ಡಿ ಕೆ ಶಿವಕುಮಾರ್  
ರಾಜಕೀಯ

ಶಿವಮೊಗ್ಗ ಜನರ ಸಮಸ್ಯೆ ಬಗೆ ಹರಿಸಲು ಯಡಿಯೂರಪ್ಪ, ಸಂಸದ ರಾಘವೇಂದ್ರ ವಿಫಲ: ಡಿ ಕೆ ಶಿವಕುಮಾರ್

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಪುತ್ರ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗ ರೈತರು ಮತ್ತು ಜನರ ಪ್ರಮುಖ ಸಮಸ್ಯೆಗಳನ್ನು ನಿರ್ಲಕ್ಷ್ಯಿಸಿದ್ದಾರೆ.

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಪುತ್ರ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗ ರೈತರು ಮತ್ತು ಜನರ ಪ್ರಮುಖ ಸಮಸ್ಯೆಗಳನ್ನು ನಿರ್ಲಕ್ಷ್ಯಿಸಿದ್ದಾರೆ, ಹೀಗಿರುವಾಗ ಕ್ಷೇತ್ರದ ಜನರು ಬಿಜೆಪಿಗೆ ಏಕೆ ಮತ ಹಾಕಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.

ಅರಣ್ಯ ಹಕ್ಕು ಕಾಯಿದೆಯಡಿ ರೈತರ ಒತ್ತುವರಿ ತೆರವು ವಿಚಾರವನ್ನು ನೀವೇಕೆ ಪ್ರಸ್ತಾಪಿಸಿಲ್ಲ ಎಂದು ಪ್ರಶ್ನಿಸಿದರು. ಬಗೈರ್ ಹುಕುಂ ಭೂಮಿಯ ಕಾನೂನನ್ನು 75 ವರ್ಷದಿಂದ 25 ವರ್ಷಕ್ಕೆ ಇಳಿಸಲು ನೀವು ಏಕೆ ವಿಫಲರಾಗಿದ್ದೀರಿ? ಮೈಸೂರು ಪೇಪರ್ ಮಿಲ್ಸ್ ಮತ್ತು ವಿಶ್ವೇಶ್ವರಯ್ಯ ಐರನ್ ಅಂಡ್ ಸ್ಟೀಲ್ ಲಿಮಿಟೆಡ್ ಅನ್ನು ಪುನರುಜ್ಜೀವನಗೊಳಿಸಲು ನಿಮ್ಮನ್ನು ತಡೆದದ್ದು ಯಾವುದು? ತೀರ್ಥಹಳ್ಳಿಯಲ್ಲಿ ಅಡಿಕೆಕಸಂಶೋಧನಾ ಕೇಂದ್ರವನ್ನು ಮಂಜೂರು ಮಾಡುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭರವಸೆ ಏನಾಯಿತು? ಎಂದು ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ.

ರಾಘವೇಂದ್ರ ಅವರು ಸಂಸತ್ತಿನಲ್ಲಿ ಯಾವುದೇ ರೈತ ಪರ ಸಮಸ್ಯೆಗಳನ್ನು ಪ್ರಸ್ತಾಪಿಸಿದ್ದಾರೆಯೇ ಮತ್ತು ಅವರು ಮಾಡಿದ್ದೆರೆ ಅದರ ವಿವರಗಳನ್ನು ನೀಡುವಂತೆ ಶಿವಕುಮಾರ್ ಕೇಳಿದರು. ಬಿಜೆಪಿ ಜನರ ಭಾವನೆಗಳನ್ನು ದುರ್ಬಳಕೆ ಮಾಡಿಕೊಂಡು ಚುನಾವಣೆಗೆ ಸ್ಪರ್ಧಿಸುತ್ತಿದೆ, ಆದರೆ ಕಾಂಗ್ರೆಸ್ ಅವರ ಬದುಕನ್ನು ಕಟ್ಟಿಕೊಳ್ಳಲು ಸಹಾಯ ಮಾಡುತ್ತಿದೆ. ಬಿಜೆಪಿಯವರು ಮೋದಿ ಗ್ಯಾರಂಟಿ ಬಗ್ಗೆ ಮಾತನಾಡುತ್ತಿದ್ದರೆ, ನಾವು ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಮಾತನಾಡುತ್ತಿದ್ದೇವೆ. ನಾವು ಏನು ಭರವಸೆ ನೀಡಿದ್ದೇವೆಯೋ ಅದನ್ನು ಈಡೇರಿಸಿದ್ದೇವೆ ಎಂದು ಅವರು ಪ್ರತಿಪಾದಿಸಿದರು.

ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆದು ಹಳ್ಳಿಗಳ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂಬ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೌನ ವಹಿಸಿದ್ದೇಕೆ? ಎಂದು ಶಿವಕುಮಾರ್ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT