ಪ್ರಧಾನಿ ನರೇಂದ್ರ ಮೋದಿ 
ರಾಜಕೀಯ

ವಿಶ್ವದ ಮೂರು ಅಗ್ರ ಆರ್ಥಿಕತೆಗಳಲ್ಲಿ ಭಾರತವನ್ನು ಒಂದಾಗಿಸುವುದು ನಮ್ಮ ಸಂಕಲ್ಪ: ಬಾಗಲಕೋಟೆಯಲ್ಲಿ ಪ್ರಧಾನಿ ಮೋದಿ

ಮುಂದಿನ ಕೆಲ ವರ್ಷಗಳಲ್ಲಿ ಭಾರತವನ್ನು ವಿಶ್ವದ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗಿಸುವುದು ನಮ್ಮ ಸಂಕಲ್ಪವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

ಬಾಗಲಕೋಟೆ: ಮುಂದಿನ ಕೆಲ ವರ್ಷಗಳಲ್ಲಿ ಭಾರತವನ್ನು ವಿಶ್ವದ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗಿಸುವುದು ನಮ್ಮ ಸಂಕಲ್ಪವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ಬಿಜೆಪಿ ವಿಜಯ ಸಂಕಲ್ಪ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ನಾವು ಭಾರತವನ್ನು ಉತ್ಪಾದನಾ ಹಬ್, ಕೌಶಲ್ಯ ಕೇಂದ್ರವನ್ನಾಗಿ ಮಾಡಲು ಬಯಸುತ್ತೇವೆ. ಇದಕ್ಕೆ ದೂರದೃಷ್ಟಿ ಬೇಕು. ಮೋಜು, ಮಸ್ತಿ ಮಾಡುವವರಿಂದ ಇದನ್ನು ಮಾಡಲು ಸಾಧ್ಯವಿಲ್ಲ ಎಂದರು.

ಕರ್ನಾಟಕ ಸರ್ಕಾರ ತನ್ನ ನೌಕರರಿಗೆ ಸಂಬಳ ನೀಡದ ದಿನ ದೂರದಲ್ಲಿ ಇಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ವಸೂಲಿ ಗ್ಯಾಂಗ್ ನಡೆಸುತ್ತಿದೆ. ಸರ್ಕಾರವಲ್ಲಾ, 60 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರು, ಒಂದೇ ಬಾರಿಗೆ ಬಡತನವನ್ನು ತೊಡೆದುಹಾಕುತ್ತೇವೆ ಎಂದು ಹೇಳುತ್ತಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಮತಗಳನ್ನು ಪಡೆಯಲು ಭಯೋತ್ಪಾದನೆ ಮತ್ತು ಮೂಲಭೂತವಾದಿ ಮನಸ್ಥಿತಿವುಳ್ಳವರನ್ನು ಕಾಂಗ್ರೆಸ್ ರಕ್ಷಿಸುತ್ತಿದೆ. ತನ್ನ ಪ್ರಣಾಳಿಕೆಯಲ್ಲಿ ಧರ್ಮ ಆಧಾರಿತ ಮೀಸಲಾತಿ ನೀಡುವ ಸಂದೇಶ ನೀಡಿದೆ ಎಂದು ಆರೋಪಿಸಿದರು.

ಚುನಾವಣೆಯಲ್ಲಿ ಸೋತವರು ತಂತ್ರಜ್ಞಾನ ಬಳಸಿ, ನಕಲಿ ವಿಡಿಯೋ ಸೃಷ್ಟಿಸಿ, AI ಮೂಲಕ ತಪ್ಪು ಮಾಹಿತಿ ಹರಡುತ್ತಿದ್ದಾರೆ. ಇಂತಹ ನಕಲಿ ವಿಡಿಯೋಗಳ ಬಗ್ಗೆ ಪೊಲೀಸರು ಮತ್ತು ಬಿಜೆಪಿ ಪಕ್ಷದವರಿಗೆ ಮಾಹಿತಿ ನೀಡಿದರೆ, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

ಕಳ್ಳಬಟ್ಟಿ ಸಾರಾಯಿ–ಸೇಂದಿ ದಂಧೆಕೋರರು ಗಡಿಪಾರು: ಸಚಿವ ತಿಮ್ಮಾಪುರ ಸೂಚನೆ

SCROLL FOR NEXT