ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ 
ರಾಜಕೀಯ

ಸುಮಲತಾ ಮನೆ ಬಾಗಿಲಿಗೆ ಹೋಗಿ ಸಹಕಾರ ಕೇಳಿದ್ದೆ, ಆದರೂ ಪ್ರಚಾರಕ್ಕೆ ಬಂದಿಲ್ಲ: HDK ಸ್ಪಷ್ಟನೆ

ಸುಮಲತಾ ಅಂಬರೀಷ್ ಮನೆ ಬಾಗಿಲಿಗೆ ಹೋಗಿ ಸಹಕಾರ ಕೇಳಿದ್ದೆವು. ಆದರೂ ಅವರು ಪ್ರಚಾರಕ್ಕೆ ಬಂದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ.ಕುಮಾರಸ್ವಾಮಿಯವರು ಶುಕ್ರವಾರ ಹೇಳಿದ್ದಾರೆ.

ಮಂಡ್ಯ: ಸುಮಲತಾ ಅಂಬರೀಷ್ ಮನೆ ಬಾಗಿಲಿಗೆ ಹೋಗಿ ಸಹಕಾರ ಕೇಳಿದ್ದೆವು. ಆದರೂ ಅವರು ಪ್ರಚಾರಕ್ಕೆ ಬಂದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ.ಕುಮಾರಸ್ವಾಮಿಯವರು ಶುಕ್ರವಾರ ಹೇಳಿದ್ದಾರೆ.

ಮದ್ದೂರು ತಾಲೂಕಿನ ಕೆ. ಹೊನ್ನಲಗೆರೆ ಗ್ರಾಮದಲ್ಲಿ ಶುಕ್ರವಾರ ಮತದಾನದ ಪ್ರಕ್ರಿಯೆ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದೆ ಸುಮಲತಾ ಅಂಬರೀಶ್ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಅವರಿಗೆ ಸಪೋರ್ಟ್ ಮಾಡುತ್ತಿಲ್ಲ ಎಂಬ ದೇವೇಗೌಡರ ಹೇಳಿಕೆ ಹಾಗೂ ಸುಮಲತಾ ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದರು.

ದೇವೇಗೌಡ್ ಅವರು ಆ ರೀತಿ ಯಾಕೆ ಹೇಳಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಅವರಿಗೆ ಮಾಹಿತಿ ಕೊರತೆ ಆಗಿರಬೇಕು ಎನಿಸುತ್ತಿದೆ. ಪಕ್ಷ ಭೇದ ಮರೆತು ಕಾಂಗ್ರೆಸ್, ಬಿಜೆಪಿ ನಾಯಕರು, ಕಾರ್ಯಕರ್ತರು ನನ್ನ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಯಾರು ಕೂಡ ವಿರೋಧ ಮಾಡಿಲ್ಲ. ಎಲ್ಲರೂ ನನಗೆ ಸಹಾಯ ಮಾಡುತ್ತಿದ್ದಾರೆಂದು ಹೇಳಿದರು.

ಇದೇ ವೇಳೆ ಕುಮಾರಸ್ವಾಮಿ ಪರ ಪ್ರಚಾರಕ್ಕೆ ಯಾರು ನನ್ನನ್ನು ಕರೆಯಲಿಲ್ಲ ಎಂಬ ಸುಮಲತಾ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿ, ನಾನು ಅವರ ಮನೆ ಬಾಗಿಲಿಗೆ ಹೋಗಿ ಸಹಕಾರ ಕೇಳಿದ್ದೇನೆ. ಇದಕ್ಕಿಂತ ಇನ್ನೇನು ಮಾಡಬೇಕು. ನನಗೆ ಅಂಬರೀಷ್ ಅಭಿಮಾನಿಗಳು ಕೂಡ ನನಗೆ ಸಹಾಯ ಮಾಡಿದ್ದಾರೆಂದು ತಿಳಿಸಿದರು.

ನಾನು ಮೈಸೂರಿನ ಮೋದಿ ಕಾರ್ಯಕ್ರಮದಲ್ಲೂ ಕೂಡ ಸುಮಲತಾ ಅವರನ್ನು ಎರಡು ದಿನ ಪ್ರಚಾರಕ್ಕೆ ಬರುವಂತೆ ಕೋರಿದ್ದೆ. ಆದರೆ, ಅವರು ಪ್ರಚಾರಕ್ಕೆ ಯಾಕೇ ಬರಲಿಲ್ಲ ಎಂಬುದು ನನಗೆ ಗೊತ್ತಿಲ್ಲ. ಇವತ್ತು ಬೆಂಗಳೂರಿನಿಂದ ಬಂದು ಸುಮಲತಾ ಅವರು ನನಗೆ ಮತ ಹಾಕಿದ್ದಾರೆ. ಹೀಗಾಗಿ ನಾನು ರಾಜ್ಯದಲ್ಲೇ ಅತ್ಯಂತ ಬಹುಮತಗಳಿಂದ ಗೆಲ್ಲಲಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT