ಎಚ್.ಡಿ ದೇವೇಗೌಡ 
ರಾಜಕೀಯ

9 ವರ್ಷದ ಬಾಲಕಿಯನ್ನು ಅಪಹರಿಸಿ ಆಸ್ತಿ ಬರೆಸಿಕೊಂಡಿದ್ದಕ್ಕೆ ಡಿಕೆಶಿ 'ಕೈ' ಬಲಪಡಿಸಬೇಕಾ?: ದೇವೇಗೌಡ ಕಿಡಿ

ಬಿಡದಿ ಬಳಿಯ ರಸ್ತೆ ಬದಿಯ ಜಾಗ ಬರೆಸಿಕೊಳ್ಳಲು ಒಂಬತ್ತು ವರ್ಷದ ಹೆಣ್ಣು ಮಗಳ ಕಣ್ಣಿಗೆ ಬಟ್ಟೆ ಕಟ್ಟಿ ಕೂಡಿ ಹಾಕಿದ್ದರಲ್ಲ ಅದಕ್ಕೆ ಅವರ ಕೈ ಇನ್ನಷ್ಟು ಬಲಪಡಿಸಬೇಕಾ ಎಂದು ಎಚ್.ಡಿ ದೇವೇಗೌಡ ಪ್ರಶ್ನಿಸಿದ್ದಾರೆ.

ಚಿಕ್ಕಮಗಳೂರು: ಬಿಡದಿ ಬಳಿಯ ರಸ್ತೆ ಬದಿಯ ಜಾಗ ಬರೆಸಿಕೊಳ್ಳಲು ಒಂಬತ್ತು ವರ್ಷದ ಹೆಣ್ಣು ಮಗಳ ಕಣ್ಣಿಗೆ ಬಟ್ಟೆ ಕಟ್ಟಿ ಕೂಡಿ ಹಾಕಿದ್ದರಲ್ಲ ಅದಕ್ಕೆ ಅವರ ಕೈ ಇನ್ನಷ್ಟು ಬಲಪಡಿಸಬೇಕಾ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಪ್ರಶ್ನಿಸಿದ್ದಾರೆ.

ಮೂಡಿಗೆರೆ ತಾಲೂಕಿನಲ್ಲಿ ಮೈತ್ರಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪರ ಮತಯಾಚನೆ ಮಾಡಿದ ದೇವೇಗೌಡರು, ಒಕ್ಕಲಿಗ ಸಮುದಾಯ ಹೆಚ್ಚಿರುವ ಕಡೆ ನನ್ನ ಕೈ ಬಲಪಡಿಸಿ ಎಂದು ಹೇಳುತ್ತಿರುವ ಡಿ.ಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದರು. ಅವರ ಕೈಯನ್ನ ಏಕೆ ಬಲಪಡಿಸಬೇಕು? 9 ವರ್ಷದ ಹುಡುಗಿಯನ್ನು ಎತ್ತುಕೊಂಡು ಹೋಗಿ ಆಸ್ತಿ ಬರೆಸಿಕೊಂಡರಲ್ಲಾ ಅದಕ್ಕಾ ಎಂದು ಪ್ರಶ್ನಿಸಿದ್ದಾರೆ.

ಅಮೆರಿಕದಲ್ಲಿ ದುಡಿದು ತಂದಿದ್ದ ಹಣದಲ್ಲಿ ಉದ್ಯಮಿಯೊಬ್ಬರು ಬಿಡದಿ ಬಳಿ ಐ.ಟಿ ಕಂಪನಿ ಸ್ಥಾಪನೆ ಮಾಡಲು ಮುಂದಾಗಿದ್ದರು. ಅದರ ಹಿಂದಿನ ದಿನ ಇವರು ಸುಳ್ಳು ಕ್ರಯಪತ್ರ ಸಿದ್ಧಡಿಸಿದ್ದರು. ನನ್ನ ಬಳಿ ದಾಖಲೆ ಇದೆ ಎಂದು ಅದನ್ನು ಮುಂದಿಟ್ಟುಕೊಂಡು ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ಗೆ ಹೋಗಿದ್ದರು. ಎರಡೂ ಕಡೆ ಮುಖಭಂಗವಾದ ಬಳಿಕ ಆ ವ್ಯಕ್ತಿಯ ಮಗಳನ್ನು ಗಂಗಮ್ಮ ತಿಮ್ಮಯ್ಯ ಕಲ್ಯಾಣ ಮಂಟಪದ ಪಕ್ಕದ ಮನೆಯಲ್ಲಿ ಒಂಬತ್ತು ದಿನ ಇಟ್ಟಿದ್ದರು. ಆಸ್ತಿ ಪತ್ರಕ್ಕೆ ಸಹಿ ಹಾಕಿ ನಿಮ್ಮ ಮಗಳನ್ನು ಕರೆದುಕೊಂಡು ಹೋಗಿ ಎಂದು ಧಮ್ಕಿ ಹಾಕಿದ್ದರು ಇಂಥವರ ಕೈ ಬಲಪಡಿಸಬೇಕಾ’ ಎಂದು ಮರುಪ್ರಶ್ನಿಸಿದರು.

ಅಲ್ಲಿಗೆ ಹೋದಾಗ, ಆ ಮಗುವನ್ನ ದೂರ ಕೂರಿಸಿ ಕಣ್ಣಿಗೆ ಕಟ್ಟಿದ್ದ ಬಟ್ಟೆ ಬಿಚ್ಚುತ್ತಾರೆ. ಆ ಮಗು ಅಪ್ಪ ಅಂತ ಓಡಿ ಬರುತ್ತೆ, ಮತ್ತೆ ಆ ಮಗುವನ್ನ ಒಳಗೆ ಕರೆದುಕೊಂಡು ಹೋಗುತ್ತಾರೆ. ಇದನ್ನ ಎಲೆಕ್ಷನ್ ನಲ್ಲಿ ಬಳಸಿ ಅಂತ ಲಾಯರ್ ತಂದು ಕೊಟ್ಟರು.

ಆ ಪುಣ್ಯಾತ್ಮ ನಾನು ಕರ್ನಾಟಕದಲ್ಲಿ ಯಾರಿಗೂ ಮತ ಹಾಕಲ್ಲ. ನಾನು ವೋಟರ್ ಲಿಸ್ಟ್ ನಲ್ಲಿ ಇಲ್ಲ. ಈ ಕರ್ನಾಟಕದ ಸಹವಾಸ ಸಾಕು ಅಂತಾರೆ. ನನಗೆ ಅವರ ಹೆಸರು ಮರೆತು ಹೋಗಿದೆ. ಆಮೇಲೆ ಅವರು ಜೀವನಕ್ಕಾಗಿ ಬೇರೆಯವರ ಅಧೀನದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಹೆಚ್‍ಡಿಡಿ ಗರಂ ಆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel