ಹೆಚ್ ಡಿ ಕುಮಾರಸ್ವಾಮಿ-ಡಿ ಕೆ ಶಿವಕುಮಾರ್  
ರಾಜಕೀಯ

ಹೆಚ್ ಡಿಕೆ-ಡಿಕೆಶಿ ನಡುವೆ ಮುಂದುವರಿದ ವಾಕ್ಸಮರ: 'ಹೇಡಿ' ಎಂದು ಪರಸ್ಪರ ಟೀಕೆ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮತದಾರರಿಗೆ ಹೇಡಿಯಂತೆ ರಾತ್ರಿಯಿಡೀ ಡಿ ಕೆ ಶಿವಕುಮಾರ್ ಗಿಫ್ಟ್ ಕೂಪನ್ ವಿತರಿಸಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದರು.

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ನಡುವಿನ ರಾಜಕೀಯ ವಾಗ್ಯುದ್ಧ ನಿನ್ನೆ ಚುನಾವಣೆ ದಿನವೂ ಮುಂದುವರಿದಿದ್ದು, ಒಬ್ಬರನ್ನೊಬ್ಬರು ಹೇಡಿಗಳು ಎಂದು ಕರೆದುಕೊಂಡಿದ್ದಾರೆ.

ಡಿ ಕೆ ಶಿವಕುಮಾರ್ ಅವರು ತಮ್ಮ ಕಿರಿಯ ಸಹೋದರ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ಪರ ಪ್ರಚಾರ ನಡೆಸಿದರೆ, ಕುಮಾರಸ್ವಾಮಿ ಅವರು ಬಿಜೆಪಿ ಟಿಕೆಟ್ ನಲ್ಲಿ ಸ್ಪರ್ಧಿಸಿರುವ ತಮ್ಮ ಬಾಮೈದ ಡಾ.ಸಿ.ಎನ್.ಮಂಜುನಾಥ್ ಪರ ಪ್ರಚಾರ ನಡೆಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮತದಾರರಿಗೆ ಹೇಡಿಯಂತೆ ರಾತ್ರಿಯಿಡೀ ಡಿ ಕೆ ಶಿವಕುಮಾರ್ ಗಿಫ್ಟ್ ಕೂಪನ್ ವಿತರಿಸಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದರು. ಮತದಾರರಿಗೆ 10 ಸಾವಿರ ರೂಪಾಯಿ ಕೂಪನ್ ವಿಚರಿಸಲಾಗುತ್ತಿದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್, ಅವರು ನಮಗೆ ಭಯಪಡುತ್ತಿದ್ದಾರೆ. ಕುಮಾರಸ್ವಾಮಿ ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸ್ಪರ್ಧಿಸಬೇಕಿತ್ತು. ಆದರೆ ಸೋಲಿನ ಭಯದಿಂದ ಹೇಡಿಯಂತೆ ಮಂಡ್ಯಕ್ಕೆ ಓಡಿ ಹೋಗಿದ್ದಾರೆ ಎಂದು ಟೀಕಿಸಿದರು. ರಣಹೇಡಿ ನಾವಲ್ಲ, ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ರಾತ್ರಿ ಹೋಗಿ ಜನರಿಗೆ ಕ್ಯೂಆರ್ ಕೋಡ್ ಇರುವ ಗಿಫ್ಟ್ ಕೂಪನ್ ವಿತರಿಸಿದ ವ್ಯಕ್ತಿ ಹೇಡಿತನದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ತಿರುಗೇಟು ನೀಡಿದರು.

505 ರೂಪಾಯಿ, ಮಲೆ ಮಹದೇಶ್ವರ ದೇವಸ್ಥಾನದ ಲಡ್ಡು, ಖಾತರಿ ಕಾರ್ಡ್ ಗಳನ್ನು ರಾತ್ರಿಯಿಡೀ ವಿತರಿಸಲಾಗಿದೆ ಎಂದರು. ಕಾರ್ಡ್ ವಿತರಿಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ತಡೆದಿದ್ದು, ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ. “ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಬೆಂಗಳೂರು ಗ್ರಾಮಾಂತರದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುತ್ತಿಲ್ಲ ಎಂದು ಕುಮಾರಸ್ವಾಮಿ ಆರೋಪಿಸಿದರು.

ಪಕ್ಷದಿಂದ ಕೇವಲ ‘ಮ್ಯಾನಿಫೆಸ್ಟೋ ಕಾರ್ಡ್’ಗಳನ್ನು ಹಂಚಲಾಗಿದೆ ಎಂದು ಶಿವಕುಮಾರ್ ಹೇಳಿದರು. ಕುಮಾರಸ್ವಾಮಿ ಅವರಿಗೆ ನಾಚಿಕೆ ಇಲ್ಲ. ಅವರು ಮತ್ತು ಮುನಿರತ್ನ ಗೋಲ್ಡ್ ಕಾರ್ಡ್‌ಗಳನ್ನು ನೀಡುತ್ತಿದ್ದಾರೆ. ನಾವು ನಮ್ಮ ಪ್ರಣಾಳಿಕೆ ಕಾರ್ಡ್‌ಗಳನ್ನು ಮಾತ್ರ ವಿತರಿಸುತ್ತಿದ್ದೇವೆ. ಕಾಂಗ್ರೆಸ್ ಕಾರ್ಯಕರ್ತರ ಮೇಲೆ ನಡೆದ ಐಟಿ ದಾಳಿ ಕುರಿತು ಶಿವಕುಮಾರ್, ಐಟಿ ಅಧಿಕಾರಿಯೊಬ್ಬರು ಕಾಂಗ್ರೆಸ್ ಬ್ಲಾಕ್ ನಾಯಕರನ್ನು ಬಿಜೆಪಿಗೆ ಸೇರುವಂತೆ ಕೇಳಿದ್ದಾರೆ. ಡಿ ಕೆ ಸುರೇಶ್ ನ ಕಾರು ಚಾಲಕನ ಪತ್ನಿ ಮತ್ತು ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾರೆ. ದೂರು ನೀಡಲು ಡಿಜಿ ಅವರನ್ನು ಭೇಟಿ ಮಾಡುತ್ತೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

SCROLL FOR NEXT