ಸಚಿವ ಶರಣಬಸಪ್ಪ ದರ್ಶನಾಪುರ  
ರಾಜಕೀಯ

ಲೋಕಸಭೆ ಚುನಾವಣೆಯಲ್ಲಿ ಲೀಡ್ ಕೊಡದಿದ್ದರೆ 'ಆ ಕುರ್ಚಿ'ಯನ್ನು ಬಿಡಬೇಕಾಗುತ್ತದೆ: ಸಚಿವ ಶರಣಬಸಪ್ಪ ದರ್ಶನಾಪುರ

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಲೀಡ್ ಕೊಡದೇ ಹೋದರೆ ಆ ಕುರ್ಚಿಯನ್ನು ಅಲ್ಲಿಗೇ ಬಿಡಬೇಕಾಗುತ್ತದೆ. ನಾವೇ ಲೀಡ್ ಕೊಡದಿದ್ರೆ ಮುಖ ತೋರಿಸುವುದು ಹೇಗೆ ಎಂದು ಸಣ್ಣ ಕೈಗಾರಿಕೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದ್ದಾರೆ.

ಯಾದಗಿರಿ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಲೀಡ್ ಕೊಡದೇ ಹೋದರೆ ಆ ಕುರ್ಚಿಯನ್ನು ಅಲ್ಲಿಗೇ ಬಿಡಬೇಕಾಗುತ್ತದೆ. ನಾವೇ ಲೀಡ್ ಕೊಡದಿದ್ರೆ ಮುಖ ತೋರಿಸುವುದು ಹೇಗೆ ಎಂದು ಸಣ್ಣ ಕೈಗಾರಿಕೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದ್ದಾರೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯ ಪ್ರಚಾರ ಭಾಷಣದಲ್ಲಿ ಮಾತನಾಡಿದ ಅವರು, ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 20 ಸಾವಿರ ಲೀಡ್ ಆಗಿತ್ತು. ನಿಜ ಹೇಳಬೇಕೆಂದರೆ ನನಗೆ ಮಂತ್ರಿ ಹುದ್ದೆಯನ್ನೇ ಕೊಡಬಾರದಾಗಿತ್ತು. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮುನ್ನಡೆ ಸಿಗದಿದ್ದರೆ ಜನತೆ ಮುಂದೆ ತಪ್ಪು ಸಂದೇಶ ಹೋಗುತ್ತದೆ. ನಿಮ್ಮ ವಿಧಾನಸಭೆ ಚುನಾವಣೆಯನ್ನು ಶ್ರಮ ಹಾಕಿ ಗೆಲ್ಲುತ್ತೀರಿ. ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಲೀಡ್ ತಂದುಕೊಡುವುದಿಲ್ಲ ಎಂಬ ಭಾವನೆ ನಾಯಕರುಗಳಿಗೆ ಬರುತ್ತದೆ ಎಂದರು.

ಅವರನ್ನು ಗೆಲ್ಲಿಸಿ ನನ್ನ ಕೈ ಬಲಪಡಿಸಿ: ಈ ಬಾರಿ ಲೀಡ್ ಕೊಡದಿದ್ರೆ ಬಹಳ ಸಂಕಷ್ಟ ಆಗಲಿದೆ. ಅದಕ್ಕಾಗಿ ರಾಜಾ ವೇಣುಗೋಪಾಲ ನಾಯಕ, ಜಿ ಕುಮಾರ ನಾಯಕರನ್ನು ಗೆಲ್ಲಿಸಬೇಕು. ಅವರನ್ನು ಗೆಲ್ಲಿಸಿ ನನ್ನ ಕೈ ಬಲಪಡಿಸಿ ಎಂದು ಬೆಂಬಲಿಗರಲ್ಲಿ, ಕಾರ್ಯಕರ್ತರಲ್ಲಿ ಹಾಗೂ ಕ್ಷೇತ್ರದ ಮತದಾರರಲ್ಲಿ ಸಚಿವ ದರ್ಶನಾಪುರ ಮನವಿ ಮಾಡಿಕೊಂಡರು.

ಇತ್ತೀಚೆಗೆ ಮೈಸೂರಿನ ವರುಣಾ ಕ್ಷೇತ್ರದ ಬಿಳಿಗೆರೆ ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ವಿಧಾನಸಭೆ ಚುನಾವಣೆಯಲ್ಲಿ 48 ಸಾವಿರ ಮತಗಳಿಂದ ಗೆಲ್ಲಿಸಿದ್ದೀರಿ. ಈಗ ಲೋಕಸಭೆ ಚುನಾವಣೆಯಲ್ಲಿ ವರುಣ ಕ್ಷೇತ್ರದಲ್ಲಿ 60 ಸಾವಿರ ಮತಗಳ ಲೀಡ್ ಕೊಡಿ. ನಾನು ಇರಬೇಕಾ, ಬೇಡವಾ ಎಂದು ಕೇಳಿದ್ದು ಸುದ್ದಿಯಾಗಿತ್ತು.

ಅದಕ್ಕೂ ಕೆಲವು ದಿನಗಳ ಮೊದಲು, ರಾಜ್ಯದಲ್ಲಿ ನಮ್ಮದೇ ಸರ್ಕಾರ ಇದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟ್ ಗೆಲ್ಲಿಸಲಿಲ್ಲ ಎಂದರೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಶಾಸಕ ಗುಬ್ಬಿ ಶ್ರೀನಿವಾಸ್ ಹೇಳಿದ್ದು ಸುದ್ದಿಯಾಗಿತ್ತು.

ಈಗ ಸಚಿವ ದರ್ಶನಾಪುರ ಕೂಡ ಅದೇ ಧಾಟಿಯಲ್ಲಿ ಹೇಳಿದ್ದಾರೆ. ಲೋಕಸಭೆ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ನಲ್ಲಿ ಪ್ರಮುಖ ಬದಲಾವಣೆಯಾಗಲಿದೆ, ಸಚಿವ ಸಂಪುಟಕ್ಕೆ ಸರ್ಜರಿಯಾಗಲಿದೆ ಎಂಬ ವದಂತಿಗಳಿಗೆ ನಾಯಕರುಗಳ ಇಂತಹ ಮಾತುಗಳು ಪುಷ್ಠಿ ನೀಡುತ್ತವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT