ಡಿಸಿಎಂ ಡಿಕೆ ಶಿವಕುಮಾರ್ 
ರಾಜಕೀಯ

ಬಿಜೆಪಿ, ಜೆಡಿಎಸ್ ಅವಕಾಶವಾದಿಗಳ ಗುಂಪು: ಡಿಸಿಎಂ ಡಿಕೆ ಶಿವಕುಮಾರ್ ಟೀಕಾ ಪ್ರಹಾರ

ವೇದಿಕೆಯ ಮೇಲಿದ್ದ ದೊಡ್ಡ ಪರದೆಯ ಮೇಲೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ವಿವಿಧ ವಿಷಯಗಳ ಕುರಿತು ಪರಸ್ಪರ ವಾಗ್ದಾಳಿ ನಡೆಸುತ್ತಿರುವ ಹಳೆಯ ದೃಶ್ಯಾವಳಿಗಳನ್ನು ಡಿಸಿಎಂ ಡಿಕೆ ಶಿವಕುಮಾರ್ ತೋರಿಸಿದರು.

ಮಂಡ್ಯ: ಬಿಜೆಪಿ ಮತ್ತು ಜೆಡಿಎಸ್ ನಾಯಕರು ವಿವಿಧ ಸಂದರ್ಭಗಳಲ್ಲಿ ಒಬ್ಬರನ್ನೊಬ್ಬರು ದೂಷಿಸುವ ಹಳೆಯ ವಿಡಿಯೋಗಳನ್ನು ವೇದಿಕೆ ಮೇಲೆಯೇ ತೋರಿಸಿದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ , ರಾಜ್ಯದ ಪ್ರತಿಪಕ್ಷಗಳನ್ನು "ಅವಕಾಶವಾದಿಗಳ ಗುಂಪು" ಎಂದು ಬಣ್ಣಿಸಿದ್ದಾರೆ.

ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಶಿವಕುಮಾರ್, ಸರ್ಕಾರವನ್ನು ಗುರಿಯಾಗಿಸುವ ಪ್ರತಿಪಕ್ಷಗಳ ತಂತ್ರವು ಕೆಲಸ ಮಾಡುವುದಿಲ್ಲ ಮತ್ತು ಮುಂದಿನ ಹತ್ತು ವರ್ಷಗಳ ಕಾಲ ತಮ್ಮ ಪಕ್ಷ ರಾಜ್ಯದಲ್ಲಿ ಅಧಿಕಾರದಲ್ಲಿರುತ್ತದೆ ಎಂದು ಹೇಳಿದರು.

ವೇದಿಕೆಯ ಮೇಲಿದ್ದ ದೊಡ್ಡ ಪರದೆಯ ಮೇಲೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ವಿವಿಧ ವಿಷಯಗಳ ಕುರಿತು ಪರಸ್ಪರ ವಾಗ್ದಾಳಿ ನಡೆಸುತ್ತಿರುವ ಹಳೆಯ ದೃಶ್ಯಾವಳಿಗಳನ್ನು ತೋರಿಸಿದರು.

ಪ್ರತಿಪಕ್ಷಗಳನ್ನು ಅವಕಾಶವಾದಿಗಳ ಗುಂಪು ಎಂದು ಕರೆದ ಶಿವಕುಮಾರ್, ಹಿಂದುಳಿದ ಸಮುದಾಯದ ವ್ಯಕ್ತಿಯೊಬ್ಬರು ಪ್ರತಿಷ್ಠಿತ ಹುದ್ದೆಯನ್ನು ಅಲಂಕರಿಸುವುದನ್ನು ಸಹಿಸಲಾಗದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ ಉದ್ದೇಶದಿಂದ ಹಳೆಯ ವೈರಿಗಳು ಈಗ ಮಿತ್ರರಾಗಿದ್ದಾರೆ. ಈ ದೃಶ್ಯಾವಳಿಗೆ ಉತ್ತರ ನೀಡುವಂತೆ ಜನರನ್ನು ಕೇಳಿದರು.

ಕಾಂಗ್ರೆಸ್ ಪ್ರತಿಪಕ್ಷದಲಿದ್ದಾಗ ಕಾವೇರಿ ನದಿ ನೀರು ಹಂಚಿಕೆ ವಿಷಯ ಮತ್ತು ಕನಕಪುರದಲ್ಲಿ ಕಾವೇರಿ ನದಿಗೆ ಮೇಕೆದಾಟು ಜಲಾಶಯಕ್ಕಾಗಿ ಪಾದಯಾತ್ರೆ ನಡೆಸಿದ್ದೇವೆ. 'ಭಾರತ್ ಜೋಡೋ ಯಾತ್ರೆ' ಕೂಡ ಮಾಡಿದೆವು. ಬಿಜೆಪಿಯವರು ನಮ್ಮನ್ನು ನಕಲು ಮಾಡುತ್ತಿದ್ದಾರೆ. ವಿಪಕ್ಷಗಳ ಪಾದಯಾತ್ರೆ ತಮ್ಮ ಪಾಪ ಮತ್ತು ಮಹಾ ಭ್ರಷ್ಟಾಚಾರವನ್ನು ತೊಳೆಯುವ ಪಶ್ಚಾತ್ತಾಪ ಯಾತ್ರೆಯಾಗಿದೆ ಎಂದು ಅವರು ವ್ಯಂಗ್ಯವಾಡಿದರು. ಮೇಕೆದಾಟು ಯೋಜನೆ ಜಾರಿಯಾಗಿದ್ದರೆ ರೈತರಿಗೆ ಅನುಕೂಲವಾಗುತ್ತಿತ್ತು. ಆದರೆ ಬಿಜೆಪಿ ಮತ್ತು ಜೆಡಿಎಸ್‌ ಇದಕ್ಕೆ ಅವಕಾಶ ನೀಡುತ್ತಿಲ್ಲ. ಬದಲಾಗಿ ಜನರ ಗಮನವನ್ನು ಬೇರೆಡೆ ಸೆಳೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT