ಡಿಕೆ ಶಿವಕುಮಾರ್, ಸಿದ್ದರಾಮಯ್ಯ 
ರಾಜಕೀಯ

ಹಾಸನ ಕಾಂಗ್ರೆಸ್ ಸಮಾವೇಶ: ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ನಡುವಿನ ಮುುಸುಕಿನ ಗುದ್ಗಾಟ; ಸಿಎಂ ಬೆಂಬಲಿಗರ ಅಸಮಾಧಾನ

ಶಿವಕುಮಾರ್‌ಗೆ ಎರಡೂವರೆ ವರ್ಷಗಳ ನಂತರ ಅಧಿಕಾರ ಹಸ್ತಾಂತರಿಸುವ ಕಾಂಗ್ರೆಸ್‌ ಹೈಕಮಾಂಡ್‌ ನಿರ್ಧಾರಕ್ಕೆ ಸಿದ್ದರಾಮಯ್ಯ ಬದ್ಧರಾಗುತ್ತಾರೆಯೇ ಎಂಬುದು ಸದ್ಯದ ಪ್ರಶ್ನೆಯಾಗಿದೆ.

ಬೆಂಗಳೂರು: ಉಪಚುನಾವಣೆ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಸುಕಿನ ಗುದ್ದಾಟಕ್ಕೆ ಮರಳಿದ್ದಾರೆ ಎಂದು ತೋರುತ್ತಿದೆ, ಹಾಸನದಲ್ಲಿ ರ‍್ಯಾಲಿಯನ್ನು ಹೈಜಾಕ್ ಮಾಡಿದ ಬಗ್ಗೆ ಸಿದ್ದರಾಮಯ್ಯ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಿವಕುಮಾರ್‌ಗೆ ಎರಡೂವರೆ ವರ್ಷಗಳ ನಂತರ ಅಧಿಕಾರ ಹಸ್ತಾಂತರಿಸುವ ಕಾಂಗ್ರೆಸ್‌ ಹೈಕಮಾಂಡ್‌ ನಿರ್ಧಾರಕ್ಕೆ ಸಿದ್ದರಾಮಯ್ಯ ಬದ್ಧರಾಗುತ್ತಾರೆಯೇ ಎಂಬುದು ಸದ್ಯದ ಪ್ರಶ್ನೆಯಾಗಿದೆ. 2023 ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಹೈಕಮಾಂಡ್ ಮಟ್ಟದಲ್ಲಿ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂಬ ವರದಿಗಳು ಬಂದಿದ್ದು ಅದನ್ನು ಶಿವಕುಮಾರ್ ಕೂಡ ಹೇಳಿಕೊಂಡಿದ್ದಾರೆ. ಬುಧವಾರ ಕೆ.ಆರ್.ಪೇಟೆಯಲ್ಲಿ ಈ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಸಿಎಂ ಬದಲಾವಣೆಗೆ ಸಂಬಂಧಿಸಿದಂತೆ ಹೈಕಮಾಂಡ್ ಮಟ್ಟದಲ್ಲಿ ಯಾವುದೇ ಒಪ್ಪಂದವಾಗಿಲ್ಲ. ಆದರೆ ನಾವು ಹೈಕಮಾಂಡ್ ನಿರ್ಧಾರಕ್ಕೆ (ಭವಿಷ್ಯದಲ್ಲಿ) ಬದ್ಧರಾಗುತ್ತೇವೆ ಎಂದು ಅವರು ಸುದ್ದಿಗಾರರಿಗೆ ಉತ್ತರಿಸಿದರು. ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ನಮ್ಮ ಸಿಎಂ ನಿರ್ಧಾರವೇ ಅಂತಿಮ, ಅದಕ್ಕೆ ನನ್ನ ಅಭ್ಯಂತರವಿಲ್ಲ ಎಂದು ಹೇಳಿದ್ದರು.

ಗುರುವಾರದ ರ್ಯಾಲಿಯನ್ನು ಸಿದ್ದರಾಮಯ್ಯನವರ ಬೆಂಬಲಿಗರು ಶೋಷಿತ ಸಮುದಾಯಗಳ ಒಕ್ಕೂಟದ ಅಡಿಯಲ್ಲಿ ಮೊದಲು ಯೋಜಿಸಲಾಗಿತ್ತು. ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ದಲಿತರ ಸಂಕ್ಷಿಪ್ತ ರೂಪವಾದ ಅಹಿಂದ ಸಂಘಟನೆ ಸಿದ್ದರಾಮಯ್ಯ ಅವರ್ನು ಬೆಂಬಲಿಸಲುಈ ಸಮಾವೇಶ ಆಯೋಜಿಸಲಾಗಿತ್ತು. ಇದಕ್ಕೆ ‘ಸ್ವಾಭಿಮಾನಿ ಸಮಾವೇಶ’ ಎಂದು ಹೆಸರಿಡಲಾಗಿತ್ತು ಆದರೆ ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರೊಬ್ಬರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅನಾಮಧೇಯ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಸ್ವಾಭಿಮಾನಿ ಮೈತ್ರಿಕೂಟ ಮತ್ತು ಕಾಂಗ್ರೆಸ್ ಆಶ್ರಯದಲ್ಲಿ ಸಮಾವೇಶ ನಡೆಯಲಿದೆ ಎಂದು ಹೇಳಿದ ಶಿವಕುಮಾರ್ ಅದನ್ನು ಕಾಂಗ್ರೆಸ್ ಪಕ್ಷದ ಸಮಾವೇಶವನ್ನಾಗಿ ಪರಿವರ್ತಿಸಿ ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ ಎಂದು ಮರುನಾಮಕರಣ ಮಾಡಿದರು, ಇದು ಸಿದ್ದರಾಮಯ್ಯ ಬೆಂಬಲಿಗರಿಗೆ ಇಷ್ಟವಾಗಿಲ್ಲ.

ಶೋಷಿತ ಸಮುದಾಯಗಳ ಒಕ್ಕೂಟವು ಜನವರಿಯಲ್ಲಿ ಕಿತ್ತೂರು ಕರ್ನಾಟಕ ಪ್ರದೇಶದಲ್ಲಿ, ಬಹುಶಃ ಬೆಳಗಾವಿಯಲ್ಲಿ ವಿಶೇಷ ಸಮಾವೇಶವನ್ನು ಯೋಜಿಸುತ್ತಿದೆ. ಹಾಸನ ಸಮಾವೇಶದಲ್ಲಿ ಹಲವು ಒಕ್ಕೂಟ ಮುಖಂಡರು ಪಾಲ್ಗೊಳ್ಳುವ ಸಾಧ್ಯತೆ ಕಡಿಮೆಯಿದೆ, ಇದು ತಮ್ಮ ನಾಯಕತ್ವದ ಸ್ಥಾನಮಾನಕ್ಕೆ ಧಕ್ಕೆ ತರಲಿದೆ ಎಂದು ಭಾವಿಸಿದ್ದಾರೆ ಎಂದು ಒಕ್ಕೂಟದ ಸಂಚಾಲಕರಾದ ಕುರುಬ ಮುಖಂಡ ರಾಮಚಂದ್ರಪ್ಪ, ಡಿಎಸ್‌ಎಸ್‌ ಮುಖಂಡ ಮಾವಳ್ಳಿ ಶಂಕರ್‌ ತಿಳಿಸಿದ್ದಾರೆ.

ಈ ಹಿಂದೆ ಅಹಿಂದ ಸಮಾವೇಶ ನಂತರ ಹಿಂದುಳಿದ ವರ್ಗದ ಸಮಾವೇಶವಾಯಿತು. ಸ್ವಾಭಿಮಾನಿ ಸಮಾವೇಶ ಈಗ ಕಾಂಗ್ರೆಸ್ ಸಮಾವೇಶ ಎಂದು ಬದಲಾಗಿದೆ ಎಂದು ನಾಯಕರೊಬ್ಬರು ಹೇಳಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಶಿವಕುಮಾರ್ ಬೆಂಬಲಿಗರು ಸಮಾವೇಶವನ್ನು ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಬಳಸಿಕೊಳ್ಳುತ್ತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸ್ವಾಭಿಮಾನಿ ಮೈತ್ರಿಕೂಟ ಕಾಂಗ್ರೆಸ್ ಸಮಾವೇಶಕ್ಕೆ ಹೆಚ್ಚಿನ ಜನರನ್ನು ಕರೆತರಲಿದೆ ಎಂದು ಸಿಎಂ ಹೇಳಿಕೆ ನೀಡಿದ್ದು, ಒಕ್ಕಲಿಗರು ಹಳೆ ಮೈಸೂರು ಭಾಗದಲ್ಲಿ ಪ್ರವಾಸ ಕೈಗೊಂಡು ಜನರನ್ನು ಸಜ್ಜುಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದರೆ ಸಂತೋಷವಾಗುತ್ತದೆ, ಆದರೆ ಕಾಂಗ್ರೆಸ್ ಸಮಾವೇಶವನ್ನು ಮುನ್ನಡೆಸುತ್ತದೆ ಎಂದು ಶಿವಕುಮಾರ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT