ಡಿ.ಕೆ ಶಿವಕುಮಾರ್ 
ರಾಜಕೀಯ

ಬಿಜೆಪಿಗೆ ಮಾನ- ಮರ್ಯಾದೆ ಇಲ್ಲ; ಸಂಸ್ಕೃತಿ ಬಗ್ಗೆ ಮಾತನಾಡುವವರಿಂದ ಭಾರತ ಮಾತೆಗೆ ಅವಮಾನ: ಡಿ.ಕೆ ಶಿವಕುಮಾರ್

ಬಿಜೆಪಿ ನಾಯಕರು ಸದನದಲ್ಲಿ ನಡೆದುಕೊಂಡ ರೀತಿಗೆ ನಾಚಿಕೆಯಾಗಬೇಕು. ಯಾವಾಗಲು ಧರ್ಮ, ಸಂಸ್ಕೃತಿ ಬಗ್ಗೆ ಮಾತನಾಡುವ ಅವರು ಭಾರತ ಮಾತೆಗೆ, ಮಾತೃಭೂಮಿಗೆ ಅಪಮಾನ ಮಾಡಿದ್ದಾರೆ.

ಬೆಳಗಾವಿ: ಬಿಜೆಪಿ ಪಕ್ಷ ಹಾಗೂ ಅದರ ನಾಯಕರಿಗೆ ಮಾನ ಮರ್ಯಾದೆ ಇಲ್ಲ. ಬಿಜೆಪಿಯಿಂದ ಇಡೀ ದೇಶಕ್ಕೆ ಅವಮಾನ. ಆ ಪಕ್ಷಕ್ಕೆ ಇದು ಅವಮಾನ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿ ಸುವರ್ಣಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು, "ಬಿಜೆಪಿ ನಾಯಕರು ಸದನದಲ್ಲಿ ನಡೆದುಕೊಂಡ ರೀತಿಗೆ ನಾಚಿಕೆಯಾಗಬೇಕು. ಯಾವಾಗಲು ಧರ್ಮ, ಸಂಸ್ಕೃತಿ ಬಗ್ಗೆ ಮಾತನಾಡುವ ಅವರು ಭಾರತ ಮಾತೆಗೆ, ಮಾತೃಭೂಮಿಗೆ ಅಪಮಾನ ಮಾಡಿದ್ದಾರೆ. ಶಾಸಕ ಮುನಿರತ್ನ ವಿಚಾರದಲ್ಲಿಯೂ ಬಿಜೆಪಿ ಹೀಗೆ ವರ್ತನೆ ಮಾಡಿತು" ಎಂದು ಕಿಡಿಕಾರಿದರು.

ಸರ್ಕಾರ ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುವುದೇ ಎಂದು ಕೇಳಿದಾಗ, "ಕಾನೂನೇ ಅವರ ಮೇಲೆ ಕ್ರಮ ತೆಗೆದುಕೊಳ್ಳಲಿದೆ, ಸರ್ಕಾರವಲ್ಲ" ಎಂದು ತಿಳಿಸಿದರು. ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿ, "ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಪದ ಬಳಕೆ ಪ್ರಕರಣದಲ್ಲಿ ಸಿ.ಟಿ.ರವಿ ಬಂಧನ ವಿಷಯವನ್ನು ಪೊಲೀಸ್ ಇಲಾಖೆ ಮತ್ತು ನ್ಯಾಯಾಲಯ ನೋಡಿಕೊಳ್ಳುತ್ತದೆ" ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?

BJP ತೊರೆಯಲು ಕಾರಣ ಬಹಿರಂಗಪಡಿಸಿದ Annamalai; ಮಾಜಿ ಐಪಿಎಸ್ ಅಧಿಕಾರಿ ಹೇಳಿದ್ದೇನೆಂದರೆ

SIR ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಗೆ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು: ಸಿಎಂ ಶಿವಕುಮಾರ್ ಗೆ ಪ್ರಕಾಶ್ ರಾಜ್ ಮನವಿ