ಸಿಎಂ ಸಿದ್ದರಾಮಯ್ಯ 
ರಾಜಕೀಯ

ಕೋವಿಡ್ ಭ್ರಷ್ಟಾಚಾರ ಪ್ರಕರಣದಲ್ಲಿ ಸುಧಾಕರ್ ಜೈಲಿಗೆ ಹೋಗುತ್ತಾರೆ: ಸಿಎಂ ಸಿದ್ದರಾಮಯ್ಯ

ಕೋವಿಡ್ ಭ್ರಷ್ಟಾಚಾರದ ತನಿಖೆಗೆ ಈಗಾಗಲೇ ಆಯೋಗ ರಚಿಸಿದ್ದೇವೆ. ಮಾಹಿತಿ ಪ್ರಕಾರ ಎಲ್ಲಾ ದಾಖಲೆಗಳು ಅವರ ವಿರುದ್ಧವೇ ಇದೆ. ಹಾಗಾಗಿ ಸುಧಾಕರ್​ ನೂರಕ್ಕೆ ನೂರು ಜೈಲಿಗೆ ಹೋಗುತ್ತಾರೆ ಎಂದು ಸಿಎಂ ಹೇಳಿದ್ದಾರೆ.

ಚಿಕ್ಕಬಳ್ಳಾಪುರ: ಕೋವಿಡ್ ಭ್ರಷ್ಟಾಚಾರ ಪ್ರಕರಣದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅವರು ಜೈಲಿಗೆ ಹೋಗುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಇಂದು ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಪರವಾಗಿ ಪ್ರಚಾರ ನಡೆಸಿದ ಸಿಎಂ ಸಿದ್ದರಾಮಯ್ಯ, ‘ಸುಧಾಕರ್ ಆರೋಗ್ಯ ಸಚಿವರಾಗಿದ್ದಾಗ ರಾಜ್ಯದಲ್ಲಿ ಬಹಳಷ್ಟು ಭ್ರಷ್ಟಾಚಾರ ಎಸಗಿದ್ದಾರೆ. ಭ್ರಷ್ಟರು ಸಂಸತ್​ಗೆ ಹೋದರೆ ಭ್ರಷ್ಟಾಚಾರ ಮತ್ತಷ್ಟು ಹೆಚ್ಚಾಗುತ್ತದೆ. ಕೋವಿಡ್ ಭ್ರಷ್ಟಾಚಾರದ ತನಿಖೆಗೆ ಈಗಾಗಲೇ ಆಯೋಗ ರಚಿಸಿದ್ದೇವೆ. ಮಾಹಿತಿ ಪ್ರಕಾರ ಎಲ್ಲಾ ದಾಖಲೆಗಳು ಅವರ ವಿರುದ್ಧವೇ ಇದೆ. ಹಾಗಾಗಿ ಸುಧಾಕರ್​ ನೂರಕ್ಕೆ ನೂರು ಜೈಲಿಗೆ ಹೋಗುತ್ತಾರೆ ಎಂದರು.

ಕೋವಿಡ್ ನಲ್ಲೂ ಭ್ರಷ್ಟಾಚಾರ ನಡೆಸಿದ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮೋದಿ ಪ್ರಚಾರ ನಡೆಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಹೀನಾಯವಾಗಿ ಸೋಲು ಅನುಭವಿಸಿದೆ. ಈಗ ಲೋಕಸಭೆ ಚುನಾವಣೆಯಲ್ಲೂ ಅದೇ ಗತಿ ಆಗುತ್ತದೆ ಎಂದರು.

ಸುಧಾಕರ್ ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಿ ಹಣ ಲೂಟಿ ಹೊಡೆದಿದ್ದಾರೆ. ಹೀಗಾಗಿ ವಿಧಾನಸಭೆ ಚುನಾವಣೆಯಲ್ಲಿ ಅವರನ್ನು ಸೋಲಿಸಿದ್ದೀರಿ. ಈಗ ರಾಜಕೀಯ ಲಾಭಿ ನಡೆಸಿ ಎನ್ ಡಿಎ ಟಿಕೆಟ್ ಪಡೆದಿದ್ದಾರೆ ಎಂದು ವಾಗ್ದಾಳಿ ನಡೆಸಿದ ಸಿಎಂ, ನರೇಂದ್ರ ಮೋದಿ ಹೇಳಿದಂತೆ ನಡೆದುಕೊಂಡಿಲ್ಲ. ಕೊಟ್ಟ ಭರವಸೆಗಳನ್ನು ಈಡೆರಿಸಿಲ್ಲ. ದೇಶದ ಜನರ ಭರವಸೆ ಹುಸಿಯಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಮೋದಿ ಅಚ್ಚೇ ದಿನ್ ಆಯೇಗಾ ಎಂದಿದ್ದರು, ಇದುವರೆಗೂ ಒಳ್ಳೆದಿನ ಬರಲಿಲ್ಲ ಎಂದರು.

ಕೊರೋನಾ ಸಂದರ್ಭದಲ್ಲೂ ಭ್ರಷ್ಟಾಚಾರ ನಡೆಸಿದವರಿಗೆ ತಕ್ಕ ಕಾನೂನಿನ ಶಾಸ್ತಿ ಆಗೇ ಆಗುತ್ತದೆ. ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆ ಮುಗಿದ ಮೇಲೆ ತಪ್ಪಿತಸ್ಥರಿಗೆ ಯಾವ ಶಿಕ್ಷೆ ಆಗುತ್ತದೆ ಎಂದು ಕಾದುನೋಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್