ಸಿಎಂ ಸಿದ್ದರಾಮಯ್ಯ 
ರಾಜಕೀಯ

ಲೋಕಸಭೆ ಚುನಾವಣೆ ಸತ್ಯ-ಸುಳ್ಳಿನ ನಡುವಿನ ಹೋರಾಟವಾಗಿದೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ ಲೋಕಸಭಾ ಚುನಾವಣೆ ಸತ್ಯ ಮತ್ತು ಸುಳ್ಳಿನ ನಡುವಿನ ಹೋರಾಟವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದರು.

ಮಂಡ್ಯ: ಈ ಬಾರಿಯ ಲೋಕಸಭಾ ಚುನಾವಣೆ ಸತ್ಯ ಮತ್ತು ಸುಳ್ಳಿನ ನಡುವಿನ ಹೋರಾಟವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದರು.

ಕಾಂಗ್ರೆಸ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕಕ್ಕೆ ಆಗಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುವಲ್ಲಿ 27 ಸಂಸದರು ವಿಫಲರಾಗಿದ್ದಾರೆ. ಹೀಗಾಗಿ ಈ ಬಾರಿ ಬಿಜೆಪಿಯನ್ನು ತಿರಸ್ಕರಿಸುವಂತೆ ಮತದಾರರಿಗೆ ಕರೆ ನೀಡಿದರು.

ಇದೇ ವೇಳೆ ಕುಮಾರಸ್ವಾಮಿ ವಿರುದ್ದ ವಾಗ್ದಾಳಿ ನಡೆಸಿದ ಅವರು, ಮುಖ್ಯಮಂತ್ರಿಯಾಗಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ಗೆಲುವನ್ನು ಖಚಿತಪಡಿಸಿಕೊಳ್ಳಲಾಗದ ಕುಮಾರಸ್ವಾಮಿ ಅವರು ಇದೀಗ ಮಂಡ್ಯದಿಂದ ಸ್ಪರ್ಧಿಸುತ್ತಿದ್ದು, ಅವರೂ ಸೋಲಿನ ರುಚಿ ನೋಡಲಿದ್ದಾರೆ ಎಂದು ಹೇಳಿದರು.

ಮಂಡ್ಯದ ಜನರು ಬುದ್ಧಿವಂತ ನಿರ್ಧಾರಗಳನ್ನು ತೆಗೆದುಕೊಳ್ಳಲು ಹೆಸರುವಾಸಿಯಾಗಿದ್ದಾರೆ. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣ ಗೌಡ (ಸ್ಟಾರ್ ಚಂದ್ರು) ಗೆಲುವನ್ನು ಖಚಿತಪಡಿಸುತ್ತಾರೆಂಬ ವಿಶ್ವಾಸವಿದೆ. ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧಿಸಬೇಕಿದ್ದ ಕುಮಾರಸ್ವಾಮಿ ಆ ಕ್ಷೇತ್ರದಲ್ಲಿ ಸೋಲಿನ ಭೀತಿಯಿಂದ ಮಂಡ್ಯಕ್ಕೆ ಬಂದಿದ್ದಾರೆ. ಇದೀಗ ಮಂಡ್ಯ ಜನ ಅವರಿಗೂ ಸೋಲಿನ ರುಚಿ ತೋರಿಸಬೇಕೆಂದು ತಿಳಿಸಿದರು.

ಕಾಂಗ್ರೆಸ್ ಗ್ಯಾರಂಟಿ ಯೋಜನೆಯಿಂದ 1.91 ಕೋಟಿ ಮಹಿಳೆಯರು ಪ್ರಯೋಜನ ಪಡೆದಿದ್ದಾರೆ. 1.15 ಕೋಟಿ ಮಹಿಳೆಯರಿಗೆ ಯೋಜನೆಯಡಿ ತಿಂಗಳಿಗೆ 2,000 ರೂ. ಸಿಗುತ್ತಿದೆ. ಹೊಸ ಮೈಶುಗರ್ ಕಾರ್ಖಾನೆಗೆ ಸರಕಾರ 50 ಕೋಟಿ ಬಿಡುಗಡೆ ಮಾಡಿದೆ. ಇದು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಬೃಂದಾವನ ಗಾರ್ಡನ್ ಅಭಿವೃದ್ಧಿಪಡಿಸುತ್ತದೆ. ನೀರಾವರಿ ಕಾಲುವೆಗಳ ಸಂಪೂರ್ಣ ಆಧುನೀಕರಣವನ್ನು ಮಾಡಲಾಗುತ್ತದೆ. ಮೇಕೆದಾಟು ಯೋಜನೆಯನ್ನು ಪೂರ್ಣಗೊಳಿಸುವ ಪ್ರತಿಜ್ಞೆ ಮಾಡಿದ್ದೇವ. ‘ಡಬಲ್ ಎಂಜಿನ್ ಸರ್ಕಾರ್’ ಇದ್ದಾಗಲೂ ಕೇಂದ್ರ ಅದಕ್ಕೆ ಒಪ್ಪಿಗೆ ನೀಡಿರಲಿಲ್ಲ. ಕಷ್ಟದ ನಡುವೆಯೂ ಈ ಭಾಗದ ಜನರಿಗೆ ನೀರು ಕೊಟ್ಟಿದ್ದೇವೆ ಹೇಳಿದರು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾತನಾಡಿ, ಕಳೆದ ಚುನಾವಣೆಯಲ್ಲಿ ಜೆಡಿಎಸ್ ಅನ್ನು ಬಿಜೆಪಿಯ ಬಿ ಟೀಮ್ ಎಂದು ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಕರೆದಿದ್ದರು. ಇದೀಗ ಆ ಪಕ್ಷ ಬಿಜೆಪಿಯೊಂದಿಗೆ ಅಧಿಕೃತವಾಗಿ ಕೈಜೋಡಿಸಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್