ಲಕ್ಷ್ಮಿ ಹೆಬ್ಬಾಳ್ಕಕರ್ - ಸಿಟಿ ರವಿ 
ರಾಜಕೀಯ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕಕರ್ ಗೆ ಅಶ್ಲೀಲ ಪದ ಬಳಕೆ: ಸಿಟಿ ರವಿ ವಿರುದ್ಧ ಸಭಾಪತಿಗೆ ದೂರು, ಪದಚ್ಯುತಿಗೆ ಆಗ್ರಹ

ಆಡಳಿತ ಪಕ್ಷದ ಸದಸ್ಯರು ಸಭಾಪತಿ ಕೊಠಡಿಗೆ ತೆರಳಿ, ಸಿಟಿ ರವಿ ವಿರುದ್ಧ ದೂರು ನೀಡಿದ್ದು, ಅವರನ್ನು ಸದಸ್ಯ ಸ್ಥಾನದಿಂದ ಪದಚ್ಯುತಿಗೊಳಿಸುವಂತೆ ಒತ್ತಾಯಿಸಿದ್ದಾರೆ.

ಬೆಳಗಾವಿ: ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅವಹೇನಕಾರಿ ಹೇಳಿಕೆ ಖಂಡಿಸಿ ಗುರುವಾರ ವಿಧಾನ ಪರಿಷತ್​ನಲ್ಲಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಿಜೆಪಿ ಸದಸ್ಯ ಸಿಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿದ ಆರೋಪ ಕೇಳಿಬಂದಿದೆ.

ಇಂದು ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ಅವಧಿ ಮುಗಿದ ನಂತರ ಶೂನ್ಯ ವೇಳೆಯಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ಆಡಳಿತ ಸದಸ್ಯರು ಧರಣಿಗೆ ಮುಂದಾದರು. ಕೂಡಲೇ ಅಮಿತ್ ಶಾ ಅವರನ್ನು ಬಂಧಿಸಿ, ರಾಜೀನಾಮೆ ಪಡೆಯುವಂತೆ ಕಾಂಗ್ರೆಸ್ ಸದಸ್ಯರು ಆಗ್ರಹಿಸಿದರು.

ಇದೇ ವೇಳೆ, ಬಿಜೆಪಿ ಸದಸ್ಯರು ಕೂಡ ಅಂಬೇಡ್ಕರ್ ಭಾವಚಿತ್ರ ಹಿಡಿದು ಅವರಿಗೆ ಅಪಮಾನ ಮಾಡಿದ್ದು ಕಾಂಗ್ರೆಸ್. ಅಂಬೇಡ್ಕರ್ ಅವರಿಗೆ ಭಾರತ ರತ್ನವನ್ನೂ ಅವರು ನೀಡಲಿಲ್ಲ ಎಂದು ಹರಿಹಾಯ್ದರು.

ಬಳಿಕ ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಎಂದು ಸಿ.ಟಿ.ರವಿ ಆರೋಪಿಸಿದರು. ಇದಕ್ಕೆ ಕೌಂಟರ್ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀವು ರಸ್ತೆ ಅಪಘಾತದಲ್ಲಿ ಇಬ್ಬರನ್ನು ಕೊಲೆ ಮಾಡಿದ್ದೀರಿ, ಹಾಗಾಗಿ, ನೀವು ಕೊಲೆಗಾರರು ಎಂದು ದೂರಿದರು. ಆಗ ಸಿ.ಟಿ. ರವಿ, ಅಶ್ಲೀಲ ಪದ ಬಳಸಿ, ನಿಮ್ಮನ್ನು ನಾನು ಹಾಗೆ ಕರೆಯೋಕೆ ಆಗುತ್ತಾ ಎಂದರು. ಇದರಿಂದ ಕೈ ಸದಸ್ಯರ ಪಿತ್ತ ನೆತ್ತಿಗೇರಿತು. ನಿಮ್ಮ ಮನೆಯಲ್ಲೂ ಹೆಣ್ಣು ಮಕ್ಕಳು ಇಲ್ಲವೇ? ನಿಮ್ಮ ತಾಯಿನೂ ಓರ್ವ ಹೆಣ್ಣು? ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಗದ್ದಲ ತೀವ್ರವಾಗುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಸದನವನ್ನು ಕೆಲಕಾಲ ಮುಂದೂಡಿದರು. ಬಳಿಕ ಆಡಳಿತ ಪಕ್ಷದ ಸದಸ್ಯರು ಸಭಾಪತಿ ಕೊಠಡಿಗೆ ತೆರಳಿ, ಸಿಟಿ ರವಿ ವಿರುದ್ಧ ದೂರು ನೀಡಿದ್ದು, ಅವರನ್ನು ಸದಸ್ಯ ಸ್ಥಾನದಿಂದ ಪದಚ್ಯುತಿಗೊಳಿಸುವಂತೆ ಒತ್ತಾಯಿಸಿದ್ದಾರೆ.

ದೂರು ಸ್ವೀಕರಿಸಿದ ಸಭಾಪತಿ ಹೊರಟ್ಟಿ ಅವರು, ಆಡಿಯೋ, ವಿಡಿಯೋ ಪರಿಶೀಲನೆಗೆ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT