ಬಿಜೆಪಿ ಮುಖಂಡರಾದ ಅಶ್ವತ್ಥ ನಾರಾಯಣ, ಮಂಜುಳಾ ಮತ್ತಿತರರು 
ರಾಜಕೀಯ

ಟ್ರೈನಿ ಡಾಕ್ಟರ್ ಅತ್ಯಾಚಾರ, ಕೊಲೆ: ಸಿಬಿಐ ತನಿಖೆ ಸ್ವಾಗತಿಸಿದ ಬಿಜೆಪಿ; ಇಂಡಿಯಾ ಬಣ ಪಕ್ಷಗಳ ವಿರುದ್ಧ ವಾಗ್ದಾಳಿ

ಪಶ್ಚಿಮ ಬಂಗಾಳ ಸರ್ಕಾರದ ಅಸಮರ್ಥತೆ ಹಾಗೂ ನಿರ್ಲಕ್ಷ್ಯದ ನಡುವೆ ನ್ಯಾಯಾಲಯದ ಮಧ್ಯಪ್ರವೇಶದಿಂದ ಸಿಬಿಐ ತನಿಖೆಗೆ ವಹಿಸಿರುವುದು ಮಹಿಳೆಯರಿಗೆ ಹೆಚ್ಚಿನ ಶಕ್ತಿ ತುಂಬಿದೆ

ಬೆಂಗಳೂರು: ನ್ಯಾಯಾಂಗ ಮಧ್ಯಪ್ರವೇಶದ ನಂತರ ಕೋಲ್ಕತ್ತಾದ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಿಕೊಂಡಿರುವುದನ್ನು ಕರ್ನಾಟಕ ಬಿಜೆಪಿ ಸ್ವಾಗತಿಸಿದೆ. ಈ ವಿಷಯವನ್ನು ರಾಜಕೀಯಗೊಳಿಸಿದ್ದಕ್ಕಾಗಿ ಇಂಡಿಯಾ ಮೈತ್ರಿಕೂಟವನ್ನು ಟೀಕಿಸಿದೆ.

ಸಾಕ್ಷ್ಯ ನಾಶದ ಆತಂಕ ಮತ್ತು ಘಟನೆಯ ಬಗ್ಗೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವಂತೆಯೇ, ತನಿಖೆಯನ್ನು ಸಿಬಿಐಗೆ ವಹಿಸಿರುವ ಕೋಲ್ಕತ್ತಾ ಹೈಕೋರ್ಟ್ ತೀರ್ಪನ್ನು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ಬುಧವಾರ ಸ್ವಾಗತಿಸಿದರು.

ಪಶ್ಚಿಮ ಬಂಗಾಳ ಸರ್ಕಾರದ ಅಸಮರ್ಥತೆ ಹಾಗೂ ನಿರ್ಲಕ್ಷ್ಯದ ನಡುವೆ ನ್ಯಾಯಾಲಯದ ಮಧ್ಯಪ್ರವೇಶದಿಂದ ಸಿಬಿಐ ತನಿಖೆಗೆ ವಹಿಸಿರುವುದು ಮಹಿಳೆಯರಿಗೆ ಹೆಚ್ಚಿನ ಶಕ್ತಿ ತುಂಬಿದೆ ಎಂದು ಅವರು ಹೇಳಿದರು.

ಪಕ್ಷದ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಲ್ಕತ್ತಾದಲ್ಲಿ ನಡೆದ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ಮಂಜುಳಾ ಕಳವಳ ವ್ಯಕ್ತಪಡಿಸಿದರು. ಇದು ಗಂಭೀರವಾದ ವಿಷಯವಾಗಿದ್ದು, ಇಂಡಿಯಾ ಮೈತ್ರಿಕೂಟ ಮಹಿಳೆಯರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ರಾಜಕೀಯಗೊಳಿಸುತ್ತಿದೆ ಮತ್ತು ಅವುಗಳನ್ನು ಪ್ರತಿಷ್ಠೆಯ ವಿಷಯವನ್ನಾಗಿ ಮಾಡುತ್ತಿದೆ. ವೈದ್ಯಕೀಯ ಕಾಲೇಜು ಆಡಳಿತ ಮಂಡಳಿಯು ಅತ್ಯಾಚಾರ ಮತ್ತು ಕೊಲೆಯನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿರುವುದು ಭಯಾನಕವಾಗಿದೆ ಎಂದರು.

ಆಘಾತಕಾರಿ ಘಟನೆ ದೇಶಾದ್ಯಂತ ಲಕ್ಷಾಂತರ ಯುವ ಉದ್ಯೋಗಿ ಮಹಿಳೆಯರಲ್ಲಿ ಕಳವಳವನ್ನು ಉಂಟುಮಾಡಿದೆ. ಆಸ್ಪತ್ರೆ ಆವರಣದಲ್ಲಿ ಸಿಸಿಟಿವಿ ಅಳವಡಿಕೆಯಂತಹ ಸಮಸ್ಯೆಗಳಿಗೆ ವೈದ್ಯಕೀಯ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ಅಂದರೆ ನಾವು ಯಾವ ಯುಗದಲ್ಲಿ ಜೀವಿಸುತ್ತಿದ್ದೇವೆ? ಎಂದು ಪ್ರಶ್ನಿಸಿದ ಮಂಜುಳಾ, ಮಮತಾ ಬ್ಯಾನರ್ಜಿ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಕೇವಲ ರಾಜಕೀಯದ ಬಗ್ಗೆ ತಲೆಕೆಡಿಸಿಕೊಂಡಿವೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT