ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ 
ರಾಜಕೀಯ

ಅಧಿವೇಶನದ ಮಧ್ಯೆಯೇ ದಿಢೀರ್​ ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ

ವಿಜಯೇಂದ್ರ ಅವರು ಸುಮಾರು 15 ನಿಮಿಷಗಳ ಕಾಲ ಮೋದಿ ಜೊತೆ ಚರ್ಚಿಸಿದ್ದು, ರಾಜ್ಯದಲ್ಲಿನ ಭಿನ್ನಮತೀಯ ಚಟುವಟಿಕೆ, ಯತ್ನಾಳ್ ಮತ್ತು ತಂಡದಿಂದ ಪಕ್ಷಕ್ಕಾಗುತ್ತಿರುವ ಆಗುತ್ತಿರುವ ಮುಜುಗರವನ್ನು ಮೋದಿ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ.

ನವದೆಹಲಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ದಿಢೀರ್ ದೆಹಲಿ ತೆರಳಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ರಾಜ್ಯದ ಮೂರು ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಅನುಭವಿಸಿದ ನಂತರ ಬಿವೈ ವಿಜಯೇಂದ್ರ ಅವರ ವಿರೋಧಿ ಬಣ ಬಹಿರಂಗವಾಗಿಯೇ ರಾಜ್ಯಾಧ್ಯಕ್ಷರ ವಿರುದ್ಧ ಅಸಮಾಧಾನವನ್ನ ಹೊರ ಹಾಕುತ್ತಿದೆ. ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡಬೇಕೆಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಪಟ್ಟು ಹಿಡಿದಿದ್ದು, ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಗುಸು ಗುಸು ಕೇಳಿ ಬರುತ್ತಿದೆ.

ಜನವರಿಯಲ್ಲಿ ಮಹತ್ವದ ಬದಲಾವಣೆಗಳು ಆಗಲಿದೆ ಎಂದು ಯತ್ನಾಳ್​ ಟೀಂ ಹೇಳುತ್ತಿದೆ. ಮತ್ತೊಂದೆಡೆ ಯಾವುದೇ ಶೋಕಾಸ್ ನೋಟಿಸಿಗೂ ಬಗ್ಗದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಟೀಂ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವೇಳೆಯೂ, ಯಡಿಯೂರಪ್ಪ ಕುಟುಂಬದ ವಿರುದ್ದ ವಾಗ್ದಾಳಿ ಮುಂದುವರಿಸಿದೆ.

ಈ ಎಲ್ಲಾ ಬೆಳವಣಿಗೆಗಳ ಮಧ್ಯ ವಿಜಯೇಂದ್ರ ಅವರು ಇಂದು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದು ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.

ವಿಜಯೇಂದ್ರ ಅವರು ಸುಮಾರು 15 ನಿಮಿಷಗಳ ಕಾಲ ಮೋದಿ ಜೊತೆ ಚರ್ಚಿಸಿದ್ದು, ರಾಜ್ಯದಲ್ಲಿನ ಭಿನ್ನಮತೀಯ ಚಟುವಟಿಕೆ, ಯತ್ನಾಳ್ ಮತ್ತು ತಂಡದಿಂದ ಪಕ್ಷಕ್ಕಾಗುತ್ತಿರುವ ಡ್ಯಾಮೇಜ್, ಭಿನ್ನರ ಹೇಳಿಕೆಯಿಂದಾಗಿ, ಕಾಂಗ್ರೆಸ್ ಸರ್ಕಾರದ ಎದುರು ಆಗುತ್ತಿರುವ ಮುಜುಗರವನ್ನು ಮೋದಿ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಗೆ ಯತ್ನಾಳ್ ಬಣ ಪಟ್ಟು ಹಿಡಿದಿದ್ದು, ಹೈಕಮಾಂಡ್ ಭೇಟಿಗೆ ಸಮಯ ಸಿಗದಿದ್ದಕ್ಕೆ ಯತ್ನಾಳ್ ನೇತೃತ್ವದ ರೆಬೆಲ್ಸ್​ ಟೀಂ ವಾಪಸ್ ಆಗಿತ್ತು. ಆದರೆ ಇದೀಗ ದಿಢೀರ್ ವಿಜಯೇಂದ್ರ ಮೋದಿಯವರನ್ನು ಭೇಟಿಯಾಗುವ ಮೂಲಕ ಪಕ್ಷದ ವರಿಷ್ಠರು ನನ್ನ ಪರವಾಗಿದ್ದಾರೆ ಎಂಬ ಸಂದೇಶವನ್ನು ವಿರೋಧಿಗಳಿಗೆ ರವಾನಿಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!