ಜೆಡಿಎಸ್‌ ವರಿಷ್ಠ ಎಚ್‌ಡಿ ದೇವೇಗೌಡ 
ರಾಜಕೀಯ

ಕಾಂಗ್ರೆಸ್‌ನಿಂದ ಸುಳ್ಳು ಪ್ರಣಾಳಿಕೆ: ರಾಹುಲ್, ಖರ್ಗೆ ವಿರುದ್ಧ JDS ವರಿಷ್ಠ ಎಚ್‌ಡಿ ದೇವೇಗೌಡ ವಾಗ್ದಾಳಿ

ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಸುಳ್ಳು ಪ್ರಣಾಳಿಕೆ ಬಿಡುಗಡೆ ಮಾಡುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಜೆಡಿಎಸ್‌ ವರಿಷ್ಠ ಎಚ್‌ಡಿ ದೇವೇಗೌಡ ಶುಕ್ರವಾರ ವಾಗ್ದಾಳಿ ನಡೆಸಿದರು.

ಹಾಸನ: ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಸುಳ್ಳು ಪ್ರಣಾಳಿಕೆ ಬಿಡುಗಡೆ ಮಾಡುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಜೆಡಿಎಸ್‌ ವರಿಷ್ಠ ಎಚ್‌ಡಿ ದೇವೇಗೌಡ ಶುಕ್ರವಾರ ವಾಗ್ದಾಳಿ ನಡೆಸಿದರು.

ಇಂತಹ ಭರವಸೆಗಳನ್ನು ನೀಡಲು ರಾಹುಲ್ ಗಾಂಧಿ ಮತ್ತು ಖರ್ಗೆ ಪ್ರಧಾನಿಯೋ ಅಥವಾ ಸಿಎಂ ಆಗಿದ್ದಾರೆಯೇ?. 'ಅವರು ಕೇವಲ ಸಾಮಾನ್ಯ ಕಾಂಗ್ರೆಸ್ ಸದಸ್ಯರಷ್ಟೆ' ಎಂದು ಮತದಾನದ ನಂತರ ಸುದ್ದಿಗಾರರಿಗೆ ತಿಳಿಸಿದರು.

ಕಾಂಗ್ರೆಸ್‌ನ ಗ್ಯಾರಂಟಿ ಕಾರ್ಡ್ ಅನ್ನು 'ಸಾಮಾನ್ಯ ಕರಪತ್ರ' ಎಂದು ಕರೆದ ಅವರು, ಸೋಲಿನ ಭೀತಿಯಿಂದ ಕರಪತ್ರ ಹಂಚುವ ಮೂಲಕ ಬಡವರನ್ನು ಮೂರ್ಖರನ್ನಾಗಿಸಿರುವ ಕಾಂಗ್ರೆಸ್, ಕೇರಳ, ತೆಲಂಗಾಣ, ಆಂಧ್ರಪ್ರದೇಶ ಅಥವಾ ಯಾವುದೇ ರಾಜ್ಯದಲ್ಲಿ ಕರಪತ್ರವನ್ನು ಬಿಡುಗಡೆ ಮಾಡಿಲ್ಲ ಎಂದು ದೂರಿದರು.

ಕರಪತ್ರದಲ್ಲಿ ಮುಖ್ಯಮಂತ್ರಿ ಅಥವಾ ಅವರ ಉಪಮುಖ್ಯಮಂತ್ರಿಗಳ ಸಹಿ ಇರಬೇಕು. ವಿದ್ಯಾವಂತರು ಇಂತಹ ಪ್ರಣಾಳಿಕೆಯನ್ನು ನಂಬುವುದಿಲ್ಲ. ಜೆಡಿಎಸ್‌ನ ಎಚ್‌ಡಿ ಕುಮಾರಸ್ವಾಮಿ ಮತ್ತು ಪ್ರಜ್ವಲ್ ರೇವಣ್ಣ ಅವರನ್ನು ಸೋಲಿಸುವ ಉದ್ದೇಶದಿಂದ ಕಾಂಗ್ರೆಸ್ ಕರಪತ್ರವನ್ನು ಹಂಚಿದೆ. ಜನರನ್ನು ದಾರಿತಪ್ಪಿಸುತ್ತಿರುವ ಬಗ್ಗೆ ಜೆಡಿಎಸ್ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದೆ ಎಂದು ದೇವೇಗೌಡರು ತಿಳಿಸಿದರು.

ಕಲಬುರಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವ ಬದಲು ಅವರ ಮೈಮೇಲೆ ಮಣ್ಣು ಮತ್ತು ಅಂತಿಮ ಸಂಸ್ಕಾರಕ್ಕೆ ಬಳಸುವ ಸಾಮಗ್ರಿಗಳನ್ನು ಹಾಕಬಹುದು ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಸಾರ್ವಜನಿಕ ಸಮಾರಂಭದಲ್ಲಿ ಇಂತಹ ಭಾವನಾತ್ಮಕ ಹೇಳಿಕೆಗಳನ್ನು ನೀಡುವ ಅಗತ್ಯವಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

SCROLL FOR NEXT