ಭರತ್ ಬೊಮ್ಮಾಯಿ 
ರಾಜಕೀಯ

ಶಿಗ್ಗಾಂವಿ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಕಣಕ್ಕೆ?

ಕ್ಷೇತ್ರದ ಸಮೀಕ್ಷೆಗಳ ಆಧಾರದ ಮೇಲೆ ಪಕ್ಷದ ನಾಯಕರು ಭರತ್‌ ಬೊಮ್ಮಾಯಿ ಅವರಿಗೆ ಬೆಂಬಲ ನೀಡುತ್ತಿದ್ದು, ಅವರಿಗೆ ಟಿಕೆಟ್ ನೀಡುವ ಬಗ್ಗೆ ವರಿಷ್ಠರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗಾಗಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು,ಮೂರು ಪಕ್ಷಗಳು ಅಭ್ಯರ್ಥಿಗಳ ಆಯ್ಕೆ ಸಂಬಂಧ ತಂತ್ರಗಾರಿಕೆ ರೂಪಿಸುತ್ತಿವೆ.

ಈ ನಡುವೆ ಬಿಜೆಪಿ ಸಂಸದ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಪುತ್ರ ಹಾಗೂ ಕೈಗಾರಿಕೋದ್ಯಮಿ ಭರತ್ ಬೊಮ್ಮಾಯಿ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಪಕ್ಷದ ಅಭ್ಯರ್ಥಿಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಕ್ಷೇತ್ರದ ಸಮೀಕ್ಷೆಗಳ ಆಧಾರದ ಮೇಲೆ ಪಕ್ಷದ ನಾಯಕರು ಭರತ್‌ ಬೊಮ್ಮಾಯಿ ಅವರಿಗೆ ಬೆಂಬಲ ನೀಡುತ್ತಿದ್ದು, ಅವರಿಗೆ ಟಿಕೆಟ್ ನೀಡುವ ಬಗ್ಗೆ ವರಿಷ್ಠರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಬೊಮ್ಮಾಯಿ ಶಿಗ್ಗಾಂವಿ ಶಾಸಕರಾಗಿ ಆಯ್ಕೆಯಾಗಿದ್ದರು. ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಗೆದ್ದು ಸಂಸದರಾದ ನಂತರ ರಾಜೀನಾಮೆ ನೀಡಿದ್ದರು. ಶಿಗ್ಗಾಂವಿಯಲ್ಲಿ ನಮಗೆ ಬೇರೆ ಅಭ್ಯರ್ಥಿಗಳಿಲ್ಲ ಎಂದು ಬಿಜೆಪಿ ಮುಖಂಡರೊಬ್ಬರು ಹೇಳಿದರು.

ಏತನ್ಮಧ್ಯೆ, ಬೊಮ್ಮಾಯಿ ಅವರು ಕಳೆದ ಕೆಲವು ವಾರಗಳಿಂದ ಶಿಗ್ಗಾಂವಿಯಲ್ಲಿ ವಿವಿಧ ವರ್ಗದ ಜನರನ್ನು ಭೇಟಿಯಾಗುತ್ತಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಭರತ್ ಕೂಡ ತಯಾರಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ಭರತ್ ಅವರಿಗೆ ಟಿಕೆಟ್ ಸಿಕ್ಕರೆ ಬೊಮ್ಮಾಯಿ ಕುಟುಂಬದಿಂದ ಮೂರನೇ ತಲೆಮಾರಿನವರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಬಸವರಾಜ್ ತಂದೆ ಎಸ್ ಆರ್ ಬೊಮ್ಮಾಯಿ ಸಿಎಂ ಆಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT