ಸಿದ್ದರಾಮಯ್ಯ 
ರಾಜಕೀಯ

ಮುಡಾ ಹಗರಣ: ಬದಲಿ ನಿವೇಶನ ಕೋರಿ ಸಿದ್ದರಾಮಯ್ಯ ಪತ್ರ; ವೈರಲ್!

ದಿನ ಪತ್ರಿಕೆಗಳು, ಮಾಧ್ಯಮಗಳ ಸಂದರ್ಶನಗಳಲ್ಲಿ ನಾನು ಶುದ್ಧ ಹಸ್ತ, ಸಮಾಜವಾದಿ ಎಂದು ಸತ್ಯ ಹರಿಶ್ಚಂದ್ರನಂತೆ ಮಾತಾಡುವ ನಿಮ್ಮ ಅಸಲೀ ಬಂಡವಾಳ ಈಗ ಬಯಲಾಗಿದೆ.

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬದಲಿ ನಿವೇಶನ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರೆದಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಭಾನುವಾರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಪತ್ರವನ್ನು ಹಂಚಿಕೊಂಡಿರುವ ಜೆಡಿಎಸ್, 'ಗುಳಿಗೆ ಸಿದ್ದ ಒಳಗೆ ಮೇಯಿದ' ಈ ಮಾತು ನಿಮ್ಮಂಥವರನ್ನು ನೋಡಿಯೇ ಹೇಳಿರಬೇಕು. ನನಗೆ ಒಂದು ನಿವೇಶನವೂ ಇಲ್ಲ. ಯಾವುದೇ ಲೆಟರ್ ಬರೆದಿಲ್ಲ ಎಂದು ಸುಳ್ಳು ಹೇಳುವ ಸಿದ್ದರಾಮಯ್ಯ ಅವರೇ, ಸಮಾಜವಾದಿ ಮುಖವಾಡ ತೊಟ್ಟು ನೀವು ಮಾಡಿರುವ ಅಕ್ರಮಗಳಿಗೆ ಈ ಲೆಟರ್ ಸಾಕ್ಷಿ. ಬದಲಿ ನಿವೇಶನ ಕೋರಿ ನೀವೇ ಸ್ವತಃ ಬರೆದಿರುವ ಪತ್ರ, ನಿಮ್ಮದೇ ಸಹಿ…ಇಷ್ಟು ಸಾಕಲ್ಲವೇ ? ಇದು ನಿಮಗೆ ಕಪ್ಪು ಚುಕ್ಕೆ ಅಲ್ಲವೇ? ಎಂದು ಪ್ರಶ್ನಿಸಿದೆ.

ದಿನ ಪತ್ರಿಕೆಗಳು, ಮಾಧ್ಯಮಗಳ ಸಂದರ್ಶನಗಳಲ್ಲಿ ನಾನು ಶುದ್ಧ ಹಸ್ತ, ಸಮಾಜವಾದಿ ಎಂದು ಸತ್ಯ ಹರಿಶ್ಚಂದ್ರನಂತೆ ಮಾತಾಡುವ ನಿಮ್ಮ ಅಸಲೀ ಬಂಡವಾಳ ಈಗ ಬಯಲಾಗಿದೆ. ದಲಿತರ ಜಮೀನು ಕಬಳಿಸಿರುವ ನೀವು ಪರಿಶಿಷ್ಟ ಸಮುದಾಯಕ್ಕೆ ವಂಚಿಸಿದ್ದೀರಿ, ಸುಳ್ಳುಗಳ ಮೇಲೆ ಸುಳ್ಳಗಳನ್ನು ಹೇಳುತ್ತಾ ನಾಡಿನ ಜನರಿಗೂ ನಂಬಿಕೆ ದ್ರೋಹ ಎಸಗಿದ್ದೀರಿ. ಇದೇನಾ ನಿಮ್ಮ ಶುದ್ಧವಾದ ರಾಜಕೀಯ ಜೀವನ ಎಂದು ಟೀಕಿಸಿದೆ.

ಸಿದ್ದರಾಮಯ್ಯ ಅವರೇ ನಿಮಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವ ಯಾವ ನೈತಿಕತೆಯು ಉಳಿದಿಲ್ಲ. ಮೊದಲು ರಾಜೀನಾಮೆ ಕೊಟ್ಟು ನಿರ್ಗಮಿಸಿ ಎಂದು ಒತ್ತಾಯಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?