ಸಿ.ಟಿ.ರವಿ, ಬಿಕೆ ಹರಿಪ್ರಸಾದ್ 
ರಾಜಕೀಯ

ಬೆಳಗಾವಿ ಅಧಿವೇಶನ: ಪರಿಷತ್ತಿನಲ್ಲಿ ಒಳ ಮೀಸಲಾತಿ, ಮುಡಾ ಹಗರಣದ ಬಗ್ಗೆ ಚರ್ಚೆ ಕಾಂಗ್ರೆಸ್- ಬಿಜೆಪಿ ಶಾಸಕರ ನಡುವೆ ವಾಕ್ಸಮರ

RSS ಮತ್ತು ಸಂಘ ಪರಿವಾರಕ್ಕೆ ಮಂಜೂರಾದ ಜಮೀನು ಮತ್ತುಈ ಭೂಮಿಗೆ ಎಷ್ಟು ಹಣ ನೀಡಿದ್ದಾರೆ ಎಂಬುದರ ತನಿಖೆಗೆ ವಿಜಯೇಂದ್ರ ಒತ್ತಾಯಿಸಬೇಕು ಎಂದು ಬಿಕೆ ಹರಿಪ್ರಸಾದ್ ಹೇಳಿದರು

ಬೆಳಗಾವಿ: ವಿಧಾನಪರಿಷತ್ತಿನಲ್ಲಿಂದು ಒಳ ಮೀಸಲಾತಿ ಹಾಗೂ ಮುಡಾ ಪ್ರಕರಣ ಪ್ರತಿಧ್ವನಿಸಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು. ಮುಡಾ ಹಗರಣ ಕುರಿತು ಸಿಬಿಐ ತನಿಖೆ ನಡೆಯಬೇಕು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೇಡಿಕೆಗೆ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ತೀಕ್ಷ್ಣವಾಗಿ ಉತ್ತರ ನೀಡುವ ಮೂಲಕ ಅವರ ನಿಲುವನ್ನು ಪ್ರಶ್ನಿಸಿದರು.

RSS ಮತ್ತು ಸಂಘ ಪರಿವಾರಕ್ಕೆ ಮಂಜೂರಾದ ಜಮೀನು ಮತ್ತುಈ ಭೂಮಿಗೆ ಎಷ್ಟು ಹಣ ನೀಡಿದ್ದಾರೆ ಎಂಬುದರ ತನಿಖೆಗೆ ವಿಜಯೇಂದ್ರ ಒತ್ತಾಯಿಸಬೇಕು ಎಂದು ಬಿಕೆ ಹರಿಪ್ರಸಾದ್ ಹೇಳಿದರು. ಬಲ ಪಂಥೀಯ ಸಂಘಟನೆಗಳೊಂದಿಗೆ ಬಿಜೆಪಿ ಮೈತ್ರಿ ಕಡೆಗೆ ಗಮನ ಕೇಂದ್ರೀಕರಿಸಿ ಮಾತನಾಡಿದ ಹರಿಪ್ರಸಾದ್, ಅವರ ಭೂ ವ್ಯವಹಾರಗಳ ಕುರಿತು ಹೆಚ್ಚಿನ ಪರಿಶೀಲನೆಗೆ ಕರೆ ನೀಡಿದರು.

ಹರಿಪ್ರಸಾದ್ ಸುಪ್ರೀಂ ಕೋರ್ಟ್ ನ ತೀರ್ಪನ್ನು ಉಲ್ಲೇಖಿಸಿದಾಗ ಒಳಮೀಸಲಾತಿ ವಿಷಯದತ್ತ ಚರ್ಚೆ ಹೊರಳಿತು. ಸುಪ್ರೀಂ ಕೋರ್ಟ್ ಒಳ ಮೀಸಲಾತಿಗೆ ನಿರ್ದೇಶನ ನೀಡಿದೆ. ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಅದನ್ನು ಜಾರಿಗೊಳಿಸಬೇಕು ಎಂದು ಅವರು ಪ್ರತಿಪಾದಿಸಿದರು.

ಇದಕ್ಕೂ ಮುನ್ನಾ ಮಾತನಾಡಿದ ಬಿಜೆಪಿ ನಾಯಕ ಸಿ.ಟಿ. ರವಿ. ಒಳ ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರವೇ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ನಾವು ಮಾಧುಸ್ವಾಮಿ ವರದಿಯನ್ನು ಜಾರಿಗೊಳಿಸಿದ್ದೇವೆ. ಅದರಡಿ ಎಲ್ಲಾ ಸಮುದಾಯಗಳಿಗೆ ನ್ಯಾಯವನ್ನು ನೀಡಿದ್ದೇವೆ ಎಂದರು. ಜನರು ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಒಪ್ಪುತ್ತಿಲ್ಲ. ಸರ್ಕಾರ ಮಾಧುಸ್ವಾಮಿ ವರದಿಯನ್ನು ಬೆಂಬಲಸಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ ಎಂದು ಹೇಳಿದರು.

ಸೋಮವಾರ ಲಿಂಗಾಯಿತ ಪಂಚಮಸಾಲಿ ಸಮುದಾಯದ ಹೋರಾಟಗಾರರ ಮೇಲೆ ನಡೆದ ಪೊಲೀಸ್ ಲಾಠಿ ಚಾರ್ಜನ್ನು ಟೀಕಿಸಿದ್ದ ವಿಜಯೇಂದ್ರ, ಇದು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ದುರಂಹಕಾರಕ್ಕೆ ಸ್ಪಷ್ಟ ಉದಾಹರಣೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT