ಬಿಜೆಪಿ-ಕಾಂಗ್ರೆಸ್ ಜಾಹೀರಾತು 
ರಾಜಕೀಯ

ಲೋಕಸಭೆ ಚುನಾವಣೆ 2024: 'ಚೊಂಬು' ಜಾಹೀರಾತಿಗೆ ಕೆರಳಿದ ಬಿಜೆಪಿ, ಕಾಂಗ್ರೆಸ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಕನ್ನಡ ಮತ್ತು ಇಂಗ್ಲಿಷ್‌ ಪತ್ರಿಕೆಗಳ ಮುಖಪುಟದಲ್ಲಿ ಬಿಜೆಪಿ ಬಗ್ಗೆ ಸುಳ್ಳು ಮತ್ತು ಅವಹೇಳನಕಾರಿ ಜಾಹಿರಾತು ನೀಡಿದೆ’ ಎಂದು ಕೆಪಿಸಿಸಿ ಮತ್ತು ಅದರ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

ಬೆಂಗಳೂರು: ಕನ್ನಡ ಮತ್ತು ಇಂಗ್ಲಿಷ್‌ ಪತ್ರಿಕೆಗಳ ಮುಖಪುಟದಲ್ಲಿ ಬಿಜೆಪಿ ಬಗ್ಗೆ ಸುಳ್ಳು ಮತ್ತು ಅವಹೇಳನಕಾರಿ ಜಾಹಿರಾತು ನೀಡಿದೆ’ ಎಂದು ಕೆಪಿಸಿಸಿ ಮತ್ತು ಅದರ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

ಈ ಜಾಹಿರಾತು ನೀಡಿರುವ ಡಿ.ಕೆ.ಶಿವಕುಮಾರ್‌, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ವಿರುದ್ಧ ತಕ್ಷಣವೇ ಎಫ್‌ಐಆರ್‌ ದಾಖಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದೆ.

ಕಾಂಗ್ರೆಸ್‌ ಪಕ್ಷ ಚೊಂಬು ಹೆಸರಿನಲ್ಲಿ ಜಾಹೀರಾತು ನೀಡಿದೆ. ಇದು ಸುಳ್ಳು ಮಾಹಿತಿಗಳಿಂದ ಕೂಡಿರುವ ಮಾನಹಾನಿಕಾರ ಜಾಹಿರಾತು. ವಂಚಿಸಲಾಗಿದೆ ಮತ್ತು ಮೋಸ ಮಾಡಲಾಗಿದೆ ಎಂಬುದಕ್ಕೆ ಆಡು ಮಾತಿನಲ್ಲಿ ಈ ಪದ ಬಳಸಲಾಗುತ್ತದೆ. ವಿಧಾನಸಭಾ ಚುನಾವಣೆಯಲ್ಲೂ ಇದೇ ರೀತಿ ಸುಳ್ಳು ಮಾಹಿತಿಗಳನ್ನು ಜಾಹಿರಾತುಗಳ ಮೂಲಕ ಹರಡಿತ್ತು. ಈ ಜಾಹಿರಾತಿಗಳಿಗೆ ಸಂಬಂಧಿಸಿದ ಪ್ರಕರಣ ಹೈಕೋರ್ಟ್‌ನಲ್ಲಿದೆ. ಇದೀಗ ಕಾಂಗ್ರೆಸ್‌ ಮತ್ತೆ ತನ್ನ ಹಳೇ ಚಾಳಿ ಆರಂಭಿಸಿದೆ ಎಂದು ದೂರಿನಲ್ಲಿ ತಿಳಿಸಿದೆ.

ಕಾಂಗ್ರೆಸ್‌ ಪಕ್ಷ ಸುಳ್ಳು ಮಾಹಿತಿ ಒಳಗೊಂಡ ಜಾಹಿರಾತು ನೀಡುವುದನ್ನು ತಡೆಯಬೇಕು. ಕಾಂಗ್ರೆಸ್‌ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದೆ.

ಬಿಜೆಪಿ ವಿರುದ್ಧ ಕಾಂಗ್ರೆಸ್ ಪಕ್ಷ ನೀಡಿದ್ದ ಚೊಂಬು ಜಾಹೀರಾತು ನಂತರ ರಾಜ್ಯದಲ್ಲಿ ಜಾಹೀರಾತು ಸಮರಕ್ಕೆ ಕಾರಣವಾಗಿತ್ತು. ಕಾಂಗ್ರೆಸ್​​ನ ಚೊಂಬು ಜಾಹೀರಾತಿನಿಂದ ಕೆರಳಿದ್ದ ಬಿಜೆಪಿ, 2013ರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಚೊಂಬು ಹಿಡಿದುಕೊಂಡು ಬಯಲುಶೌಚಕ್ಕೆ ಹೋಗುತ್ತಿರುವ ಮತ್ತು 2023ರಲ್ಲಿ ಚೊಂಬು ಹಿಡಿದುಕೊಂಡು ಶೌಚಾಲಯಕ್ಕೆ ಹೋಗುತ್ತಿರುವ ಎಡಿಟೆಡ್ ಚಿತ್ರವನ್ನು ಟ್ವೀಟ್ ಮಾಡಿ ‘ಇಷ್ಟೇ ವ್ಯತ್ಯಾಸ’ ಎಂದು ವ್ಯಂಗ್ಯವಾಡಿತ್ತು.

ನಂತರ ಉಭಯ ಪಕ್ಷಗಳ ಜಾಹೀರಾತು ಸಮರ ಮುಂದುವರಿದಿದ್ದು, ‘ಕಾಂಗ್ರೆಸ್ ಡೇಂಜರ್’ ಎಂಬ ಜಾಹೀರಾತನ್ನು ಬಿಜೆಪಿ ನೀಡಿತ್ತು. ಬಳಿಕ ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ಜನತೆ ಕೈಗೆ ಚಿಪ್ಪು ನೀಡಲಾಗಿದೆ ಎಂದು ಜಾಹೀರಾತು ನೀಡಿತ್ತು. ನಂತರ ಕಾಂಗ್ರೆಸ್ ಪಿಕ್​ಪಾಕೆಟ್ ಮಾಡುತ್ತಿದೆ ಎಂದು ಜಾಹೀರಾತು ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ