ಎಚ್ ಡಿಕೆ, ಶಶಿಕಲಾ ಜೊಲ್ಲೆ, ನಿರಾಣಿ, ರೆಡ್ಡಿ ಸಾಂದರ್ಭಿಕ ಚಿತ್ರ 
ರಾಜಕೀಯ

ಕೇಂದ್ರ ಸಚಿವ ಕುಮಾರಸ್ವಾಮಿ, ಇತರ ಮೂವರ ವಿರುದ್ಧದ ಪ್ರಕರಣ: ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಸಂಪುಟ ಸಲಹೆ

ರಾಜ್ಯಪಾಲರ ಮುಂದೆ ಭ್ರಷ್ಟಾಚಾರ ತಡೆ ಕಾಯ್ದೆ 1980 ಅಡಿಯಲ್ಲಿ ತನಿಖಾ ಸಂಸ್ಥೆಗಳು ಸಲ್ಲಿಸಿದ್ದ ಪ್ರಾಸಿಕ್ಯೂಷನ್ ಅನುಮತಿ ಅರ್ಜಿ ಬಾಕಿ ಇದೆ.

ಬೆಂಗಳೂರು: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮತ್ತಿತರ ಮೂವರು ಬಿಜೆಪಿಯ ಮಾಜಿ ಸಚಿವರ ವಿರುದ್ಧದ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸಲಹೆಯನ್ನು ನೀಡಲು ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾನೂನು ಸಚಿವ ಎಚ್. ಕೆ.ಪಾಟೀಲ್, ಸಂವಿಧಾನದ ಆರ್ಟಿಕಲ್ 163 ರ ಅನ್ವಯ ಸಂಪುಟದ ಅಧಿಕಾರವನ್ನು ಬಳಸಿಕೊಂಡು ಸಂಪುಟ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದರು.

ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಹಾಗೂ ಎಚ್ ಡಿ ಕುಮಾರಸ್ವಾಮಿ ಹಾಗೂ ಜನಾರ್ದನ ರೆಡ್ಡಿ ವಿರುದ್ಧದ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಅನುಮತಿ ಕೋರಲಾಗಿತ್ತು. ನಾಲ್ಕು ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಮತ್ತು ಕುಮಾರಸ್ವಾಮಿ ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಕೆ ಆಗಿದೆ. ಈ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ರಾಜ್ಯಪಾಲರಿಗೆ ಸಲಹೆ ಸಲ್ಲಿಸಲಾಗುವುದು ಎಂದರು.

ರಾಜ್ಯಪಾಲರು ಸಲಹೆಯನ್ನು ನಿರಾಕರಿಸಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಎಚ್.ಕೆ. ಪಾಟೀಲ್, ರಾಜ್ಯಪಾಲರ ವಿವೇಚನಾ ಅಧಿಕಾರಿ ಸೀಮಿತವಾಗಿದ್ದು, ನಮ್ಮ ಸಲಹೆಗೆ ಬದ್ಧವಾಗಿರಬೇಕು. ಅವರು ತಮ್ಮ ಅಧಿಕಾರವನ್ನು ಬಹಳ ವಿವೇಚನೆಯಿಂದ ಚಲಾಯಿಸುವ ಖಾತ್ರಿಯಿದೆ. ರಾಜ್ಯಪಾಲರ ಮುಂದೆ ಭ್ರಷ್ಟಾಚಾರ ತಡೆ ಕಾಯ್ದೆ 1980 ಅಡಿಯಲ್ಲಿ ತನಿಖಾ ಸಂಸ್ಥೆಗಳು ಸಲ್ಲಿಸಿದ್ದ ಪ್ರಾಸಿಕ್ಯೂಷನ್ ಅನುಮತಿ ಅರ್ಜಿ ಬಾಕಿ ಇದೆ. "ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 19,17 ಎ ಮತ್ತು ಈಗ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ಸೆಕ್ಷನ್ 197 ಮತ್ತು 218 ಆಗಿರುವ ಅಪರಾಧ ಪ್ರಕ್ರಿಯೆ ಸಂಹಿತೆಯಡಿ ಅನುಮತಿ ಕೋರಲಾಗಿದೆ ಎಂದು ತಿಳಿಸಿದರು.

ಶಶಿಕಲಾ ಜೊಲ್ಲೆ ವಿರುದ್ಧ 2021 ರ ಡಿಸೆಂಬರ್ 9 ರಂದು ಮತ್ತು ಮಾಜಿ ಸಚಿವ ಮುರುಗೇಶ್ ನಿರಾಣಿ ವಿರುದ್ಧ ಫೆಬ್ರವರಿ 26, 2024 ರಂದು ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17 ಎ ಅಡಿಯಲ್ಲಿ ಲೋಕಾಯುಕ್ತರು ಪೂರ್ವಾನುಮತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಮೂರನೆಯದು ಕುಮಾರಸ್ವಾಮಿ ಅವರ ವಿರುದ್ಧ ನವೆಂಬರ್ 21, 2023 ರಂದು ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 19 ರ ಅಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಲಾಗಿದ್ದು, ಎಸ್ ಐಟಿ ಆರೋಪ ಪಟ್ಟಿ ಸಲ್ಲಿಸಿದೆ. ರಾಜ್ಯಪಾಲರು ಕೋರಿದ್ದ ಸ್ಪಷ್ಟನೆಗೆ ಆಗಸ್ಟ್ 16, 2024ರಂದು ಎಸ್ ಐಟಿ ಅಗತ್ಯ ಸ್ಪಷ್ಟನೆ ನೀಡಿದೆ ಎಂದು ತಿಳಿಸಿದರು.

ನಾಲ್ಕನೆಯದು ಜನಾರ್ದನ ರೆಡ್ಡಿಗೆ ಸಂಬಂಧಿಸಿದ್ದು, ಅವರ ವಿರುದ್ಧ ಮೇ 13, 2024 ರಂದು ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 19 ಮತ್ತು ಬಿಎನ್‌ಎಸ್‌ಎಸ್‌ನ ನಿಬಂಧನೆಗಳ ಅಡಿಯಲ್ಲಿ ಪ್ಯಾಸಿಕ್ಯೂಷನ್ ಗೆ ಅನುಮತಿ ಕೋರಲಾಗಿದ್ದು,ಈ ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಹ ಸಲ್ಲಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT