ರಾಜಕೀಯ

ನೇಹಾ ಹತ್ಯೆ ಪ್ರಕರಣ: ಕರ್ನಾಟಕದಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಇಡೀ ರಾಷ್ಟ್ರದಲ್ಲಿ ಆತಂಕ- ಪ್ರಧಾನಿ ಮೋದಿ

ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕದಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಇಡೀ ರಾಷ್ಟ್ರ ಆತಂಕಗೊಂಡಿದೆ. ಕಾಂಗ್ರೆಸ್ ಸರ್ಕಾರ ಹತಾಶೆಯಿಂದ ರಾಜ್ಯವನ್ನು ಹಾಳು ಮಾಡುತ್ತಿದೆ ಎಂದು ಟೀಕಿಸಿದರು.

ಶಿರಸಿ: ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕದಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಇಡೀ ರಾಷ್ಟ್ರ ಆತಂಕಗೊಂಡಿದೆ. ಕಾಂಗ್ರೆಸ್ ಸರ್ಕಾರ ಹತಾಶೆಯಿಂದ ರಾಜ್ಯವನ್ನು ಹಾಳು ಮಾಡುತ್ತಿದೆ ಎಂದು ಟೀಕಿಸಿದರು.

ಕನ್ನಡದಲ್ಲಿಯೇ ಮಾತು ಆರಂಭಿಸಿದ ಪ್ರಧಾನಿ ಮೋದಿ,'ಕರ್ನಾಟಕದಲ್ಲಿ ಹೆಣ್ಣು ಮಗಳೊಬ್ಬಳ ಹತ್ಯೆಯಿಂದ ಇಡೀ ದೇಶ ಆತಂಕಗೊಂಡಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಕಳವಳ ಗೊಂಡಿದ್ದಾರೆ. ಕರ್ನಾಟಕದಲ್ಲಿ ಹೆಣ್ಣು ಮಕ್ಕಳು ವಾಸವಾಗುವ ಬಗ್ಗೆ ಅವರ ಪೋಷಕರು ದಿಗಿಲುಗೊಂಡಿದ್ದಾರೆ. ಇದಕ್ಕೆ ಕಾಂಗ್ರೆಸ್ ನ ಬದ್ಧತೆ ಕಾರಣ, ಕಾಲೇಜ್ ಕ್ಯಾಂಪಸ್ ನಲ್ಲಿ ಹೇಗೆ ಹತ್ಯೆ ನಡೆಯಲು ಸಾಧ್ಯ ಎಂದು ಪ್ರಶ್ನಿಸಿದ ಅವರು, ಅವರು ವೋಟ್ ಬ್ಯಾಂಕ್ ಗಾಗಿ ಕೆಲವು ದಿನಗಳಲ್ಲಿಯೇ ಆರೋಪಿಯನ್ನು ರಕ್ಷಿಸಲಿದ್ದಾರೆ ಎಂದರು.

ಕರ್ನಾಟಕವನ್ನು ಹಾಳು ಮಾಡುವುದರಲ್ಲಿ ಕಾಂಗ್ರೆಸ್ ಸರ್ಕಾರ ಬ್ಯೂಸಿಯಾಗಿದೆ. ಅಪರಾಧವನ್ನು ನಿಯಂತ್ರಣಕ್ಕೆ ತರುವ ಬದಲು, ಕಾಂಗ್ರೆಸ್ ಸಮಾಜ ಮತ್ತು ದೇಶ ವಿರೋಧಿ ಮನಸ್ಥಿತಿಯನ್ನು ಪ್ರೋತ್ಸಾಹಿಸುತ್ತಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

SCROLL FOR NEXT