ಬೆಳಗಾವಿಯಲ್ಲಿ ಬುಧವಾರ ನಡೆದ ರೋಡ್‌ ಶೋನಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್, ಬಿಎಸ್ ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ ಸಾವಂತ್, ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ, ಹಾಲಿ ಸಂಸದೆ ಮಂಗಳಾ ಅಂಗಡಿ, ಶಾಸಕ ಅಭಯ ಪಾಟೀಲ ಇದ್ದರು. 
ರಾಜಕೀಯ

ಬೆಳಗಾವಿ; ಬೃಹತ್ ರೋಡ್ ಶೋ ಮೂಲಕ ಶೆಟ್ಟರ್ ಶಕ್ತಿ ಪ್ರದರ್ಶನ; ಬಿಎಸ್‌ವೈ, ಪ್ರಮೋದ್ ಸಾವಂತ್‌ ಸಾಥ್

ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಬುಧವಾರ ಅದ್ಧೂರಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಿದರು. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ ಸಾವಂತ್, ಸಂಸದೆ ಮಂಗಳಾ ಅಂಗಡಿ, ಮಾಜಿ ಸಚಿವ ಮುರುಗೇಶ್ ನಿರಾಣಿ ಶೆಟ್ಟರ್ ಅವರಿಗೆ ಸಾಥ್ ನೀಡಿದರು.

ಬೆಳಗಾವಿ: ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಬುಧವಾರ ಅದ್ಧೂರಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಿದರು. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ ಸಾವಂತ್, ಸಂಸದೆ ಮಂಗಳಾ ಅಂಗಡಿ, ಮಾಜಿ ಸಚಿವ ಮುರುಗೇಶ್ ನಿರಾಣಿ ಶೆಟ್ಟರ್ ಅವರಿಗೆ ಸಾಥ್ ನೀಡಿದರು.

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ ಪಾಟೀಲ, ಬಾಲಚಂದ್ರ ಜಾರಕಿಹೊಳಿ, ದುರ್ಯೋಧನ ಐಹೊಳೆ, ಎಂಎಲ್‌ಸಿ ಹನುಮಂತ ನಿರಾಣಿ, ಮಾಜಿ ಶಾಸಕರಾದ ಅನಿಲ ಬೆನಕೆ, ಪ್ರಭಾಕರ ಕೋರೆ ಸೇರಿದಂತೆ ಪಕ್ಷದ ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಸಮಾದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ನಗರದ ಸಮಾದೇವಿ ಗಲ್ಲಿಯಿಂದ ಹೊರಟ ಮೆರವಣಿಗೆ ಖಡೇ ಬಜಾರ್ ರಸ್ತೆ, ಗಣಪತ್ ಗಲ್ಲಿ, ಶನಿವಾರ ಖೂತ್, ಕಾಕತೀವ್ಸ್, ರಾಣಿ ಚನ್ನಮ್ಮ ವೃತ್ತದ ಮೂಲಕ ಸಾಗಿತು.

ಪ್ರಧಾನಿ ನರೇಂದ್ರ ಮೋದಿ, ಛತ್ರಪತಿ ಶಿವಾಜಿ, ರಾಣಿ ಚನ್ನಮ್ಮ, ಶೆಟ್ಟರ್ ಪರ ಘೋಷಣೆಗಳನ್ನು ಕೂಗುತ್ತಾ ವಾದ್ಯಗೋಷ್ಠಿ, ಪಟಾಕಿ ಸಿಡಿಸುವ ಮೂಲಕ ರಾಣಿ ಚನ್ನಮ್ಮ ವೃತ್ತದಲ್ಲಿ ಮುಖಂಡರಿಗೆ ಭವ್ಯ ಸ್ವಾಗತ ಕೋರಲಾಯಿತು.

ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಯಡಿಯೂರಪ್ಪ, ಶೆಟ್ಟರ್ ಎರಡು ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರ‍್ಯಾಲಿಯಲ್ಲಿ ಜನಸಾಗರವೇ ಹರಿದು ಬರುತ್ತಿರುವುದು ಶೆಟ್ಟರ್ ಗೆಲುವು ನಿಶ್ಚಿತ ಎಂಬುದನ್ನು ಸೂಚಿಸುತ್ತದೆ ಎಂದರು.

‘ಅಬ್ ಕಿ ಬಾರ್ ಚೌರ್ ಸೌ ಪಾರ್’ ಎಂಬ ಪಕ್ಷದ ಕರೆಯನ್ನು ಅರಿತುಕೊಳ್ಳಲು ಮತದಾರರು ಬಿಜೆಪಿ ಅಭ್ಯರ್ಥಿಯನ್ನು ಭಾರಿ ಅಂತರದಿಂದ ಆಯ್ಕೆ ಮಾಡಬೇಕು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಬರಲಿದೆ. ಕರ್ನಾಟಕದಲ್ಲೂ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಸಾವಂತ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT