಧಿ ಸಮಾಧಿಗೆ 15 ಎಕರೆ ಜಾಗ ನೀಡಲಾಗಿದೆ. ಆದರೆ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವುದು ಸರಿಯಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT