ಸಂತೋಷ್ ಮತ್ತು ನಿಖಿಲ್ 
ರಾಜಕೀಯ

BL ಸಂತೋಷ್ ಭೇಟಿಯಾದ ನಿಖಿಲ್ ಕುಮಾರಸ್ವಾಮಿ: ಭವಿಷ್ಯದ ರಾಜಕೀಯಕ್ಕಾಗಿ ಸಲಹೆ-ಮಾರ್ಗದರ್ಶನ

ದೆಹಲಿ ಭೇಟಿ ವೇಳೆ ಸಂತೋಷ್ ಜೀ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡೆ. ಚನ್ನಪಟ್ಟಣ ಚುನಾವಣೆ ಕುರಿತಂತೆ ಕೆಲ ಮಾಹಿತಿಗಳನ್ನು ಕೇಳಿ ಪಡೆದುಕೊಂಡರು.

ನವದೆಹಲಿ: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ನಂತರ ನವದೆಹಲಿಗೆ ತೆರಳಿರುವ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಬಿ.ಎಲ್. ಸಂತೋಷ್ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಜೀವನ – ಸಾಧನೆ ಕುರಿತ Furrows in a Field: The Unexplored Life of H.D. Deve Gowda ಗ್ರಂಥವನ್ನು ನೀಡಿ ಆಶೀರ್ವಾದ ಪಡೆದುಕೊಂಡ ನಿಖಿಲ್ ಅವರು, ಉಪ ಚುನಾವಣೆ, ಆ ನಂತರದ ರಾಜಕೀಯ ಬೆಳವಣಿಗೆಗಳ ಬಗ್ಗೆ ಹಲವು ಅಂಶಗಳನ್ನು ಅವರ ಗಮನಕ್ಕೆ ತಂದರು. ಚನ್ನಪಟ್ಟಣ ಚುನಾವಣೆಯ ಬಗ್ಗೆ ಸಂತೋಷ್ ಅವರು ಕೆಲ ಮಾಹಿತಿಗಳನ್ನು ನಿಖಿಲ್ ಅವರಿಂದ ಪಡೆದುಕೊಂಡರು ಹಾಗೂ ಮುಂದಿನ ರಾಜಕೀಯ ಬೆಳವಣಿಗೆ ದೃಷ್ಟಿಯಿಂದ ನಿಖಿಲ್ ಅವರಿಗೆ ಮಹತ್ವದ ಸಲಹೆ ಸೂಚನೆ ಮಾರ್ಗದರ್ಶನ ನೀಡಿದರು.

ಈ ಬಗ್ಗೆ ಮಾಹಿತಿ ನೀಡಿರುವ ನಿಖಿಲ್ ಕುಮಾರಸ್ವಾಮಿ ಅವರು, ದೆಹಲಿ ಭೇಟಿ ವೇಳೆ ಸಂತೋಷ್ ಜೀ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡೆ. ಚನ್ನಪಟ್ಟಣ ಚುನಾವಣೆ ಕುರಿತಂತೆ ಕೆಲ ಮಾಹಿತಿಗಳನ್ನು ಕೇಳಿ ಪಡೆದುಕೊಂಡರು. ನನ್ನ ರಾಜಕೀಯ ಬೆಳವಣಿಗೆ ಹಾಗೂ ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಬಲಗೊಳಿಸುವ ನಿಟ್ಟಿನಲ್ಲಿ ಮಾರ್ಗದರ್ಶನ ನೀಡಿದರು ಎಂಬುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ರಷ್ಯಾ ಸೇನೆ ಸೇರಿದ್ದ ಭಾರತ ಮೂಲದ ವ್ಯಕ್ತಿ ಬಂಧನ': ಭಾರತಕ್ಕೆ ಉಕ್ರೇನ್ ಮಾಹಿತಿ!

ಕೊನೆಗೂ Bigg Boss Kannada ವೀಕ್ಷಕರಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ, ರಿಯಾಲಿಟಿ ಶೋ ಪುನಾರಂಭಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಗ್ರೀನ್ ಸಿಗ್ನಲ್!

ಕೊಪ್ಪಳದ ಗಂಗಾವತಿಯಲ್ಲಿ ಹರಿಯಿತು ನೆತ್ತರು: BJP ಯುವ ಮೋರ್ಚಾ ಅಧ್ಯಕ್ಷನ ಬರ್ಬರ ಹತ್ಯೆ

ಮಧ್ಯಪ್ರದೇಶ: ಕಾಫ್ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯ; ಚಿಕಿತ್ಸೆ ಪಡೆಯುತ್ತಿದ್ದ 6 ಮಕ್ಕಳ ಮರಣ; ಸಾವಿನ ಸಂಖ್ಯೆ 20ಕ್ಕೆ ಏರಿಕೆ

BiggBoss Kannada: ಬಿಗ್ ಬಾಸ್ 12 ಮನೆಗೆ ಬೀಗಮುದ್ರೆ, ಜಾಲಿವುಡ್ ಸ್ಟುಡಿಯೋಸ್ ಇಂದು ಹೈಕೋರ್ಟ್ ಮೊರೆ?

SCROLL FOR NEXT