ಸಿದ್ದರಾಮಯ್ಯ ಹಾಗೂ ವಿಜಯೇಂದ್ರ 
ರಾಜಕೀಯ

ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು ವಿಜಯೇಂದ್ರರಿಂದ 150 ಕೋಟಿ ರೂ ಆಮಿಷ: ಸಿಬಿಐ ತನಿಖೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಪ್ರಧಾನಿ ಮೋದಿ ಅವರು ಈ ಆರೋಪವನ್ನು ಗಂಭೀರವಾಗಿ ಪರಿಗಣಿಸಿ, ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಒತ್ತಾಯಿಸಿದ್ದಾರೆ.

ಬೆಂಗಳೂರು: ವಕ್ಫ್ ಆಸ್ತಿ ಒತ್ತುವರಿ ತನಿಖಾ ವರದಿ ಬಗ್ಗೆ ಮಾತನಾಡದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು 150 ಕೋಟಿ ರೂಪಾಯಿ ಲಂಚದ ಆಮಿಷ ನೀಡಿದ್ದರು ಎಂದು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ. ಪ್ರಧಾನಿ ಮೋದಿ ಅವರು ಈ ಆರೋಪವನ್ನು ಗಂಭೀರವಾಗಿ ಪರಿಗಣಿಸಿ, ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಒತ್ತಾಯಿಸಿದ್ದಾರೆ.

ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಿಜಯೇಂದ್ರ ನಮ್ಮ ಮನೆಗೆ ಬಂದು ವಕ್ಪ್ ಆಸ್ತಿ ಒತ್ತುವರಿ ಬಗ್ಗೆ ತನಿಖೆ ನಡೆಸಿ ನೀಡಿರುವ ವರದಿ ಬಗ್ಗೆ ಮೌನವಹಿಸುವಂತೆ ಕೇಳಿಕೊಂಡಿದ್ದರು. ಅಲ್ಲದೆ ಇದಕ್ಕಾಗಿ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು. ನಾನು ಅವರಿಗೆ ಗದರಿಸಿ ಮನೆಯಿಂದ ಓಡಿಸಿದ್ದೆ. ಅದರ ನಂತರ ಈ ಎಲ್ಲ ಘಟನೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೆ’’ ಎಂದು ಸಾಕ್ಷಾತ್ ಅನ್ವರ್ ಮಾಣಿಪ್ಪಾಡಿಯವರೇ ಮಾಧ್ಯಮದ ಮುಂದೆ ಹೇಳಿಕೊಂಡಿದ್ದಾರೆ. ‘’ನಾ ಖಾವೂಂಗಾ, ನಾ ಖಾನೆ ದೂಂಗಾ’’ ಎಂದು ಊರೆಲ್ಲ ಡಂಗೂರ ಹೊಡ್ಕೊಂಡು ತಿರುಗಾಡುವ ನರೇಂದ್ರ ಮೋದಿಯವರು ಈ ಆರೋಪದ ಬಗ್ಗೆ ಮೌನವಾಗಿರುವುದು ಸಂಶಯ ಮಾತ್ರವಲ್ಲ, ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ವಕ್ಫ್ ಆಸ್ತಿ ಲೂಟಿಯಲ್ಲಿ ಭಾಗಿಯಾಗಿರುವ ಬಿವೈ ವಿಜಯೇಂದ್ರ ಮತ್ತು ಇತರರನ್ನು ಬಿಜೆಪಿ ಹೈಕಮಾಂಡ್ ಏಕೆ ರಕ್ಷಿಸುತ್ತಿದೆ? ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದ್ದಾರೆ.

ವಕ್ಫ್ ಆಸ್ತಿ ವಿಚಾರದಲ್ಲಿ ವಿಜಯೇಂದ್ರ ವಹಿಸುತ್ತಿರುವ ಆಸಕ್ತಿಯನ್ನ ನೋಡಿದರೆ ಅವರು ಮತ್ತು ಅವರ ಕುಟುಂಬ ವರ್ಗ ವಕ್ಫ್ ಆಸ್ತಿ ಕಬಳಿಕೆಯಲ್ಲಿ ನೇರವಾಗಿ ಶಾಮೀಲಾಗಿರುವಂತೆ ಕಾಣುತ್ತಿದೆ. ಅವರ ಜೊತೆ ಪಕ್ಷದ ಮಹಾಮಹಿಮರೆಲ್ಲರೂ ಶಾಮೀಲಾಗಿರುವ ಸಂಶಯ ಇದೆ. ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಗರಿಷ್ಠ ಸಂಖ್ಯೆಯಲ್ಲಿ ನೋಟಿಸ್ ನೀಡಿರುವುದನ್ನು ಈಗಾಗಲೇ ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿವೆ. ಮಾಣಿಪ್ಪಾಡಿಯವರ ಬಾಯಿಮುಚ್ಚಿಸುವ ಷಡ್ಯಂತ್ರದಲ್ಲಿ ಯಾರೆಲ್ಲ ಶಾಮೀಲಾಗಿದ್ದಾರೆ? ವಕ್ಫ್ ಆಸ್ತಿ ಲೂಟಿಯಲ್ಲಿ ಬೇರೆ ಯಾರೆಲ್ಲ ಪಾಲುದಾರರಿದ್ದಾರೆ? ಎನ್ನುವ ಬಗ್ಗೆಯೂ ತನಿಖೆಯಾಗಬೇಕಾಗಿದೆ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಬಗ್ಗೆ ಮಾಣಿಪ್ಪಾಡಿ ಅಥವಾ ವಿಜಯೇಂದ್ರ ಅವರು ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲರು!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಡಿಕೆ ಶಿವಕುಮಾರ್ ಪತ್ರ!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

Chhattisgarh: ಹೊಲದಿಂದ ಮನೆಗೆ ಮರಳುತ್ತಿದ್ದ ಮಹಿಳೆಗೆ ಸಿಡಿಲು ಬಡಿದು ಸಾವು, Video