ಬಸನಗೌಡಪಾಟೀಲ್ ಯತ್ನಾಳ್- ಬಿಜೆಪಿ ಹೈಕಮಾಂಡ್ ನಾಯಕರು 
ರಾಜಕೀಯ

ಪಕ್ಷ ವಿರೋಧಿ ಹೇಳಿಕೆ: ಯತ್ನಾಳ್ ವಿರುದ್ಧ ಕ್ರಮಕ್ಕೆ BJP ಹೈಕಮಾಂಡ್ ಮುಂದು!

ಪಕ್ಷದ ನಿಲುವಿನ ವಿರುದ್ಧ ಯತ್ನಾಳ್ ಮಾತನಾಡುವುದನ್ನು ಸಹಿಸುವುದಿಲ್ಲ. ತಾಳ್ಮೆಗೂ ಮಿತಿಯಿದೆ. ಅದನ್ನು ಯಾರಾದರೂ ಮೀರಿದರೆ ಶಿಸ್ತು ಕ್ರಮ ಅನಿವಾರ್ಯ.

ಹುಬ್ಬಳ್ಳಿ: ಪಕ್ಷ ವಿರೋಧಿ ನಿಲುವು ಮತ್ತು ಟೀಕೆ ಹಿನ್ನೆಲೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹೈಕಮಾಂಡ್ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಿದೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಬುಧವಾರ ಹೇಳಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ನಿಲುವಿನ ವಿರುದ್ಧ ಯತ್ನಾಳ್ ಮಾತನಾಡುವುದನ್ನು ಸಹಿಸುವುದಿಲ್ಲ. ತಾಳ್ಮೆಗೂ ಮಿತಿಯಿದೆ. ಅದನ್ನು ಯಾರಾದರೂ ಮೀರಿದರೆ ಶಿಸ್ತು ಕ್ರಮ ಅನಿವಾರ್ಯ ಎಂದು ಹೇಳಿದರು.

ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಖಂಡಿಸಿ ಬಿಜೆಪಿಯ ಬಂಡಾಯ ನಾಯಕರು ಬಳ್ಳಾರಿಗೆ ಪಾದಯಾತ್ರೆ ನಡೆಸಲು ಯೋಜನೆ ರೂಪಿಸಿರುವುದರ ಕುರಿತು ಮಾತನಾಡಿ, ಬೆಂಗಳೂರಿನಿಂದ ಮೈಸೂರಿಗೆ ನಡೆದ ಪಾದಯಾತ್ರೆಯಲ್ಲಿ ಈ ವಿಷಯ ಈಗಾಗಲೇ ಗಮನ ಸೆಳೆದಿದೆ. ಹೀಗಾಗಿ ಮತ್ತೆ ಪಾದಯಾತ್ರೆ ನಡೆಸುವ ಯಾವುದೇ ಪ್ರಸ್ತಾಪ ಪಕ್ಷದ ಮುಂದಿಲ್ಲ. ಆದರೂ, ರಮೇಶ ಜಾರಕಿಹೊಳಿ, ಯತ್ನಾಳ್ ಹಾಗೂ ಇತರ ಮುಖಂಡರು ಪಾದಯಾತ್ರೆ ಕೈಗೊಂಡರೆ ನಮ್ಮ ಅಭ್ಯಂತರವಿಲ್ಲ. ಆದರೆ. ಹೈಕಮಾಂಡ್ ಒಪ್ಪಗೆ ಪಡೆದು ಮಾಡಲಿ ಎಂದು ತಿಳಿಸಿದರು.

ಒಂದು ವೇಳೆ ಪಕ್ಷವು ಮತ್ತೊಂದು ಯಾತ್ರೆಗೆ ನಿರ್ಧರಿಸಿದರೆ, ರಾಜ್ಯ ಘಟಕದ ಅಧ್ಯಕ್ಷರು ಸೇರಿದಂತೆ ಪ್ರತಿಯೊಬ್ಬ ನಾಯಕರೂ ಅದರಲ್ಲಿ ಭಾಗವಹಿಸುತ್ತಾರೆಂದು ಹೇಳಿದರು.

ಸಿದ್ದರಾಮಯ್ಯ ಪ್ರಕರಣದಲ್ಲಿ ತೋರಿದ ಆತುರತೆಯನ್ನು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ರಾಜ್ಯಪಾಲರು ಕೈಗೊಳ್ಳದಿರುವ ಕುರಿತ ಪ್ರಶ್ನೆಗೆ ಉತ್ತರಿಸಿ, ಈ ಪ್ರಕರಣದ ಬಗ್ಗೆ ನನಗೆ ತಿಳಿದಿಲ್ಲ ಎಂದರು.

ಆದರೆ, ಪಕ್ಷದ ನಿಲುವು ಸ್ಪಷ್ಟವಾಗಿದೆ, ಸ್ಪಷ್ಟ ಮಾಹಿತಿಗಳಿದ್ದರೆ ರಾಜ್ಯಪಾಲರು ಪ್ರಾಸಿಕ್ಯೂಷನ್'ಗೆ ಅನುಮತಿ ನೀಡುತ್ತಾರೆ ಎಂದರು.

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷವು ಕಾನೂನು ಸುವ್ಯವಸ್ಥೆಗೆ ಸೃಷ್ಟಿಸಿದೆ. ಇದರ ವಿರುದ್ಧ ರಾಷ್ಟ್ರಪತಿಗಳಿಗೆ ಬಿಜೆಪಿ ಮನವಿ ಮಾಡಲಿದೆ ಎಂದು ಇದೇ ವೇಳೆ ಛಲವಾದಿ ನಾರಾಯಣಸ್ವಾಮಿಯವರು ತಿಳಿಸಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್