ಪ್ರಧಾನಿ ಮೋದಿ 
ರಾಜಕೀಯ

ಲೋಕಸಭಾ ಚುನಾವಣೆ: ಇಂದು ಬಾಗಲಕೋಟೆ, ಮಹಾರಾಷ್ಟ್ರದಲ್ಲಿ ಪ್ರಧಾನಿ ಮೋದಿ ಪ್ರಚಾರ

ಲೋಕಸಭೆ ಚುನಾವಣೆಯ ಪ್ರಚಾರವನ್ನು ತೀವ್ರಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಕರ್ನಾಟಕದಲ್ಲಿ ಒಂದು ಮತ್ತು ಮಹಾರಾಷ್ಟ್ರದಲ್ಲಿ ಮೂರು ಸೇರಿದಂತೆ ನಾಲ್ಕು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ನವದೆಹಲಿ: ಲೋಕಸಭೆ ಚುನಾವಣೆಯ ಪ್ರಚಾರವನ್ನು ತೀವ್ರಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಕರ್ನಾಟಕದಲ್ಲಿ ಒಂದು ಮತ್ತು ಮಹಾರಾಷ್ಟ್ರದಲ್ಲಿ ಮೂರು ಸೇರಿದಂತೆ ನಾಲ್ಕು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಬಾಗಲಕೋಟೆಯಲ್ಲಿ ಮಧ್ಯಾಹ್ನ 12-15ಕ್ಕೆ ಮೊದಲ ಬೃಹತ್ ಸಭೆ ನಡೆಯಲಿದೆ. ಬಾಗಲಕೋಟೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಿ.ಪಿ ಗದ್ದಿಗೌಡ ಮತ್ತು ವಿಜಯಪುರ ಅಭ್ಯರ್ಥಿ ರಮೇಶ್​ ಜಿಗಜಿಣಗಿ ಪರವಾಗಿ ಪ್ರಧಾನಿ ಮತಯಾಚಿಸಲಿದ್ದಾರೆ. ಅಲ್ಲಿಂದ ಮಹಾರಾಷ್ಟ್ರಕ್ಕೆ ತೆರಳಿ ಮಧ್ಯಾಹ್ನ 2:15ಕ್ಕೆ ಸೊಲ್ಲಾಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲಿ ಕಾಂಗ್ರೆಸ್‌ನ ಪ್ರಣಿತಿ ಶಿಂಧೆ ವಿರುದ್ಧ ಬಿಜೆಪಿ ಅಭ್ಯರ್ಥಿ ರಾಮ್ ಸತ್ಪುತೆ ಕಣಕ್ಕಿಳಿದಿದ್ದಾರೆ.

ಸಂಜೆ 4:30ಕ್ಕೆ ಸತಾರಾ ಕ್ಷೇತ್ರದ ಎನ್‌ಸಿಪಿ-ಶರದ್‌ಚಂದ್ರ ಪವಾರ್ ಅಭ್ಯರ್ಥಿ ಶಶಿಕಾಂತ್ ಶಿಂಧೆ ವಿರುದ್ಧ ಸ್ಪರ್ಧಿಸುತ್ತಿರುವ ಪಕ್ಷದ ಅಭ್ಯರ್ಥಿ ಉದಯನರಾಜೆ ಭೋಸ್ಲೆ ಪರ ಪ್ರಧಾನಿ ಮೋದಿ ಅವರು ಕರಾಡ್‌ನಲ್ಲಿ ರ್‍ಯಾಲಿ ನಡೆಸಲಿದ್ದಾರೆ. ಪುಣೆಯ ಹಡಪ್ಸರ್‌ನಲ್ಲಿರುವ ರೇಸ್ ಕೋರ್ಸ್ ಮೈದಾನದಲ್ಲಿ ಸಂಜೆ 6-30ಕ್ಕೆ ಪ್ರಧಾನ ಮಂತ್ರಿಯವರ ನಾಲ್ಕನೇ ರ್‍ಯಾಲಿ ಆಯೋಜಿಸಲಾಗಿದೆ. ಪುಣೆಯ ಬಿಜೆಪಿ ಅಭ್ಯರ್ಥಿ ಮುರಳೀಧರ್ ಮೊಹೋಲ್ ಪರ ಪ್ರಚಾರ ನಡೆಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT