ಮಾಲೀಕಯ್ಯ ಗುತ್ತೇದಾರ್ 
ರಾಜಕೀಯ

ಅಫಜಲಪುರದಲ್ಲಿ ಸಹೋದರರ ಸವಾಲ್: ಬಿಜೆಪಿ ವಿರುದ್ಧ ಮಾಲೀಕಯ್ಯ ಗುತ್ತೇದಾರ್ ಮುನಿಸು; ಕಾಂಗ್ರೆಸ್ ಸೇರುವ ಸಾಧ್ಯತೆ

ತಮ್ಮ ಸಹೋದರ ನಿತಿನ್ ಗುತ್ತೇದಾರ್ ಅವರನ್ನು ಕೇಸರಿ ಪಕ್ಷಕ್ಕೆ ಸೇರಿಸಿಕೊಂಡಿದ್ದರಿಂದ ಅಸಮಾಧಾನಗೊಂಡಿರುವ ಮಾಜಿ ಸಚಿವ, ಬಿಜೆಪಿ ಮುಖಂಡ ಮಾಲೀಕಯ್ಯ ಗುತ್ತೇದಾರ್ ಅವರು ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆ ಇದೆ. ಏಪ್ರಿಲ್ 19ರಂದು ಕಾಂಗ್ರೆಸ್ ಸೇರುವ ಕುರಿತು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವುದಾಗಿ ಹೇಳಿದರು.

ಕಲಬುರಗಿ: ತಮ್ಮ ಸಹೋದರ ನಿತಿನ್ ಗುತ್ತೇದಾರ್ ಅವರನ್ನು ಕೇಸರಿ ಪಕ್ಷಕ್ಕೆ ಸೇರಿಸಿಕೊಂಡಿದ್ದರಿಂದ ಅಸಮಾಧಾನಗೊಂಡಿರುವ ಮಾಜಿ ಸಚಿವ, ಬಿಜೆಪಿ ಮುಖಂಡ ಮಾಲೀಕಯ್ಯ ಗುತ್ತೇದಾರ್ ಅವರು ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆ ಇದೆ.

ಮಂಗಳವಾರ ತಮ್ಮ ಬೆಂಬಲಿಗರ ಸಭೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಇತರ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಅವರು 'ಭ್ರಷ್ಟ' ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ ಅವರು, ಏಪ್ರಿಲ್ 19ರಂದು ಕಾಂಗ್ರೆಸ್ ಸೇರುವ ಕುರಿತು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವುದಾಗಿ ಹೇಳಿದರು.

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಅವರ ಪುತ್ರ ಬಿವೈ ವಿಜಯೇಂದ್ರ ಅವರು ಪಕ್ಷದ ನಾಯಕರಾದ ಕೆಎಸ್ ಈಶ್ವರಪ್ಪ, ಸಂಗಣ್ಣ ಕರಡಿ ಮತ್ತು ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನಿರಾಕರಿಸಿದ್ದಾರೆ ಎಂದು ಗುತ್ತೇದಾರ್ ದೂರಿದ್ದಾರೆ.

ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಮಿತಿಮೀರಿತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ವಿಪರೀತ ಭ್ರಷ್ಟಾಚಾರ ಇತ್ತು. ಈ ಬಗ್ಗೆ ಅರುಣ್ ಸಿಂಗ್ ಅವರ ಗಮನಕ್ಕೆ ತಂದಿದ್ದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಗ್ಯಾರಂಟಿ ಯೋಜನೆಗಳಿಂದಲ್ಲ. ಬದಲಾಗಿ ಬಿಜೆಪಿ ಭ್ರಷ್ಟಾಚಾರದಿಂದ ಎಂದು ಆರೋಪಿದರು.

ಬಿಜೆಪಿ ಬಿಡಬೇಕೋ ಬೇಡವೋ ಎಂಬ ಬಗ್ಗೆ ಇದೇ 19ರಂದು ಅಂತಿಮ ತೀರ್ಮಾನ ಕೈಗೊಳ್ಳುತ್ತೇನೆ. ಬಿಜೆಪಿ ಬಿಡುವಂತೆ ಇಂದಿನ ಸಭೆಯಲ್ಲಿ ಕಾರ್ಯಕರ್ತರು ತಿಳಿಸಿದ್ದಾರೆ. ಕಾಂಗ್ರೆಸ್ ಸೇರುವಂತೆಯೂ ಹಲವರು ಸಲಹೆ ನೀಡಿದ್ದಾರೆ. ಬಹುತೇಕ ಕಾರ್ಯಕರ್ತರು ನಾನು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ದ ಎಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪಕ್ಷಕ್ಕೆ ಬರುವಂತೆ ಆಹ್ವಾನಿದ್ದಾರೆ. ಇದೇ 19ರಂದು ನನ್ನ ನಿರ್ಧಾ ರ ತಿಳಿಸುತ್ತೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?