ರಾಜಕೀಯ

ಡಾ.ಮಂಜುನಾಥ್ ಅವರನ್ನು ಕೇಂದ್ರ ಸಂಪುಟಕ್ಕೆ ಸೇರಿಸಲು ಮೋದಿ ಮತ್ತು ಅಮಿತ್ ಶಾ ಉತ್ಸುಕ: ಹೆಚ್ ಡಿ ದೇವೇಗೌಡ

ಚಿಕ್ಕಬಳ್ಳಾಪುರದಲ್ಲಿ ಇತ್ತೀಚೆಗೆ ಪ್ರಧಾನಿ ಮೋದಿ ಜೊತೆಗಿನ ಸಂವಾದವನ್ನು ನೆನಪಿಸಿಕೊಂಡ ಗೌಡರು, ಮೋದಿ ಅವರು ನಮ್ಮ ನೋವನ್ನು ಅರ್ಥಮಾಡಿಕೊಳ್ಳುತ್ತಾರೆ. ಕಾವೇರಿ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ದೇವೇಗೌಡರು ಹೇಳಿದ್ದಾರೆ.

ಬೆಂಗಳೂರು: ಕೇಂದ್ರ ಸಚಿವ ಸಂಪುಟಕ್ಕೆ ತಮ್ಮ ಅಳಿಯ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರನ್ನು ಸೇರ್ಪಡೆ ಮಾಡಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ಸುಕರಾಗಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಸುಳಿವು ನೀಡಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೂ ತಾವು ವಿರಮಿಸುವುದಿಲ್ಲ ಎಂದು ಗೌಡರು ಪಣತೊಟ್ಟಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ ನಿನ್ನೆ ಮಂಗಳವಾರ ಡಾ.ಮಂಜುನಾಥ್ ಪರ ಪ್ರಚಾರ ನಡೆಸಿದ ಅವರು, ಮಂಜುನಾಥ್ ಅವರು ತಮ್ಮ ವೈದ್ಯ ವೃತ್ತಿಯಲ್ಲಿ ಎಂಟು ಲಕ್ಷಕ್ಕೂ ಅಧಿಕ ಆಪರೇಷನ್ ಮಾಡಿ ಬಡವರಿಗೆ ಸಹಾಯ ಮಾಡಿದ್ದಾರೆ, ಹೀಗಾಗಿ ರಾಷ್ಟ್ರೀಯ ನಾಯಕರು ಅವರನ್ನು ತಮ್ಮ ಸಂಪುಟದಲ್ಲಿ ಸೇರಿಸಬೇಕೆಂದು ಬಯಸಿದ್ದಾರೆ. ನಾನು ಇಲ್ಲಿನ ಜನರನ್ನು ಮತ ಚಲಾಯಿಸುವಂತೆ ಒತ್ತಾಯಿಸುತ್ತೇನೆ ಎಂದು ಕೇಳಿಕೊಂಡರು.

ಕೇಂದ್ರದಲ್ಲಿ ಮೋದಿ ಮತ್ತು ಶಾ ಅವರು ಡಾ ಮಂಜುನಾಥ್ ಅವರ ಶಕ್ತಿಯನ್ನು ಗುರುತಿಸಿ ಬೆಂಗಳೂರು ಗ್ರಾಮಾಂತರದಿಂದ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಲು ಅವಕಾಶ ನೀಡುವಂತೆ ಕೇಳಿಕೊಂಡರು. ಮಂಜುನಾಥ್ ಅವರ ಸೇವೆ ರಾಷ್ಟ್ರಮಟ್ಟದಲ್ಲಿ ಅಗತ್ಯವಿದೆ ಎಂದು ಬಿಜೆಪಿ ನಾಯಕರು ಹೇಳಿದ್ದರು. ಇದು ಅನಿವಾರ್ಯ ಎಂದು ಹೇಳಿದರು ಎಂದರು. ಮಂಜುನಾಥ್ ಅವರು 16 ವರ್ಷಗಳಿಂದ ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ ಸಾಕಷ್ಟು ಗುರುತರ ಕೆಲಸ ಮಾಡಿದ್ದಾರೆ ಎಂದರು.

'ಬಿಎಸ್ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ, ಜಯದೇವದಲ್ಲಿ ಡಾ.ಮಂಜುನಾಥ್‌ಗೆ ಅವಧಿ ವಿಸ್ತರಿಸಿದ್ದರು. ಮಂಜುನಾಥ್ ಅವರು ಆಸ್ಪತ್ರೆಯಲ್ಲಿ ಹಾಸಿಗೆಯ ಸಾಮರ್ಥ್ಯವನ್ನು ಹೆಚ್ಚಿಸಿದರು ಎಂದು ತಮ್ಮ ಅಳಿಯ ಮಾಡಿರುವ ಕೆಲಸ ಬಗ್ಗೆ ಹೇಳಿ ಕ್ಷೇತ್ರದ ಮತದಾರರ ಗಮನ ಸೆಳೆಯುವ ಪ್ರಯತ್ನ ಮಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಗೌಡರು. ಇಂತಹ ಭ್ರಷ್ಟ ಸರ್ಕಾರವನ್ನು ರಾಜ್ಯದಿಂದ ಕಿತ್ತೊಗೆಯುವವರೆಗೂ ನಾನು ವಿರಮಿಸುವುದಿಲ್ಲ. ಮೇ 5ರವರೆಗೆ ಕರ್ನಾಟಕದಾದ್ಯಂತ ಸಂಚರಿಸಿ ಮತ ಯಾಚಿಸುತ್ತೇನೆ ಎಂದರು.

ಮೇಕೆದಾಟು ಮಂಜೂರಾತಿ ಸಿಗಲಿದೆ: ಚಿಕ್ಕಬಳ್ಳಾಪುರದಲ್ಲಿ ಇತ್ತೀಚೆಗೆ ಪ್ರಧಾನಿ ಮೋದಿ ಜೊತೆಗಿನ ಸಂವಾದವನ್ನು ನೆನಪಿಸಿಕೊಂಡ ಗೌಡರು, ಮೋದಿ ಅವರು ನಮ್ಮ ನೋವನ್ನು ಅರ್ಥಮಾಡಿಕೊಳ್ಳುತ್ತಾರೆ. ಕಾವೇರಿ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT