ಕೆ.ಎಸ್.ಈಶ್ವರಪ್ಪ 
ರಾಜಕೀಯ

ಉಚ್ಛಾಟನೆಗೆ ಹೆದರಲ್ಲ, ಗೆದ್ದು ಮರಳಿ ಬಿಜೆಪಿಗೆ ಹೋಗುವೆ: ಕೆ.ಎಸ್.ಈಶ್ವರಪ್ಪ

ಉಚ್ಚಾಟನೆಗೆ ಹೆದರುವುದಿಲ್ಲ. ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಿ ಗೆಲುವು ಸಾಧಿಸಿ ಬಿಜೆಪಿಗೆ ರಳಿ ಹೋಗುತ್ತೇನೆಂದು ಕೆ.ಎಸ್.ಈಶ್ವರಪ್ಪ ಅವರು ಸೋಮವಾರ ಹೇಳಿದರು.

ಶಿವಮೊಗ್ಗ: ಉಚ್ಚಾಟನೆಗೆ ಹೆದರುವುದಿಲ್ಲ. ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಿ ಗೆಲುವು ಸಾಧಿಸಿ ಬಿಜೆಪಿಗೆ ರಳಿ ಹೋಗುತ್ತೇನೆಂದು ಕೆ.ಎಸ್.ಈಶ್ವರಪ್ಪ ಅವರು ಸೋಮವಾರ ಹೇಳಿದರು.

ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವಿರುದ್ಧ ಬಂಡಾಯವೆದ್ದು, ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಿಂದ ಸ್ಪರ್ಧೆ ಮಾಡುತ್ತಿರುವ ಕೆಎಸ್ ಈಶ್ವರಪ್ಪಗೆ ಬಿಜೆಪಿ ಶಾಕ್ ನೀಡಿದ್ದು, 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆಗೊಳಿಸಿದೆ.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಈಶ್ವರಪ್ಪ ಅವರು, ಉಚ್ಚಾಟನೆ ಬಗ್ಗೆ ನನಗೆ ಯಾವುದೇ ಪತ್ರ ಬಂದಿಲ್ಲ. ನಾನು ಯಾವ ಉಚ್ಛಾಟನೆಗೆ ಹೆದರುವುದಿಲ್ಲ. ಈ ಬಾರಿ ಲೋಕಸಭೆ ಚುನಾವಣೆ ಸ್ಪರ್ಧೆ ಮಾಡಿ ಗೆಲ್ಲುತ್ತೇನೆ, ಮತ್ತೆ ವಾಪಸ್ ಬಿಜೆಪಿಗೆ ಹೋಗುತ್ತೇನೆ ಎಂದು ಹೇಳಿದರು.

ನಾನು ಪಕ್ಷೇತರ ಅಭ್ಯರ್ಥಿ ಆಗಿ ಕಣಕ್ಕೆ ನಿರ್ಧಾರ ಮಾಡಿದ್ದೇನೆ. ಅಂದಿನಿಂದ ಇಂದಿನವರೆಗೆ ನಾನು ಅದನ್ನೇ ಹೇಳಿದ್ದೇನೆ. ನನ್ನ ಸ್ಪರ್ಧೆ ಬಗ್ಗೆ ಬಿಎಸ್‌ವೈ ಕುಟುಂಬ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದರು. ಮೋದಿ ಕಾರ್ಯಕ್ರಮಕ್ಕೆ ಈಶ್ವರಪ್ಪ ಬರುತ್ತಾರೆ ಎಂದರು, ಬಳಿಕ ನಾಮಪತ್ರ ಹಾಕುವುದಿಲ್ಲ ಎಂದಿದ್ದರು, 19ನೇ ತಾರೀಖು ಅವರಿಗೆ ಶಾಕ್ ನೀಡಿತ್ತು.

ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದು ಶತಃಸಿದ್ಧ. ಗೆಲ್ಲುವುದು ನಿಶ್ಚಿತ ಎಂದು ಹೇಳಿದ್ದೆನು. ಅದರಂತೆ ನಾಮಪತ್ರ ಹಿಂತೆಗೆದುಕೊಳ್ಳದೇ ಕಣದಲ್ಲಿಯೇ ಉಳಿದಿದ್ದೇನೆ. ನಾಳೆಯಿಂದ ಇನ್ನಷ್ಟು ಬಿರುಸಾಗಿ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಳ್ಳುವೆ ಎಂದು ತಿಳಿಸಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಶುಭ್ ಮನ್ ಗಿಲ್ ದಾಖಲೆಯನ್ನೇ ಹಿಂದಿಕ್ಕಿದ Rishabh Pant, ಡಬ್ಲ್ಯೂಟಿಸಿಯಲ್ಲಿ ಅತ್ಯಧಿಕ ರನ್, ಅಗ್ರಸ್ಥಾನ