ವಿಧಾನಸಭೆಯಲ್ಲಿ ವಿಜಯೇಂದ್ರ 
ರಾಜಕೀಯ

150 ಕೋಟಿ ರೂ. ಆಮಿಷದ ಬಗ್ಗೆ ಸಿಬಿಐ ತನಿಖೆಗೆ ವಹಿಸಲಿ: ವಿಧಾನಸಭೆಯಲ್ಲಿ ವಿಜಯೇಂದ್ರ ಆಗ್ರಹ

ಇಂದು ವಿಧಾನಸಭೆಯಲ್ಲಿ ತಮ್ಮ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಮಾಡಿರುವ ಆರೋಪದ ಬಗ್ಗೆ ಪ್ರಸ್ತಾಪಿಸಿದ ವಿಜಯೇಂದ್ರ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬೆಳಗಾವಿ: ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನ ವಹಿಸುವಂತೆ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್‌ ಮಾಣಿಪ್ಪಾಡಿ ಅವರಿಗೆ ತಾನು 150 ಕೋಟಿ ರೂ. ಆಮಿಷವೊಡ್ಡಿದ ಬಗ್ಗೆ ಸಿಬಿಐ ತನಿಖೆಗೆ ವಹಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಸೋಮವಾರ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.

ಇಂದು ವಿಧಾನಸಭೆಯಲ್ಲಿ ತಮ್ಮ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಮಾಡಿರುವ ಆರೋಪದ ಬಗ್ಗೆ ಪ್ರಸ್ತಾಪಿಸಿದ ವಿಜಯೇಂದ್ರ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಿಯಾಂಕ್ ಖರ್ಗೆ ಅವರು ನನ್ನ ವಿರುದ್ಧ ಗುರುತರ ಆರೋಪ ಮಾಡಿದ್ದಾರೆ. ಹಿಂದಿನ ಅಲ್ಪಸಂಖ್ಯಾತರ ಆಯೋಗದ ಹೆಸರು ಹೇಳಿ ನನ್ನ ಮೇಲೆ ಆರೋಪ‌ ಮಾಡಲಾಗಿದೆ. ವಕ್ಫ್ ಆಸ್ತಿ ದುರುಪಯೋಗ ಕುರಿತು ಮಾಣಿಪ್ಪಾಡಿ ವರದಿ ಕೊಟ್ಟಿದ್ದರು. ನಂತರ ಉಪಲೋಕಾಯುಕ್ತ ನ್ಯಾ‌.ಆನಂದ್ ಅವರು ವರದಿ ಕೊಟ್ಟಿದ್ದರು. 2016ರಲ್ಲಿ ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ವರದಿ ನೀಡಿದ್ದರು. ಆದರೆ ಅಂದಿನ ಸಿಎಂ ಉಪಲೋಕಾಯುಕ್ತರ ವರದಿ ಮುಚ್ಚಿ ಹಾಕಿದ್ದರು ಎಂದರು.

ಅಲ್ಪಸಂಖ್ಯಾತರ ಆಯೋಗದ ಹಿಂದಿನ‌ ಅಧ್ಯಕ್ಷರು ಸರ್ಕಾರಕ್ಕೆ ಶಿಫಾರಸು ಮಾಡಿದ್ದನ್ನು ಸಿದ್ದರಾಮಯ್ಯ ಸಚಿವ ಸಂಪುಟ ತಿರಸ್ಕರಿಸಿತು. ಸಿಎಂ ಅವರಿಗೆ ಸಿಬಿಐ ಬಗ್ಗೆ ಬಹಳ ವಿಶ್ವಾಸ ಇದೆ. ನಾನು ಸಿಎಂಗೆ ಸವಾಲ್ ಹಾಕುತ್ತೇನೆ, 150 ಕೋ ರೂ. ಟಿ ಆಮಿಷ ಆರೋಪವನ್ನು ಸಿಬಿಐಗೆ ವಹಿಸಲಿ. ಜತೆಗೆ ಅನ್ವರ್ ಮಾಣಿಪ್ಪಾಡಿ ವರದಿಯ ತನಿಖೆಯನ್ನೂ ಸಿಬಿಐಗೆ ಕೊಡಲಿ ಎಂದು ವಿಜಯೇಂದ್ರ ಆಗ್ರಹಿಸಿದರು.

ಹಗರಣಗಳ ಸುಳಿಯಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರು ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಸಿಎಂ ಹಿಟ್ ಅಂಡ್ ರನ್ ಮಾಡುವುದು ಬೇಡ ಎಂದು ವಿಜಯೇಂದ್ರ ಕಿಡಿ ಕಾರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT