ಎಚ್.ಡಿ.ದೇವೇಗೌಡ 
ರಾಜಕೀಯ

ಲೋಕಸಭೆ ಚುನಾವಣೆ ನಂತರ ರಾಜ್ಯ ಸರ್ಕಾರ ತಾನಾಗಿಯೇ ಪತನವಾಗಲಿದೆ: ದೇವೇಗೌಡ

ಲೋಕಸಭೆ ಚುನಾವಣೆ ಬಳಿಕ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ತಾನಾಗಿಯೇ ಪತನವಾಗಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮಂಗಳವಾರ ಹೇಳಿದ್ದಾರೆ.

ಹಾಸನ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ಲೋಕಸಭೆ ಚುನಾವಣೆ ಬಳಿಕ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ತಾನಾಗಿಯೇ ಪತನವಾಗಲಿದೆ ಎಂದು ಮಂಗಳವಾರ ಹೇಳಿದ್ದಾರೆ.

ಇಂದು ಇಬ್ಬೀಡು ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಪ್ರಧಾನಿ, ಚುನಾವಣೆಯ ನಂತರ ನಾನು ಬದುಕುತ್ತೇನೆ. ಆದರೆ ಕಾಂಗ್ರೆಸ್ ಅಸ್ತಿತ್ವದಲ್ಲಿ ಇರುವುದಿಲ್ಲ ಎಂದರು.

91 ವರ್ಷ ತುಂಬಿದ ನಂತರ ಅರಳುಮರಳು ಎಂದು ತಮ್ಮನ್ನು ಟೀಕಿಸಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ದೇವೇಗೌಡರು, ಮಹಿಳೆಯರ ವಿರುದ್ಧದ ಹೇಳಿಕೆಗಾಗಿ ತಮ್ಮ ಪುತ್ರ ಎಚ್‌ಡಿ ಕುಮಾರಸ್ವಾಮಿ(ಎಚ್‌ಡಿಕೆ) ವಿರುದ್ಧ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆಯನ್ನು ಖಂಡಿಸಿದರು. ಎಚ್‌ಡಿಕೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿಲ್ಲ, ಅದನ್ನು ರಾಜಕೀಯ ಲಾಭಕ್ಕಾಗಿ ತಿರುಚಲಾಗಿದೆ ಎಂದರು.

ಕಾಂಗ್ರೆಸ್ ನಾಯಕರು ಎಚ್ ಡಿಕೆ ಬಗ್ಗೆ ಸುಳ್ಳು ಹೇಳಿಕೆ ನೀಡಿ ಜನರ ಗಮನ ಸೆಳೆಯುತ್ತಿದ್ದಾರೆ. ಮುಖ್ಯಮಂತ್ರಿಯಾಗಿ ಎಚ್‌ಡಿಕೆ ಜಾರಿಗೆ ತಂದ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಶ್ಲಾಘಿಸಿದ ಗೌಡರು, ಸಮಾಜದ ವಿವಿಧ ವರ್ಗಗಳಿಗೆ ಅವರು ನೀಡಿದ ಕೊಡುಗೆಗಳನ್ನು ಜನರು ಸ್ಮರಿಸಬೇಕು ಎಂದು ಹೇಳಿದರು.

ಜೆಡಿಎಸ್ ಮತ್ತು ತಮ್ಮ ಕುಟುಂಬದ ಸದಸ್ಯರನ್ನು ಟಾರ್ಗೆಟ್ ಮಾಡುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ದೇವೇಗೌಡರು, ನಾನು ಸಹ ಗಂಭೀರ ಆರೋಪಗಳನ್ನು ಮಾಡುವ ಮೂಲಕ ಡಿಕೆ ಶಿವಕುಮಾರ್ ಅವರ ಇಮೇಜ್‌ಗೆ ಧಕ್ಕೆ ತರಬಹುದು. ಆದರೆ ಈ ವಯಸ್ಸಿನಲ್ಲಿ ಅದನ್ನು ಮಾಡಲು ಬಯಸುವುದಿಲ್ಲ ಎಂದರು.

ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾದಲ್ಲಿ ಪ್ರಧಾನಿಯಾಗಲು ಯಾವುದೇ ಶ್ರೇಷ್ಠ ನಾಯಕ ಇಲ್ಲ ಎಂದು ಪುನರುಚ್ಚರಿಸಿದ ದೇವೇಗೌಡರು, ಸೋನಿಯಾ ಗಾಂಧಿಯವರು ಪಕ್ಷ ಮತ್ತು ಕೇಂದ್ರದಲ್ಲಿ ಆಗಿನ ಕಾಂಗ್ರೆಸ್ ಸರ್ಕಾರದ ಕೇಂದ್ರ ಸಚಿವ ಸಂಪುಟವನ್ನು ನಿಯಂತ್ರಿಸಿದ್ದರು ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT