ಪರಮೇಶ್ವರ್, ದಿನೇಶ್ ಗುಂಡೂರಾವ್ 
ರಾಜಕೀಯ

ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರ ಶೋಕಾಸ್ ನೋಟಿಸ್: ಬಿಜೆಪಿಯಿಂದ ರಾಜಭವನ ದುರುಪಯೋಗ- ಕಾಂಗ್ರೆಸ್ ಕಿಡಿ

ಇದು ರಾಜಕೀಯ ಪ್ರೇರಿತವಾಗಿದೆ. ಮೊದಲಿಗೆ ಇಡಿ, ಸಿಬಿಐ ಮೂಲಕ ಪ್ರಯತ್ನಿಸಿದರು. ಇದೀಗ ಬಿಜೆಪಿಯವರು ರಾಜ್ಯಪಾಲರ ಕಚೇರಿನ್ನು ಬಳಸಿಕೊಳ್ಳುತ್ತಿದೆ.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ- ಮುಡಾ ಹಗರಣ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಶೋಕಾಸ್ ನೋಟಿಸ್ ನೀಡಿರುವುದು ರಾಜಕೀಯ ಪ್ರೇರಿತವಾಗಿದ್ದು, ಬಿಜೆಪಿ ರಾಜಭವನವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಗುರುವಾರ ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರ ಕಚೇರಿಯನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಶೋಕಾಸ್ ನೋಟಿಸ್ ಬಗ್ಗೆ ಚರ್ಚಿಸಿದ್ದು, ಅದರ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ. ಶೋಕಾಸ್ ನೋಟಿಸ್ ನ ಕಾನೂನು ಸ್ಥಿತಿ ಕುರಿತು ಬಹಿರಂಗಪಡಿಸುವುದಿಲ್ಲ. ಇದು ರಾಜಕೀಯ ಪ್ರೇರಿತವಾಗಿದೆ. ಮೊದಲಿಗೆ ಇಡಿ, ಸಿಬಿಐ ಮೂಲಕ ಪ್ರಯತ್ನಿಸಿದರು. ಇದೀಗ ಬಿಜೆಪಿಯವರು ರಾಜ್ಯಪಾಲರ ಕಚೇರಿನ್ನು ಬಳಸಿಕೊಳ್ಳುತ್ತಿದೆ ಎಂದು ಹೇಳಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೂಡಾ ಬಿಜೆಪಿ ರಾಜಭವನವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದರು.ಬಿಜೆಪಿ ರಾಜಭವನವನ್ನು ದುರುಪಯೋಗಪಡಿಸಿಕೊಂಡಿರುವುದು ಅತ್ಯಂತ ಸ್ಪಷ್ಟವಾಗಿದೆ. ತಮಿಳುನಾಡು, ಮಹಾರಾಷ್ಟ್ರ, ಜಾರ್ಖಂಡ್, ದೆಹಲಿ ಮತ್ತು ಪಶ್ಚಿಮ ಬಂಗಾಳದಲ್ಲಿ ಅವರು ಅಧಿಕಾರವನ್ನು ಬಳಸಿಕೊಂಡಿದ್ದಾರೆ. ಹೀಗಾಗಿ ಅದರಲ್ಲಿ ಯಾವುದೇ ಅನುಮಾನವಿಲ್ಲ. ಇತರ ಬಿಜೆಪಿ ರಾಜ್ಯಪಾಲರಿಗೆ ಹೋಲಿಸಿದರೆ ನಮ್ಮ ರಾಜ್ಯಪಾಲರು ಉತ್ತಮ ಆದರೆ, ಅವರ ಕೂಡಾ ಬಿಜೆಪಿಯ ಕೈಗೊಂಬೆಯಾಗಿದ್ದಾರೆ. ಅವರು ನೋಟಿಸ್ ನೀಡಿರುವುದು ವಿಷಾಧನೀಯ ಮತ್ತು ಅಸಂವಿಧಾನಿಕ ಎಂದರು.

ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಿರುವುದು ತಪ್ಪು ಎಂದು ಕಾನೂನು ಸಚಿವ ಹೆಚ್. ಕೆ. ಪಾಟೀಲ್ ಹೇಳಿದರು. ಸಚಿವ ಸಂಪುಟ ಸಭೆ ಬಳಿಕ ಎಲ್ಲಾವನ್ನು ವಿವರಿಸುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ